AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಯಾರ ಬಳಿಯೂ ಸಹಾಯ ಹಸ್ತ ಚಾಚದೇ ಸ್ವಂತ ಬಲದ ಮೇಲೆ ಬೆಳೆಯುತ್ತಾರೆ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರು ಯಾರ ಬಳಿಯೂ ಸಹಾಯ ಹಸ್ತ ಚಾಚದೇ ಸ್ವಂತ ಬಲದ ಮೇಲೆ ಬೆಳೆಯುತ್ತಾರೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 12, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 12 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 35 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:32 ರಿಂದ ಸಂಜೆ 05:04 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 09:26 ರಿಂದ 10:57ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:29 ರಿಂದ 02:01ರ ವರೆಗೆ.

ಮೇಷ ರಾಶಿ: ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನಗತ್ಯ ವಿಚಾರವನ್ನು ಪ್ರಸ್ತಾಪಿಸಿ ವಿವಾದ ಮಾಡುವಿರಿ. ನಿಮ್ಮ ಆದಾಯವು ಅಧಿಕವಾಗಿದ್ದು ನಿಮಗೆ ಸಂತೋಷವನ್ನು ಕೊಡುವ ವಿಚಾರವು ಇದಾಗಿದೆ. ನಿರಂತರ ಪ್ರಯತ್ನದ ಫಲವು ಇಂದು ಸಿಗಬಹುದು.

ವೃಷಭ ರಾಶಿ: ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಹೇಳಿಕೆಗಳು ನಿಮಗೆ ಉದ್ವೇಗವನ್ನು ಉಂಟಾಗಲಿದೆ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ದಾಮದೃಷ್ಟಿಯು ಬೇರೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮ್ಮಲ್ಲಿ ಭೀತಿಯ ಮನೋಭಾವವು ಇರಲಿದೆ.

ಮಿಥುನ ರಾಶಿ: ತಾತ್ಕಾಲಿಕವಾಗಿ ನಿಮ್ಮ ಸಮಸ್ಯೆಗಳು ನಿವಾರಣೆಯಾಗಲಿದ್ದು ಸ್ವಲ್ಪ ಉಸಿರಾಡುವುದಕ್ಕೆ ಅನುವುಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಮಕ್ಕಳ ಯಶಸ್ಸನ್ನು ಕಂಡು ಪೋಷಕರಿಗೆ ಸಂತಸವಾಗಲಿದೆ. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಪೂಜಾಯೋಗ್ಯರಿಗೆ ಆತಿಥ್ಯವನ್ನು ನೀಡುವಿರಿ. ನಿಮ್ಮ ಬಗ್ಗೆ ಇರುವ ಸುಳ್ಳು ಸುದ್ದಿಯು ಸರಿಉಅಗಬಹುದು.

ಕಟಕ ರಾಶಿ: ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಕುಟುಂಬದಲ್ಲಿ ಐಕಮತ್ಯದ ಕೊರೆತೆಯು ಕಡಿಮೆ‌ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ನಿಮ್ಮ ಜೀವನದ ಕುರಿತು ತಂದೆ ತಾಯಿಯರು ಚಿಂತಿಸುವರು. ನೀವು ಮಾತಿಗೆ ತಪ್ಪಿದವರು ಎಂಬ ಪಟ್ಟಕ್ಕೆ ಸಿಗುವುದು.

ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