AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯ ರಾಜಕೀಯ ವ್ಯಕ್ತಿಗಳು ಬೆಂಬಲಿಗರನ್ನು ಕಳೆದುಕೊಳ್ಳುವ ಸಾಧ್ಯತೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 03) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯ ರಾಜಕೀಯ ವ್ಯಕ್ತಿಗಳು ಬೆಂಬಲಿಗರನ್ನು ಕಳೆದುಕೊಳ್ಳುವ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 03, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 03 ಶುಕ್ರವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಆರ್ದ್ರಾ, ಯೋಗ: ಐಂದ್ರ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 29 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 10:49 ರಿಂದ ಮಧ್ಯಾಹ್ನ 12:16 ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:09 ರಿಂದ 04:36 ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 07:56 ರಿಂದ 09:23ರ ವರೆಗೆ.

ಮೇಷ ರಾಶಿ: ಸ್ನೇಹಿತರ ಜೊತೆ ಪಾಲುದಾರಿಕೆಯಲ್ಲಿ ಸೇರಿಕೊಳ್ಳುವಿರಿ. ನಿಮ್ಮ ಕಾರ್ಯವನ್ನು ಮಿತ್ರರ ಮೂಲಕ ಮಾಡಿಕೊಳ್ಳುವಿರಿ. ನಿರ್ದಿಷ್ಟ ಸಮಯಕ್ಕೆ ಆಗುವ ಕೆಲಸವು ಸಮಯದ ಮಿತಿಯನ್ನು ಮೀರಬಹುದು. ಅಪರಿತ ಕರೆಗಳಿಂದ ನಿಮಗೆ ಸಂಕಟವಾಗಬಹುದು. ಇಂದಿನ ಆಲಸ್ಯವು ನಿಮಗೆ ಯಾವ ಕೆಲಸಗಳಿಗೂ ಉತ್ಸಾಹವೇ ಇರದು. ಶತ್ರುಗಳ ಭಯವು ಕಾರ್ಯವನ್ನು ನಿಧಾನ ಮಾಡಿಸುವುದು. ನಿಮ್ಮ ಒತ್ತಡಗಳನ್ನು ಮರೆತು ನಿಶ್ಚಿಂತೆಯಿಂದ ದಿನವನ್ನು ಕಳೆಯುವಿರಿ. ನಿಮ್ಮ ನೌಕರರಿಂದ ಇಂದಿನ‌ ಕೆಲವು ಜವಾಬ್ದಾರಿಯನ್ನು ಕೊಡುವಿರಿ. ಸಂಗಾತಿಯು ಕಡೆಗಣನೆಗೆ ನಿಮ್ಮ ಮೇಲೆ ಬೇಸರವಾಗಬಹುದು. ತಂದೆ ತಾಯಿಗಳನ್ನು ಪುಣ್ಯಕ್ಷೇತ್ರಗಳಿಗೆ ಕಳುಹಿಸುವಿರಿ.

ವೃಷಭ ರಾಶಿ: ದೂರ ಪ್ರಯಾಣದಿಂದ ಆರೋಗ್ಯವು ಕೆಡಬಹುದು. ಪುಣ್ಯಸ್ಥಳಗಳ ಭೇಟಿಯಿಂದ ಖುಷಿಯಾಗುವುದು. ಸಾಹಿತ್ಯ ಆಸಕ್ತರಿಗೆ ಉತ್ತಮ ಅವಕಾಶಗಳು ಸಿಗುವುದು. ಸ್ವಂತ ವಾಹನದ ದುರಸ್ತಿಯಿಂದ ಧನ ನಷ್ಟ. ನಿಮ್ಮ ಸಲಹೆಯನ್ನು ಕೇಳದಿರುವುದು ಇಷ್ಟವಾಗದು. ನೌಕರರು ನಿಮ್ಮ ಮೇಲೆ‌ ಸಿಟ್ಟಾಗಬಹುದು. ಸೌಕರ್ಯಕ್ಕೆ ತಕ್ಕ ಹಾಗೆ ದಿನಚರಿಯನ್ನು ಬದಲಿಸಿ. ಪ್ರಭಾವೀ ವ್ಯಕ್ತಿಗಳಿಂದ ನಿಮ್ಮ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಇಂದು ನಿಮ್ಮ ಸಂಗಾತಿಯಿಂದ ಭವಿಷ್ಯಕ್ಕೆ ಸಲಹೆಯು ಸಿಗಬಹುದು.‌ ನಿಮ್ಮ ಮನೆ ನಿರ್ಮಾಣದ ಕೆಲಸವು ಅರ್ಧಕ್ಕೆ ನಿಲ್ಲಬಹುದು. ಸತ್ಕಾರ್ಯಕ್ಕೆ ನಿಮ್ಮಿಂದ ಕೊಡುಗೆ ಇರುವುದು.

