AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಜವಾಬ್ದಾರಿ ಅಧಿಕವಾಗಿದ್ದು, ಅವರ ನಂಬಿಕೆಯ ಮೇಲೆ ಹೂಡಿಕೆ ಮಾಡುವರು

Horoscope Today 06 August: ಆಗಸ್ಟ್ 06, 2026 ರ ನಿತ್ಯ ಭವಿಷ್ಯವು ಪ್ರತಿ ರಾಶಿಯವರಿಗೆ ಪ್ರಮುಖ ಮಾರ್ಗದರ್ಶನ ನೀಡುತ್ತದೆ. ಇಂದು ಜವಾಬ್ದಾರಿಗಳು ಹೆಚ್ಚಿದ್ದು, ನಂಬಿಕೆಯ ಮೇಲೆ ಹೂಡಿಕೆ ಮಾಡುವ ಸಂದರ್ಭ ಬರಲಿದೆ. ವಿರೋಧಗಳು, ನಿರ್ಧಾರಗಳಲ್ಲಿ ವಿಳಂಬ, ಹಾಗೂ ಅನಿರೀಕ್ಷಿತ ಸವಾಲುಗಳ ಎಚ್ಚರಿಕೆ ಇದೆ. ಆರ್ಥಿಕ ನಿರ್ಧಾರಗಳು, ಸಂಬಂಧಗಳು ಮತ್ತು ವೈಯಕ್ತಿಕ ಬೆಳವಣಿಗೆಗೆ ಸಂಬಂಧಿಸಿದ ನಿರ್ದಿಷ್ಟ ಸಲಹೆಗಳನ್ನು ತಿಳಿಯಿರಿ.

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಜವಾಬ್ದಾರಿ ಅಧಿಕವಾಗಿದ್ದು, ಅವರ ನಂಬಿಕೆಯ ಮೇಲೆ ಹೂಡಿಕೆ ಮಾಡುವರು
ಸಾಂದರ್ಭಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Aug 06, 2026 | 3:34 AM

Share

ಶಾಲಿವಾಹನ ಶಕವರ್ಷ 1949ರ ದಕ್ಷಿಣಾಯನ, ಗ್ರೀಷ್ಮ ಋತುವಿನ ಆಷಾಢ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಗುರುವಾರದಂದು ಕ್ರಿಯಾಶೀಲತೆ, ನಿಮ್ಮ ಸುತ್ತಲೂ ವಿರೋಧ, ಗಣ್ಯರ ಭೇಟಿ, ವಿಳಂಬ ನಿರ್ಣಯ, ಅಧ್ಯಾತ್ಮದಲ್ಲಿ ನಿರಾಸಕ್ತಿ, ಗೆಲುವಿನ ನಡೆ, ಕೆಟ್ಟ ಕನಸು ಇವೆಲ್ಲ ಈ ದಿನದ ಭವಿಷ್ಯ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ದಕ್ಷಿಣಾಯನ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಕರ್ಕಾಟಕ, ಮಹಾನಕ್ಷತ್ರ : ಆಶ್ಲೇಷಾ, ವಾರ : ಗುರು, ಪಕ್ಷ : ಕೃಷ್ಣ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಕೃತ್ತಿಕಾ, ಯೋಗ : ಧ್ರುವ, ಕರಣ : ತೈತಿಲ, ಸೂರ್ಯೋದಯ – 06 – 07 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 14:00 – 15:35, ಯಮಗಂಡ ಕಾಲ 06:07 – 07:42, ಗುಳಿಕ ಕಾಲ 09:16 – 10:51

ಮೇಷ ರಾಶಿ :

