AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಒಂಟಿಯಾಗಿ ಇರಲು ಇಂದು ಹೆಚ್ಚು ಇಷ್ಟಪಡಬಹುದು, ಕೆಲಸದ‌ ಕಡೆ ಗಮನಕೊಡಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 06) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರು ಒಂಟಿಯಾಗಿ ಇರಲು ಇಂದು ಹೆಚ್ಚು ಇಷ್ಟಪಡಬಹುದು, ಕೆಲಸದ‌ ಕಡೆ ಗಮನಕೊಡಿ
ಇಂದಿನ ದಿನಭವಿಷ್ಯImage Credit source: istock
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಆಯೇಷಾ ಬಾನು|

Updated on: Aug 06, 2023 | 6:55 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ಪಂಚಮೀ, ನಿತ್ಯನಕ್ಷತ್ರ: ರೇವತಿ, ಯೋಗ: ಅತಿಗಂಡ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 58 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 05: 23 ರಿಂದ 06:58ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:38 ರಿಂದ 02:13ರ ವರೆಗೆ, ಗುಳಿಕ ಕಾಲ ಬೆಳಗ್ಗೆ 03:48 ರಿಂದ 05:23ರ ವರೆಗೆ.

ಮೇಷ: ಭವಿಷ್ಯದ ಬಗ್ಗೆ ನಿಮಗಿರುವ ಕಲ್ಪನೆಯು ಬದಲಾಗಬಹುದು. ‌ಹಣಕಾಸಿನ ವಿಚಾರದಲ್ಲಿ ನೀವು ಬಹಳ ಕಾಳಜಿಯನ್ನು ವಹಿಸಬೇಕಾಗುವುದು. ವಾಹನಕ್ಕಾಗಿ ಖರ್ಚು ಮಾಡುವ ಸ್ಥಿತಿಯು ಬರಬಹುದು. ಸಹಾಯವನ್ನು ಯಾರಾದರೂ ಕೇಳುವರು. ಒಂಟಿಯಾಗಿ ಇರಲು ನೀವು ಇಂದು ಹೆಚ್ಚು ಇಷ್ಟಪಡಬಹುದು. ಏನನ್ನಾದರೂ ಯೋಚಿಸುವ ಬದಲು ಆಗಬೇಕಾದ ಕೆಲಸದ‌ ಕಡೆ ಗಮನಕೊಡುವುದು ಮುಖ್ಯವಾಗುವುದು.

ವೃಷಭ: ಬಂಧುಗಳ ವಿಚಾರದಲ್ಲಿ ನಿಮಗೆ ಸಂಪೂರ್ಣ ಮನಸ್ಥಿತಿಯು ಏಕರೂಪವಾಗಿ ಇರಲಾರದು. ಸಂಬಂಧಗಳನ್ನು ಸಡಿಲ‌ಮಾಡಿಕೊಳ್ಳುವಿರಿ. ನಿಮ್ಮ ವರ್ತನೆಯಿಂದ ನಿಮ್ಮನ್ನು ನೋಡುವ ಕ್ರಮವು ಬದಲಾದೀತು. ಮುಖದಲ್ಲಿ ನಗುವುದು ನಿಮ್ಮ ಎಲ್ಲ ಕೆಲಸಗಳನ್ನು ಮಾಡಿಸಿಕೊಡುವುದು. ಇನ್ನೊಬ್ಬರ ಸುಖಕ್ಕಾಗಿ ನೀವು ಸುಖವನ್ನು ತ್ಯಾಗಮಾಡಬೇಕಾಗುವುದು. ಜ್ಞಾನದ ಬಗ್ಗೆ ನಿಮಗೆ ಅರಿವು ಕಡಿಮೆ ಇರುವುದು ಗೊತ್ತಾಗುವುದು.

ಮಿಥುನ ರಾಶಿ: ಆರ್ಥಿಕ ಮೂಲವು ಕೈತಪ್ಪಿ ಹೋಗಬಹುದು. ಕನಸನ್ನು ನನಸಾಗಿಸಲು ನಿಮ್ಮ ಪ್ರಯತ್ನ ಅತಿಮುಖ್ಯವಾಗುವುದು. ಎಲ್ಲವೂ ಸರಿಯಿದ್ದರೂ ಮತ್ತೆಲ್ಲೋ ತಪ್ಪನ್ನು ಕಂಡುಕೊಳ್ಳುವಿರಿ. ನಿಮ್ಮ‌ ನಿಯಮವನ್ನು ಪಾಲಿಸಿದ್ದು ನಿಮಗೆ ಖುಷಿ ಕೊಡಬಹುದು. ನಿಮಗೆ ಒತ್ತಡದಲ್ಲಿ ಕೆಲಸ ಮಾಡುವುದು ಅಭ್ಯಾಸವಾಗಿ ಹೋಗಿದೆ. ತಾಯಿಯಿಂದ ಅತಿಯಾದ ಸಹಕಾರವನ್ನು ಬಯಸುವಿರಿ. ಜನರ ಜೊತೆ ಬೆರೆಯಲು ನಿಮಗೆ ಇಂದು ಸಮಯ ಸಾಕಾಗದು. ಸಂಗಾತಿಯನ್ನು ನೀವು ಖುಷಿ‌ಪಡಿಸಲು ಎಲ್ಲಿಗಾದರೂ ಕರೆದುಕೊಂಡು ಹೋಗುವಿರಿ.

ಕಟಕ ರಾಶಿ: ಸುಖವಾಗಿರಲು ಬೇಕಾದ ಎಲ್ಲ ಮಾರ್ಗಗಳನ್ನು ಹುಡುಕುವಿರಿ. ಗೊತ್ತಿಲ್ಲದೇ ಮಾತನಾಡುವುದು ನಿಮಗೆ ಶೋಭೆ ತರದು. ವಂಚನೆಯ ಬಲೆಯಲ್ಲಿ ನೀವು ಸಿಕ್ಕಿಕೊಳ್ಳಬಹುದು. ಹಿರಿಯರಿಗೆ ಗೌರವವನ್ನು ಸಲ್ಲಿಸಿ. ನಿಮ್ಮವರನ್ನು ರಕ್ಷಿಸಿಕೊಳ್ಳಲು ಬಹಳ ಪ್ರಯತ್ನ ಪಡುವಿರಿ. ನೀವು ಬಯಸಿದ್ದನ್ನು ಪಡೆದುಕೊಂಡು ನೆಮ್ಮದಿಯಾಗಿ ಇರಲಾರಿರಿ. ಮನೆಯವರ ವೈರವನ್ನು ಕಟ್ಟಿಕೊಂಡು ಏನು ಸಾಧಿಸುವಿರಿ.‌ ಸಂಗಾತಿಯ ಪ್ರೀತಿಯನ್ನು ನೀವು ಉಳಿಸಿಕೊಳ್ಳಲು ಪ್ರಯತ್ನಿಸುವಿರೊ. ನಿಮ್ಮ ಮನಸ್ಸೂ ಇಂದು ಹಗುರಾದೀತು. ವಿದ್ಯಾರ್ಥಿಗಳು ಓದಿನ ಬಗ್ಗೆ ಆಸಕ್ತಿಯು ಕಡಿಮೆ ಆಗಬಹುದಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