ಮಿಥುನ ರಾಶಿ: ಕೆಲಸಗಳು ಪೂರ್ಣವಾಗದೇ ಇರುವುದು ನಿಮಗೆ ಆಂತಕವಾಗಬಹುದು. ಜವಾಬ್ದಾರಿಯ ಕೆಲಸವನ್ನು ಜಾಗರೂಕತೆಯಿಂದ ಮಾಡಿ. ದಾಂಪತ್ಯದ ಕಲಹವು ಮುಕ್ತಾಯವಾಗುವುದು. ಹೊಸ ಕೆಲಸಗಳನ್ನು ನಿರ್ವಹಿಸಲು ಧೈರ್ಯ ಸಾಲದು. ವಿದ್ಯಾರ್ಥಿಗಳು ಉನ್ನತ ವಿದ್ಯಾಭ್ಯಾಸದಲ್ಲಿ ಉತ್ತಮ‌ಫಲಿತಾಂಶವನ್ನು ಪಡೆಯುವರು. ಆಕಸ್ಮಿಕ ಧನಲಾಭದಿಂದ ನಿಮಗೆ ಖುಷಿಯಾಗುವುದು. ಹಿರಿಯರ ಬಗ್ಗೆ ನಿಮಗೆ ಪೂಜ್ಯ ಭಾವವು ಬರಬಹುದು. ನಿಮ್ಮವರ ಧನ ಸಹಾಯವನ್ನು ಕೇಳಲು ಮುಜುಗರವಾದೀತು. ಅನ್ಯ ಚಿಂತೆಯಿಂದ ನಿದ್ರೆಗೆ ಭಂಗ. ಅನವಶ್ಯಕ ಮಾತುಗಳಿಂದ ವಿವಾದವಾಗುವುದು. ಹಂಚಿಕೊಂಡು ಮಾಡುವ ಕೆಲಸವು ವೇಗವಾಗಿ ಮುಗಿಯುವುದು.

ಕಟಕ ರಾಶಿ: ಅಧಿಕಾರಿಗಳ ವರ್ಗದವರು ನಿಮ್ಮ‌ ವ್ಯವಹಾರದ ಮೇಲೆ‌ ಕಣ್ಣಿಡುವರು. ರಾಜಕೀಯ ವ್ಯಕ್ತಿಗಳು ಬೆಂಬಲಿಗರನ್ನು ಕಳೆದುಕೊಳ್ಳಬಹುದು. ನೀವಾಡುವ ಸುಳ್ಳು ಎಲ್ಲರಿಗೂ ಗೊತ್ತಾದೀತು. ನಿದ್ರೆಯಿಂದ ಆಲಸ್ಯವು ಹೆಚ್ಚಾಗುವುದು. ಹಣಕಾಸಿನ ವ್ಯವಹಾರದಲ್ಲಿ ಮಿತ್ರರ ಜೊತೆ ಕಲಹವಾಗಬಹುದು. ಸಂಗಾತಿಯಿಂದ ಬಲವಂತವಾಗಿ ಉಡುಗೊರೆ ಪಡೆಯುವಿರಿ. ಸ್ತ್ರೀಯರಿಗೆ ಇಂದು ಸಂತೋಷದ ದಿನ. ಎಲ್ಲರೆದುರೂ ಸಿಟ್ಟಿನಿಂದ ಕೂಗಾಡುವುದು ಬೇಡ.‌ ಪೋಷಕರು ವಿದ್ಯಾಭ್ಯಾಸದ ಪ್ರಗತಿಯನ್ನು ಪರಿಶೀಲಿಸುವುದು ಅವಶ್ಯ. ನೆರಮನೆಯರ ಜೊತೆ ಮಾತಿಗೆ ಮಾತು ಬೆಳೆದು ಕಲಹವಾಗಬಹುದು. ನಿಮ್ಮ ವಸ್ತುವಿನ ಮೇಲೆ‌ ವ್ಯಾಮೋಹವು ಅಧಿಕವಾಗಬಹುದು. ಚಿತ್ತವು ಚಾಂಚಲ್ಯದಿಂದ ಇರುವುದು. ಅಪರಿಚಿತರ ಜೊತೆ ವ್ಯವಹಾರವನ್ನು ಹಂಚಿಕೊಳ್ಳುವಿರಿ.

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..