ನಿಮ್ಮ ಹಣವು ಹೋಗಬೇಕಾದ ವ್ಯಕ್ತಿಗೆ ಹೋಗದೇ ತಪ್ಪಿ ಇನ್ನೊಬ್ಬರಿಗೆ ಹೋಗಿ ನಿಮಗೆ ತೊಂದರೆ ಆದೀತು. ಹಿರಿಯರ ಮಾತಿಗೆ ಅಗೌರವ ಬೇಡ.‌ ಸಮೂಹದಲ್ಲಿ ಇರುವಾಗ ಎಲ್ಲರ ಮಾತಿಗೂ ಬೆಲೆ ಕೊಡಬೇಕಾಗುವುದು. ಒಂದು ಉದ್ಯೋಗದಲ್ಲಿ ಮನವು ಸ್ಥಿರವಾಗಿರಲಿ. ಧನಾಗಮನದ ನಿರೀಕ್ಷೆಯಲ್ಲಿ ನೀವಿರುವಿರಿ. ಸತ್ಯಾಸತ್ಯತೆಗಳ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಸಿಗದೇ ಇದ್ದೀತು. ಪತ್ನಿಯ ಸಹಕಾರವನ್ನು ಅತಿಯಾಗಿ ತೆಗದುಕೊಳ್ಳುವುದು ಬೇಡ.

ವೃಷಭ ರಾಶಿ :

ನಿಮಗೆ ಅಸ್ಪಷ್ಟ ಮಾಹಿತಿಗಳು ನಿಮ್ಮ ದಿಕ್ಕು ತಪ್ಪಿಸಬಹುದು. ಅದೃಷ್ಟವನ್ನು ಹುಡುಕುತ್ತಿದ್ದರೆ ಅದಕ್ಕೆ ನಿಮ್ಮ ಅನುವರ್ತಿತ್ವವೂ ಇರಲಿ. ಅತಿಯಾದ ಪ್ರಯಾಣದಿಂದ ಆಯಾಸ ಮತ್ತು ಒತ್ತಡಗಳು ನಿರ್ಮಾಣವಾಗುವುದು. ಹಣದಿಂದ ಮನೆಯನ್ನು ಖದೀದಿಸಬಹುದು ನೆಮ್ಮದಿ, ಸಂತೋಷ, ಬಾಂಧವ್ಯವನ್ನಲ್ಲ. ನೀವು ಇಂದು ಮಿತ ಬಳಕೆಯನ್ನು ಇಷ್ಟೊಡವಹುದು. ಭೂಮಿಯ ವ್ಯವಹಾರವನ್ನು ಒಬ್ಬೊಂಟಿಯಾಗಿ ನಿರ್ವಹಿಸುವಿರಿ.

ಮಿಥುನ ರಾಶಿ :

ಅಧಿಕಾರವನ್ನು ನಡೆಸಲು ಕೇವಲ ಬುದ್ಧಿ ಜ್ಞಾನ ಸಾಲದು. ಎದೆಗಾರಿಕೆ ಹಾಗೂ ತಂತ್ರವೂ ಬೇಕು. ನಿಯಮಗಳು ನಿಮಗೆ ತೊಂದರೆಯಾದೀತು. ಅದನ್ನು ಮುರಿಯಲು ನೀವು ಪ್ರಯತ್ನಿಸಬಹುದು.‌ ನಿಮಗೆ ಮಾರ್ಗದರ್ಶನ ಮಾಡಲು ಯಾರಾದರೂ ಬರಬಹುದು. ನಿಮ್ಮ ಮಾತನ್ನು ಯಾರೂ ಕೇಳದೇಹೋಗಬಹುದು. ಸಕಾರಾತ್ಮಕ ವಿಷಯಗಳು ವೇಗವನ್ನು ಪಡೆಯುತ್ತವೆ.‌ ಮಕ್ಕಳಿಗಾಗಿ ನೀವು ಹೊಸ ವಾಹನವನ್ನು ಖರೀದಿಸಬಹುದು.

ಕರ್ಕಾಟಕ ರಾಶಿ :

