AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ರಾಶಿ ಭವಿಷ್ಯ ಹೀಗಿದೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ರಾಶಿ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 01, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 1 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಧೃತಿ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 10:59 ರಿಂದ 12:33ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 03:38 ರಿಂದ 05:11ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 07:54 ರಿಂದ 09:27ರ ವರೆಗೆ.

ಮೇಷ ರಾಶಿ: ಎಲ್ಲದಕ್ಕೂ ಕಾರಣವು ಇರಲಿದೆ. ಅನಾಯಾಸವಾಗಿ ಸಿಕ್ಕ ಅವಕಾಶಗಳು ನಿಮಗೆ ಇಷ್ಟವಾಗದು. ಯಾರ ಪ್ರಭಾವವನ್ನೂ ನೀವು ಬಳಸಿಕೊಳ್ಳಲು ಇಷ್ಟಪಡುವುದಿಲ್ಲ. ನಿಮ್ಮ ಕಾರ್ಯದ ಮೇಲೆ ನಿಮಗೆ ಗಮನವು ಕಡಿಮೆ ಆಗಬಹುದು. ನಿಮ್ಮ ವಿರುದ್ಧದ ಮಾತುಗಳಿಗೆ ನೀವು ಸಿಟ್ಟಾಗುವಿರಿ. ಶುಭ ಸುದ್ದಿಯು ನಿಮ್ಮ ಪಾಲಿಗೆ ಬರಲಿದೆ. ನಿಮ್ಮ ಉತ್ಸಾಹವು ಮಿತಿ ಮೀರುವುದು ಬೇಡ. ಕಳೆದುಕೊಂಡಿದ್ದನ್ನು ಪುನಃ ಪಡೆದುಕೊಳ್ಳುವಿರಿ. ನೀವು ಕೊಡಬೇಕಾದ ಉತ್ತರವನ್ನು ಸಂದರ್ಭವೇ ಕೊಡಲಿದೆ. ಆಹಾರದ ವ್ಯತ್ಯಾಸದಿಂದ ಆರೋಗ್ಯವು ಕೆಡಬಹುದು.

ವೃಷಭ ರಾಶಿ: ನಿಮ್ಮ ಸ್ಥಿತಿಯನ್ನು ಕೆಲವರು ಆಡಿಕೊಂಡಾರು. ನಿಮ್ಮದಾದ ವಸ್ತುವನ್ನು ನೀವು ಪಡೆಯಲು ಕಷ್ಟವಾಗುವುದು. ದೇವತಾಕಾರ್ಯದಲ್ಲಿ ಆಸಕ್ತಿ ಕಡಿಮೆ ಇದ್ದರೂ ಅನವಾರ್ಯವಾಗುವುದು. ಆರ್ಥಿಕತೆಯ ಬಗ್ಗೆ ನಿಮ್ಮನ್ನು ಯಾರಾದರೂ ಪ್ರಶ್ನಿಸಬಹುದು. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ಮಾಹಿತಿ ಇರಲಿ. ಹಳೆಯ ನೆನಪುಗಳನ್ನು ನಿಮ್ಮನ್ನು ಕಾಡಬಹುದು. ಗಾಯವನ್ನು ಕೆರೆದು ಹುಣ್ಣು ಮಾಡಿಕೊಳ್ಳುವಿರಿ. ಇಂದಿನ ಪ್ರಯಾಣವು ಬಹಳ ದುಷ್ಕರ ಎನಿಸಬಹುದು. ದಾಂಪತ್ಯಕ್ಕೆ ಹೆಚ್ಚಿನ ಸಮಯವನ್ನು ಕೊಡುವಿರಿ. ನೀವು ಒಂಟಿ ಎನಿಸಬಹುದು.

ಮಿಥುನ ರಾಶಿ: ಊಹಿಸದ ಘಟನೆಗಳು ನಿಮ್ಮ ಜೀವನದಲ್ಲಿ ನಡೆಯಬಹುದು. ಗಣ್ಯರ ಭೇಡಿಯಾಗಲಿದೆ. ಅಧಿಕಾರಿಗಳ ಜೊತೆ ಉದ್ಯೋಗದ ವಿಚಾರವನ್ನು ಚರ್ಚಿಸುವಿರಿ. ವಿದ್ಯಾಭ್ಯಾಸಕ್ಕಾಗಿ ಮನೆಯನ್ನು ಬಿಟ್ಟು ಬರುವುದು ನಿಮಗೆ ಕಷ್ಟವಾಗುವುದು. ನಿಮ್ಮ ಉತ್ಸಾಹವೇ ನಿಮ್ಮ ಯಶಸ್ಸಿನ ಗುಟ್ಟಾಗಲಿದೆ. ನಿಮ್ಮ‌ನ್ನು ಅರ್ಥಮಾಡಿಕೊಳ್ಳದೇ ನಿಮ್ಮಿಂದ ದೂರಾಗಬಹುದು. ಇಂದು ನಿಮ್ಮ ರೂಪಕ್ಕೆ ಆಕರ್ಷಣೆ ಇರಲಿದೆ. ವಾಹನದ ಓಡಾಟವನ್ನು ನೀವು ನಿಲ್ಲಿಸಿ. ಆಹಾರದ ಸ್ವೀಕಾರದ ಸಮಯವು ವಿಳಂಬವಾಗಬಹುದು. ನೆರೆಹೊರೆಯ ಜೊತೆ ವಾಗ್ವಾದ ನಡೆಯಬಹುದು. ನಿಮ್ಮ ಕೊರತೆಯನ್ನು ನೀವು ಮುಚ್ಚಿಡುವಿರಿ.

ಕಟಕ ರಾಶಿ: ಆರ್ಥಿಕಸ್ಥಿತಿಯಲ್ಲಿ ಚೇತರಿಕೆ ಇರಲಿದೆ‌. ಮಹಿಳೆಯರಿಗೆ ಹೆಚ್ಚಿನ ಸಹಕಾರವು ಸಿಕ್ಕಿ ಇಂದಿನ‌ ಕಾರ್ಯವು ಅನಾಯಾಸವಾಗಿ ಮುಗಿಯುವುದು. ಉನ್ನತ ಅಧಿಕಾರದ ಆಸೆಯನ್ನು ಆಪ್ತರು ನಿಮ್ಮೊಳಗೆ ತುಂಬುವರು. ಅನಪೇಕ್ಷಿತ ಮಾತುಗಳಿಂದ ನಿಮ್ಮ ಸಮಯವು ವ್ಯರ್ಥವಾಗಬಹುದು. ಇಂದಿನ ನಿಮ್ಮ ಕಾರ್ಯಕೌಶಲಕ್ಕೆ ಬೆರಗಾಗಬಹುದು. ವಿವಾಹಕ್ಕೆ ತಡೆಗಳು ಬರಬಹುದು. ನಿಮ್ಮ ಕನಸುಗಳು ಭಗ್ನವಾಗಬಹುದು. ನಿಮ್ಮ ಮನಸ್ಸು ಹತಾಶೆಯಿಂದ ಇರುವುದು. ನಕಾರಾತ್ಮಕ ಚಿಂತನೆಯನ್ನು ಬಿಟ್ಟು ಯೋಚಿಸುವುದು ಒಳ್ಳೆಯದು. ನಿಮ್ಮ ಭಾವವನ್ನು ಯಾರೂ ಅರ್ಥಮಾಡಿಕೊಳ್ಳಲಾರರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು