AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ರಾಶಿ ಭವಿಷ್ಯ ಹೀಗಿದೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ರಾಶಿ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 01, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 1 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 10:59 ರಿಂದ 12:33ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 03:38 ರಿಂದ 05:11ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 07:54 ರಿಂದ 09:27ರ ವರೆಗೆ.

ಮೇಷ ರಾಶಿ: ಎಲ್ಲದಕ್ಕೂ ಕಾರಣವು ಇರಲಿದೆ. ಅನಾಯಾಸವಾಗಿ ಸಿಕ್ಕ ಅವಕಾಶಗಳು ನಿಮಗೆ ಇಷ್ಟವಾಗದು. ಯಾರ ಪ್ರಭಾವವನ್ನೂ ನೀವು ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ನಿಮ್ಮ ಕಾರ್ಯದ ಮೇಲೆ ನಿಮಗೆ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ಶುಭ ಸುದ್ದಿಯು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ಉತ್ಸಾಹವು ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳುವಿರಿ. ನೀವು ಕೊಡಬೇಕಾದ ಉತ್ತರವನ್ನು ಸಂದರ್ಭವೇ ಕೊಡಲಿದೆ. ಆಹಾರದ ವ್ಯತ್ಯಾಸದಿಂದ ಆರೋಗ್ಯವು ಕೆಡಬಹುದು.

ವೃಷಭ ರಾಶಿ: ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ನಿಮ್ಮದಾದ ವಸ್ತುವನ್ನು ನೀವು ಪಡೆಯಲು ಕಷ್ಟವಾಗುವುದು. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇದ್ದರೂ ಅನವಾರ್ಯವಾಗುವುದು. ಆರ್ಥಿಕತೆಯ ಬಗ್ಗೆ ನಿಮ್ಮನ್ನು ಯಾರಾದರೂ ಪ್ರಶ್ನಿಸಬಹುದು. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ಮಾಹಿತಿ ಇರಲಿ. ಹಳೆಯ ನೆನಪುಗಳನ್ನು ನಿಮ್ಮನ್ನು ಕಾಡಬಹುದು. ಗಾಯವನ್ನು ಕೆರೆದು ಹುಣ್ಣು ಮಾಡಿಕೊಳ್ಳುವಿರಿ. ಇಂದಿನ ಪ್ರಯಾಣವು ಬಹಳ ದುಷ್ಕರ ಎನಿಸಬಹುದು. ದಾಂಪತ್ಯಕ್ಕೆ ಹೆಚ್ಚಿನ ಸಮಯವನ್ನು ಕೊಡುವಿರಿ. ನೀವು ಒಂಟಿ ಎನಿಸಬಹುದು.

ಮಿಥುನ ರಾಶಿ: ಊಹಿಸದ ಘಟನೆಗಳು ನಿಮ್ಮ ಜೀವನದಲ್ಲಿ ನಡೆಯಬಹುದು. ಗಣ್ಯರ ಭೇಡಿಯಾಗಲಿದೆ. ಅಧಿಕಾರಿಗಳ ಜೊತೆ ಉದ್ಯೋಗದ ವಿಚಾರವನ್ನು ಚರ್ಚಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಬರುವುದು ನಿಮಗೆ ಕಷ್ಟವಾಗುವುದು. ನಿಮ್ಮ ಉತ್ಸಾಹವೇ ನಿಮ್ಮ ಯಶಸ್ಸಿನ ಗುಟ್ಟಾಗಲಿದೆ. ನಿಮ್ಮ‌ನ್ನು ಅರ್ಥಮಾಡಿಕೊಳ್ಳದೇ ನಿಮ್ಮಿಂದ ದೂರಾಗಬಹುದು. ಇಂದು ನಿಮ್ಮ ರೂಪಕ್ಕೆ ಆಕರ್ಷಣೆ ಇರಲಿದೆ. ವಾಹನದ ಓಡಾಟವನ್ನು ನೀವು ನಿಲ್ಲಿಸಿ. ಆಹಾರದ ಸ್ವೀಕಾರದ ಸಮಯವು ವಿಳಂಬವಾಗಬಹುದು. ನೆರೆಹೊರೆಯ ಜೊತೆ ವಾಗ್ವಾದ ನಡೆಯಬಹುದು. ನಿಮ್ಮ ಕೊರತೆಯನ್ನು ನೀವು ಮುಚ್ಚಿಡುವಿರಿ.

ಕಟಕ ರಾಶಿ: ಆರ್ಥಿಕಸ್ಥಿತಿಯಲ್ಲಿ ಚೇತರಿಕೆ ಇರಲಿದೆ‌. ಮಹಿಳೆಯರಿಗೆ ಹೆಚ್ಚಿನ ಸಹಕಾರವು ಸಿಕ್ಕಿ ಇಂದಿನ‌ ಕಾರ್ಯವು ಅನಾಯಾಸವಾಗಿ ಮುಗಿಯುವುದು. ಉನ್ನತ ಅಧಿಕಾರದ ಆಸೆಯನ್ನು ಆಪ್ತರು ನಿಮ್ಮೊಳಗೆ ತುಂಬುವರು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗಬಹುದು. ಇಂದಿನ ನಿಮ್ಮ ಕಾರ್ಯಕೌಶಲಕ್ಕೆ ಬೆರಗಾಗಬಹುದು. ವಿವಾಹಕ್ಕೆ ತಡೆಗಳು ಬರಬಹುದು. ನಿಮ್ಮ ಕನಸುಗಳು ಭಗ್ನವಾಗಬಹುದು. ನಿಮ್ಮ ಮನಸ್ಸು ಹತಾಶೆಯಿಂದ ಇರುವುದು. ನಕಾರಾತ್ಮಕ ಚಿಂತನೆಯನ್ನು ಬಿಟ್ಟು ಯೋಚಿಸುವುದು ಒಳ್ಳೆಯದು. ನಿಮ್ಮ ಭಾವವನ್ನು ಯಾರೂ ಅರ್ಥಮಾಡಿಕೊಳ್ಳಲಾರರು.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್