AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಸಂಗಾತಿಯ ಸಲಹೆ ಪಡೆದು ಆದಷ್ಟು ಬೇಗ ಉತ್ತಮ ನಿರ್ಧಾರಕ್ಕೆ ಬರುವುದು ಒಳ್ಳೆಯದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 8) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಸಂಗಾತಿಯ ಸಲಹೆ ಪಡೆದು ಆದಷ್ಟು ಬೇಗ ಉತ್ತಮ ನಿರ್ಧಾರಕ್ಕೆ ಬರುವುದು ಒಳ್ಳೆಯದು
ಪ್ರಾತಿನಿಧಿಕ ಚಿತ್ರImage Credit source: iStock Photo
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 08, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 8 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ನವಮೀ, ನಿತ್ಯನಕ್ಷತ್ರ: ಮೃಗಶಿರಾ, ಯೋಗ: ವಜ್ರ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 22ರ ವರೆಗೆ, ಸೂರ್ಯಾಸ್ತ ಸಂಜೆ 06 ಗಂಟೆ 38 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:58 ರಿಂದ 12:30ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:35 ರಿಂದ 05:07ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:54 ರಿಂದ 09:26ರ ವರೆಗೆ.

ಮೇಷ ರಾಶಿ: ಕಛೇರಿಯ ಕೆಲಸವು ನಿಮಗೆ ಸಮಾಧಾನ ಕೊಡದು. ನಿದ್ರೆಯು ಸರಿಯಾಗಿ ಆಗದೇ ಕಷ್ಟವಾದೀತು. ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಔಷಧೋಪಚಾರವನ್ನು ಮಾಡುವಿರಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವಿರಿ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವ ಸಂದರ್ಭವು ಬರಬಹುದು. ನಿಮ್ಮ ಪಾಲಿಗೆ ಬಂದಿದ್ದನ್ನು ಜೋಪಾನವಾಗಿ ರಕ್ಷಿಸಿಕೊಳ್ಳಿ. ಸಂಬಂಧಗಳನ್ನು ಚೆನ್ನಾಗಿ ಇಟ್ಟಕೊಳ್ಳಲು ಇಷ್ಟಪಡುವಿರಿ. ಬಹಳ ದಿನದದಿಂದ ನಿರೀಕ್ಷಿಸುತ್ತಿದ್ದ ವಿವಾಹಯೋಗವು ಬರಬಹುದು. ಯೋಗ್ಯತೆಗೆ ಅನುಸಾರವಾಗಿ ನಿಮ್ಮ ಕಾರ್ಯಗಳು ಇರಲಿವೆ.

ವೃಷಭ ರಾಶಿ: ಅಪವಾದವನ್ನು ಸರಿ ಮಾಡಿಕೊಳ್ಳಲು ಬಹಳ ಪ್ರಯತ್ನಿಸುವಿರಿ. ಚಂಚಲ‌ವಾದ ಮನಸ್ಸಿನಿಂದ ನಿಮ್ಮ ನಿರ್ಧಾರವು ಪೂರ್ಣವಾಗದು. ವಿಶ್ವಾಸಘಾತದಿಂದ ನಿಮಗೆ ಬೇಸರವಾಗಬಹುದು. ನೀವು ಆತ್ಮೀಯರ ಸಮಾರಂಭಕ್ಕೆ ಹೋಗಿ ಖುಷಿಪಡುವಿರಿ. ಕೆಲವರನ್ನು ನೀವು ವಿನಾಕಾರಣ ದ್ವೇಷಿಸುವಿರಿ. ನಿಮ್ಮ‌ ಮಾತು ಇನ್ನೊಬ್ಬರ ಮನಸ್ಸನ್ನು ಘಾಸಿಗೊಳಿಸಬಹುದು. ಕಿವಿಯ ನೋವಿನಿಂದ ಸಂಕಟವಾಗುವುದು. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸಿ ಸಿಗದೇ ಬೇಸರಗೊಳ್ಳುವಿರಿ. ಸ್ನೇಹಿತರ ಒತ್ತಾಯದ ಮೇರೆಗೆ ಪ್ರಯಾಣ ಮಾಡುವಿರಿ. ಸಂಗಾತಿಯ ಮಾತು ಕಹಿಯಾಗಬಹುದು.

ಮಿಥುನ ರಾಶಿ: ಅಲ್ಪ ಪ್ರಗತಿಯೂ ನಿಮಗೆ ಸಂತೋಷವನ್ನು ಕೊಡುವುದು. ತಮಾಷೆಯು ಗಂಭೀರ ರೂಪವನ್ನು ಪಡೆಯಬಹುದು. ಆರೋಗ್ಯವು ಕೊಂಚ ವ್ಯತ್ಯಾಸವಾಗಬಹುದು. ಮರಣಭೀತಿಯು ಕಾಡಬಹುದು. ಎಲ್ಲರಿಂದ ದೂರವಾಗಲು ಬಯಸುವಿರಿ. ಇಂದು ನಿಮ್ಮ ಅಗತ್ಯ ಕಾರ್ಯಗಳಿಗೆ ಸಮಯವನ್ನು ಕೊಡುವುದು ಕಷ್ಟವಾದೀತು. ನೀವು ಮನೆಯನ್ನು ಖರೀದಿಸುವ ಅಲೋಚನೆಯಲ್ಲಿ ಇರುವಿರಿ. ಕೂಡಿಟ್ಟ ಹಣವು ಇಂದು ಸದುಪಯೋಗಕ್ಕೆ ಬಂದಿದ್ದು ಖುಷಿ ಕೊಡಲಿದೆ. ನಿಮ್ಮ ಬೆಂಬಲಕ್ಕೆ ಸಹೋದ್ಯೋಗಿಗಳು ಬರಬಹುದು.

ಕಟಕ ರಾಶಿ: ವಿವಾಹ ಮಂಗಳಕಾರ್ಯದಿಂದ ಮನೆಯಲ್ಲಿ ನೆಮ್ಮದಿಯು ಇರುವುದು. ಆಸ್ತಿಯ‌ ಖರೀದಿಗೆ ಬೇಕಾದ ಹಣವನ್ನು ನೀವು ಇನ್ನೊಬ್ಬರಿಂದ ಸಾಲವಾಗಿ ಪಡೆಯುವಿರಿ. ಭವಿಷ್ಯದ ಬಗ್ಗೆ ಮನಸ್ಸಿನಲ್ಲಿ ನಾನಾ ಚಿಂತೆಗಳು ಹುಟ್ಟಬಹುದು. ಸಂಗಾತಿಯ ಸಲಹೆಯನ್ನೂ ಪಡೆದು ಆದಷ್ಟು ಬೇಗ ಉತ್ತಮ ನಿರ್ಧಾರಕ್ಕೆ ಬನ್ನಿ. ಇಂದು ಸ್ತ್ರೀಯರಿಗೆ ಸೌಂದರ್ಯಪ್ರಜ್ಞೆಯು ಅಧಿಕವಾಗಿ ಇರುವುದು. ಉದ್ಯೋಗದ ಸ್ಥಳವು ಬೆಲೆಯು ಕಡಿಮೆ‌ ಆದಂತೆ ತೋರುವುದು. ಕ್ಷಣಿಕ ಸುಖಕ್ಕಾಗಿ ಸಂಪತ್ತನ್ನು ಅಧಿಕವಾಗಿ ತ್ಯಾಗ ಮಾಡುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳುವಿರಿ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಕಷ್ಟವಾದೀತು.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?