ನಿಮ್ಮ ಎಲ್ಲ ಕಾರ್ಯವನ್ನೂ ಗಮನಿಸುವರು. ಇಂದು ನಿಮಗೆ ಬೆಳಗ್ಗೆಯಿಂದ ಮನಸ್ಸು ಜಾಡ್ಯದಿಂದ ಇರಲಿದೆ. ಸ್ವಾಭಿಮಾನದ ವಿಚಾರಕ್ಕೆ ಬಂದರೆ ನೀವು ಬಹಳ ನಿಷ್ಠುರರು.‌ ಯಾರ ಸಹಾಯವನ್ನೂ ಬಾಯೊಡೆದು ಕೇಳುವ ಜಾಯಮಾನವಲ್ಲ. ಅತಿಯಾದ ಆಯಾಸವು ನಿಮ್ಮನ್ನು ವಿಶ್ರಾಂತಿಗೆ ತಳ್ಳಬಹುದು. ಈ ದಿನ ಬೇಸರ ಎನಿಸಿದರೆ ಹೊರಗೆ ಒಂಟಿಯಾಗಿ ಸುತ್ತಾಡಿ ಬನ್ನಿ.‌ ಅಪರಿಚಿತರ ನಂಬಿ ವ್ಯವಹಾರವನ್ನು ಮಾಡಲು ಯೋಜಿಸುವುದು ಬೇಡ.

ಸಿಂಹ ರಾಶಿ :

ಹೊಸ ಉದ್ಯಮಕ್ಕೆ ಬಂಡವಾಳ ಹಾಕುವುದು ಸದ್ಯ ಮುಂದುವರಿಯುವುದು ಬೇಡ. ನ್ಯಾಯಾಲಯದ ಮೆಟ್ಟಲೇರುವ ಸಂದರ್ಭವನ್ನು ನೀವು ತಂದುಕೊಳ್ಳುವುದು ಬೇಡ. ಬೆಟ್ಟ ಗುಡ್ಡಗಳನ್ನು ಸುತ್ತುವುದು ನಿಮಗೆ‌ ಪ್ರಿಯವಾದ ಸಂಗತಿಯಾದೀತು. ಒತ್ತಡಗಳಿಗೆ ಸಿಲುಕಿ ಅಧಿಕಾರವನ್ನು ದುರುಪಯೋಗ ಮಾಡಿಕೊಳ್ಳುವುದು ಬೇಡ. ಮನೆಯಲ್ಲಿಯೇ ವಾಸಿಸುವವರು ಸಣ್ಣ ಆದಾಯದ ಬಗ್ಗೆ ಆಲೋಚಿಸುವರು. ಯಾರಾದರೂ ಮುಖಸ್ತುತಿಯನ್ನು ಮಾಡಬಹುದು.

ಕನ್ಯಾ ರಾಶಿ :

ಇಂದು ಮನೆಯ ಸಣ್ಣ ಖರ್ಚುಗಳೂ ದೊಡ್ಡದಾದ ಮೊತ್ತವನ್ನು ಕಳೆಯುವುದು. ನಿಮಗೆ ದಂಪತಿಯ ಜೊತೆ ಪುಣ್ಯಸ್ಥಳಗಳ ಭೇಟಿ ಮಾಡುವ ಬಯಕೆ ಇರಲಿದೆ. ಭೂಮಯಿಂದ ಪಡೆಯುವ ವಸ್ತುಗಳ ಮಾರಾಟಕ್ಕೆ ಶ್ರಮ ಹೆಚ್ಚು ಬೇಕಾಗುವುದು. ಪತ್ನಿಗಾಗಿ ಅಚ್ಚರಿಯ ಉಡುಗೊರೆಯೊಂದನ್ನು ನೀವು ಕೊಡುವಿರಿ.‌ ನಿಮ್ಮ ವರ್ತನೆಯನ್ನು ಗಮನಿಸುತ್ತಿರಬಹುದು. ವೈದ್ಯವೃತ್ತಿಯನ್ನು ಬಹಳ ನಾಜೂಕಾಗಿ ಮಾಡಬೇಕಾಗುವುದು. ಹಿರಿಯರು ನಿಮ್ಮ‌ ಬಗ್ಗೆ ವ್ಯಂಗ್ಯವಾಗಿ ಮಾತನಾಡಬಹುದು.

