AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತನೆ ಮಾಡುವಿರಿ, ಸಂಗಾತಿಯ ಸಲಹೆ ಪಡೆಯಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ನವೆಂಬರ್​ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತನೆ ಮಾಡುವಿರಿ, ಸಂಗಾತಿಯ ಸಲಹೆ ಪಡೆಯಿರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 08, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ನವೆಂಬರ್​​​ 08 ಬುಧವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ಮೇಷ ರಾಶಿ: ಅನಿರೀಕ್ಷಿತ ತಿರುವುಗಳು ನಿಮ್ಮನ್ನು ಉದ್ವಿಗ್ನಗೊಳಿಸಬಹುದು. ಹೋರಾಟದ ಮನೋಭಾವವು ಇಂದು ಎದ್ದು ತೋರುವುದು. ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿರಂತರ ಅಸ್ತಿತ್ವದಲ್ಲಿ ಇರುವಂತೆ ನಿಮ್ಮನ್ನು ಇರಿಸಿಕೊಳ್ಳಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ಕೆಲವು ಸಮಸ್ಯೆಯನ್ನು ಸುಮ್ನೇ ಬಿಡುವುದು ಯೋಗ್ಯ. ಕಾಲಕ್ರಮೇಣ ಸರಿಯಾಗುವುದು.

ವೃಷಭ ರಾಶಿ: ಸಾಮರಸ್ಯದ ಅಭಾವದಿಂದ ಮಾನಸಿಕ ಸ್ಥಿತಿಯು ಅಸಮತೋಲನವಾಗಲಿದೆ. ನಿರೀಕ್ಷಿತ ಲಾಭವು ಆಗದಿದ್ದರೂ ನೆಮ್ಮದಿಗೆ ಕೊರತೆ ಕಾಣದು. ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಮಾದರಿಯಾದೀತು. ನಿಮ್ಮ‌ ಮಾತನಿಂದ ಇನ್ನೊಬ್ಬರನ್ನು ಘಾಸಿ ಮಾಡುವಿರಿ. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ನೀವು ಸ್ವತಂತ್ರವಾಗಿ ನಿರ್ಧಾರವನ್ನು ತೆಗದುಕೊಳ್ಳಬೇಕಾಗಬಹುದು.

ಮಿಥುನ ರಾಶಿ: ಸಹಿಸಲಾಗದ ದೇಹಪೀಡೆಯಿಂದ ಒದ್ದಾಡುವಿರಿ. ಕೆಲವರು ಅಕಾರಣವಾಗಿ ಬಿಟ್ಟುಹೋಗಬಹುದು. ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಸಮಸ್ಯೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಉದ್ಯೋಗದಲ್ಲಿ ದೂರದೃಷ್ಟಿ ಇರಲಿ. ಕೃಷಿ ಚಟುವಟಿಕೆಯಲ್ಲಿ ಆಸಕ್ತಿಯು ಅಧಿಕವಾಗಬಹುದು. ಧನ್ವಂತರಿಯ ಉಪಾಸನೆಯಿಂದ ಅನಾರೋಗ್ಯದ ಬಾಧೆಯು ಕಡಿಮೆ ಆದೀತು.

ಕಟಕ ರಾಶಿ: ಪ್ರೇಮವು ಸಾಕೆನಿಸಬಹುದು. ಸುಮ್ಮನೇ ಕುಳಿತುಕೊಳ್ಳುವುದು ಇಷ್ಟವಾಗದು. ಸಂತಾನ ಯೋಗದಿಂದ ನಿಮಗೆ ಖುಷಿ ಸಿಗಲಿದೆ. ಅವಿವಾಹಿತರಿಗೆ ವಿವಾಹದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಕೆಲವು ಸನ್ನಿವೇಶವನ್ನು ನೀವು ನಗಣ್ಯ ಮಾಡುವುದು ಉತ್ತಮ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ‌ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಾನಸಿಕ ಅಸ್ಥಿರತೆಯಿಂದ ಕಷ್ಟವಾದೀತು.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