ತುಲಾ ರಾಶಿ :

ಭೂಮಿ ವ್ಯವಹಾರದಲ್ಲಿ ಅನಿರೀಕ್ಷಿತ ಆದಾಯವು ಆಗುವುದು. ನೀವು ಅನುಮಾನ ಬರುವಂತಹ ವರ್ತನೆಯನ್ನು ತೋರಿಸುವಿರಿ. ಸ್ವಲ್ಪ ಕಾಲದ ಏನನ್ನೂ ಯೋಚಿಸದೇ ಇರಲು ಪ್ರಯತ್ನಿಸಿ. ನಿಮ್ಮ‌ ಕೆಲಸವು ಮಂದಗತಿಯಲ್ಲಿ ಸಾಗಬಹುದು. ಮನೆಯ ನಿರ್ಮಾಣವೂ ನಿಧಾನವಾಗಿ ನಿಮಗೆ ಬೇಸರವಾದೀತು‌. ಪಕ್ಷಪಾತ ಧೋರಣೆಯನ್ನು ನೀವು ಬಿಟ್ಟರೆ ಮಾತ್ರ ಒಳ್ಳೆಯದು. ಕೆಲವು ಜನರ ಭೇಟಿಯು ನಿಮಗೆ ಖುಷಿ ಕೊಡುವುದು. ಹೂಡಿಕೆಯ ವಿಚಾರದಲ್ಲಿ ಸಮಸ್ಯೆಯಾಗಬಹುದು. ಕಾನೂನಿನ ತೀರ್ಮಾನಕ್ಕೆ ತಲೆಬಾಗುವುದು ಸೂಕ್ತ.

ವೃಶ್ಚಿಕ ರಾಶಿ :

ಇಂದು ನಿಮ್ಮ ಕಲ್ಪನೆಯಂತೆ ಬದುಕು ನಡೆಯದು ಎಂಬ ಸತ್ಯ ತಿಳಿಯುವುದು. ದೂರಪ್ರಯಾಣ ಸುಖಕರವಾಗಿ ಇರುವಿದಾದರೂ ಅನಂತರ ಕಷ್ಟಪಡಬೇಕಾದೀತು. ನೀವು ಇಂದು ಕುಟುಂಬದ ವೃತ್ತಿಯಲ್ಲಿ ಮುಂದುವರಿಯುವ ಆಸೆ ಬರುವುದು. ಅನ್ಯರಿಗೆ ತೋರಿದ ಸಹಾನುಭೂತಿಯಿಂದ ನಿಮಗೇ ವಂಚನೆ. ಯಾರನ್ನೂ ಅವಲಂಬಿಸುವುದು ನಿಮಗೆ ಕಷ್ಟವಾಗುವುದು. ಕಾದಾಟದಿಂದ ಸಮಯವು ವ್ಯರ್ಥವಾಗಲಿದೆ. ಬೇಸರದ ಮಾತಿನಿಂದ ಆಪ್ತರನ್ನು ದೂರ ಮಾಡಿಕೊಳ್ಳುವಿರಿ.

ಇದನ್ನೂ ಓದಿ: ಈ ರಾಶಿಗೆ ಸೂರ್ಯನ ಆಗಮನ, ಈ ರಾಶಿಗಳಿಗೆ ಸೂರ್ಯನ ಬೆಳಕು…?

ಧನು ರಾಶಿ :

ಮನೆಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗುತ್ತದೆ. ಯಾರ ಬಗ್ಗೆಯೂ ತಿಳಿಯದೇ ಮಾತನಾಡುವುದು ನಿಮಗೆ ಉಚಿತವಲ್ಲ. ವಂಚನೆಗೆ ನೀವು ಬೆಲೆಯನ್ನು ಕೊಡಬೇಕಾದೀತು. ಇಂದಿನ ಕೆಲವು ಅಂಶಗಳು ನಿಮಗೆ ಪಾಠವಾಗಲಿವೆ. ನೀವು ಇಂದು ಬಯಸಿದ್ದನ್ನು ಪಡೆದುಕೊಂಡು ನೆಮ್ಮದಿಯಾಗಿ ಇರುವಿರಿ. ತಂದೆಯಿಂದ ಸಹಕಾರವನ್ನು ಪಡೆಯುವಿರಿ. ನಿಮ್ಮ ನೇರ ಮಾತಿನಿಂದ ತೊಂದರೆ ಆಗಬಹುದು. ಪ್ರೇಮದಲ್ಲಿ ಯಾರನ್ನಾದರೂ ನಿಮ್ಮವರನ್ನಾಗಿ ಮಾಡಿಕೊಳ್ಳುವ ಕಲೆ ನಿಮಗೆ ತಿಳಿಯದು.

ಮಕರ ರಾಶಿ :

ನೀವು ಸಣ್ಣ ಬುದ್ಧಿಯನ್ನು ಬಿಟ್ಟು ವ್ಯವಹರಿಸಿದರೆ ವ್ಯಾಪರಕ್ಕೆ ಅನುಕೂಲವಿದೆ. ಅನೇಕ ಶುಭಸೂಚನೆಗಳು ನಿಮಗೆ ಕಾಣಿಸುವುದು. ನಿಮ್ಮದೇ ಹಣವಾದರೂ ನೀವು ಅದನ್ನು ಪಡೆಯಲು ಓಡಾಟ ಮಾಡಬೇಕಾದೀತು. ನಿಮಗೆ ಹೇಳಿದ ಕಾರ್ಯವನ್ನು ಶ್ರದ್ಧೆಯಿಂದ ಮಾಡುವಿರಿ. ಪಾಲುದಾರಿಕೆಯಲ್ಲಿ ಸಣ್ಣ ವಿಷಯವನ್ನೂ ಗಂಭೀರವಾಗಿ ಪರಿಹಣಿಸುವಿರಿ. ಸಹೋದ್ಯೋಗಿಗಳ ಕಿರಿಕಿರಿಯಿಂದ ಉದ್ಯೋಗವನ್ನು ಬದಲಿಸುವಿರಿ.

ಕುಂಭ ರಾಶಿ :

ಇಂದು ನಿಮ್ಮ ಕೆಲವು ಮಾತುಗಳು ಬೇರೆಯವರು ಆತುರದ ನಿರ್ಧಾರವನ್ನು ತೆಗದುಕೊಳ್ಳುವಂತೆ ಮಾಡಬಹುದು. ಇಂದು ನಿಮ್ಮ ಸ್ನೇಹ ಸಂಬಂಧವು ಸಡಿಲಾಗುವ ಸಾಧ್ಯತೆ ಇದೆ. ಅಗ್ನಿ, ವಿದ್ಯುತ್ ಗಳಿಗೆ ಸಂಬಂಧಿಸಿದ ವಿಚಾರದಲ್ಲಿ ಜಾಗರೂಕತೆ ಇರಲಿ. ಹೊಸ ವಿಚಾರದ ಸಾಹಿತ್ಯ ಸಂಪಾದನೆಗೆ ತೊಡಗುವಿರಿ. ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು. ವ್ಯಾಪಾರ ಮಾಡುವ ಜನರ ಜೊತೆ ಸೇರಿ ಕೆಲವು ಕೆಲಸಗಳನ್ನು ಮಾಡಲು ಅವಕಾಶವಿದೆ.

ಮೀನ ರಾಶಿ :

ಧಾರ್ಮಿಕ ಕಾರ್ಯಗಳಿಂದ ಉತ್ತಮ‌ ಯಶಸ್ಸು ಪ್ರಾಪ್ತಿಯಾಗುವುದು. ನೀರಿನ ಸೇವೆನೆಯಿಂದ ಆರೋಗ್ಯ ಸುಧಾರಣೆ ಸಾಧ್ಯತೆ. ನಿಮಗೆ ತೋರಿದ ಪ್ರೀತಿಯನ್ನು ಉಳಿಸಿಕೊಳ್ಳಬೇಕಾಗುವುದು. ತೆರಿಗೆಗೆ ಸಂಬಂಧಿಸಿದಂತೆ ನಿಮ್ಮ ದಾಖಲೆಗಳು ಸರಿಯಾಗಿರಲಿ. ಆರೋಗ್ಯವು ಹದವು ತಪ್ಪಬಹುದು. ವಾಹನಕ್ಕಾಗಿ ಖರ್ಚನ್ನು ಮಾಡಬೇಕಾದೀತು. ನಿಮ್ಮ ಸಣ್ಣ ಮನಸ್ಸನ್ನು ಅವರಿಗೆ ತೋರಿಸಬೇಡಿ. ಉನ್ನತ ಅಧ್ಯಯನವನ್ನು ಬಯಸಿ ಬೇರೆ ಕಡೆಗೆ ತೆರಳುವಿರಿ.

-ಲೋಹಿತ್ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us