AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು, ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಬೇಡ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 17) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಸಂಗಾತಿಯ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು, ಬೇರೆಯವರ ವಿಚಾರದಲ್ಲಿ ಹಸ್ತಕ್ಷೇಪ ಬೇಡ
ಜ್ಯೋತಿಷ್ಯ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 17, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 17 ರವಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಪುನರ್ವಸು, ಯೋಗ: ಧ್ರುವ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 12 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:49 ರಿಂದ 09:26 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 11:02 ರಿಂದ 12:38ರವರೆಗೆ, ಗುಳಿಕ ಕಾಲ ಸಂಜೆ 14:15 ರಿಂದ 03:51ರ ವರೆಗೆ.

ಮೇಷ ರಾಶಿ: ಉದ್ಯಮಿಗಳು ಇಂದು ದೊಡ್ಡ ಲಾಭವನ್ನು ಗಳಿಸುವ ಯೋಜನೆಯನ್ನು ನಿರೀಕ್ಷಿಸುವರು. ಇಂದು ನಿಮ್ಮ ಸಂಗಾತಿಯ ಜೊತೆ ತುಂಬಾ ಆಪ್ತವಾಗಿ ವ್ಯವಹರಿಸುವಿರಿ. ನಿಮ್ಮ ವೈವಾಹಿಕ ಜೀವನದ ಹಳೆಯ ನೆನಪು ನಿಮಗೆ ಖುಷಿಕೊಡಬಹುದು. ಹೊರಗಿನ ಆಹಾರವನ್ನು ತ್ಯಜಿಸಲು ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ವಿರೋಧಿಗಳು ನಿಮ್ಮ ವಿರುದ್ಧ ತಂತ್ರ ಹೂಡಬಹುದು ಮಕ್ಕಳ ಮೇಲೆ ದಾಳಿ ಒಂದು ಕಣ್ಣಿರಲಿ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಪ್ರೀತಿ ಹೆಚ್ ಆಗುವುದು. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸುವಿರಿ. ನಿಮಗೆ ಅವಶ್ಯಕತೆ ಇರುವಷ್ಟು ಬಳಸಿಕೊಂಡು, ಇನ್ನೊಬ್ಬರ ವಸ್ತುವನ್ನು ಹಿಂದಿರುಗಿಸುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ವಿಚಾರಿಸಿ. ಸಂತೋಷವಾಗುವುದು.

ವೃಷಭ ರಾಶಿ: ನೀವು ಆರ್ಥಿಕ ನಷ್ಟವನ್ನು ಎದುರಿಸಬೇಕಾಗುವುದು. ನಿಮ್ಮ ಸಂಗಾತಿಯ ಆರೋಗ್ಯವಯ ಕ್ಷೀಣಿಸಿದ್ದು ನಿಮಗೆ ಆತಂಕವು ಹೆಚ್ಚಾಗಬಹುದು. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ನೀವು ತುಂಬಾ ಆಯಾಸವನ್ನು ಪಡುವಿರಿ. ನಿಮ್ಮ ಉದ್ಯೋಗದ ಕನಸು ನನಸಾಗುವ ಹಂತಕ್ಕೆ ತಲುಪಬಹುದು. ಅಶಿಸ್ತಿನ ವ್ಯವಸ್ಥೆಯಿಂದ ಸಿಟ್ಟಾಗುವಿರಿ. ಸುಪ್ತವಾಗಿದ್ದ ವಿದೇಶದ ಕನಸು ಅಂಕುರಿಸಬಹುದು. ಗುರುವಿನ ದರ್ಶನವನ್ನು ಪಡೆದು ಖುಷಿಪಡುವಿರಿ. ನಿಮ್ಮ ಸಕಾರಾತ್ಮಕ ನಿಲುವು ಇಷ್ಟವಾಗುವುದು. ನೀವು ಕೆಲಸದಲ್ಲಿ ಪಾರದರ್ಶಕತೆಯನ್ನು ಹೆಚ್ಚು ಇಷ್ಟಪಡುವಿರಿ. ವ್ಯಾಪಾರವನ್ನು ವಿನಮ್ರತೆಯಿಂದ ಮಾಡಿ, ಆದಾಯವನ್ನು ಹೆಚ್ಚು ಮಾಡಿಕೊಳ್ಳುವಿರಿ. ನಿಮಗೆ ಇಷ್ಟವಾದ ಕೊಡುಗೆಯು ಸಿಗಬಹುದು. ವಿದ್ಯಾರ್ಥಿಗಳು ಉತ್ತಮ ವಿದ್ಯಾಲಯಕ್ಕೆ ಪ್ರಯತ್ನಿಸಿ ವಿಫಲರಾಗುವರು.

ಮಿಥುನ ರಾಶಿ: ಹಣಕ್ಕೆ ಸಂಬಂಧಿಸಿದ ಪ್ರಮುಖ ಕೆಲಸವನ್ನು ತಪ್ಪಿಸಿ. ಕಛೇರಿಯಲ್ಲಿ ನಿಮ್ಮ ಎಲ್ಲ ಕೆಲಸಗಳನ್ನು ನೀವು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂಬ ಆದೇಶವು ಬರಬಹುದು. ನಿಮ್ಮ ಕೆಲಸವು ಇಂದು ಅಪೂರ್ಣವಾಗಿದ್ದರೆ, ನಿಮ್ಮ ಮೇಲೆ ತುಂಬಾ ಕೋಪಗೊಳ್ಳಬಹುದು. ವ್ಯಾಪಾರಸ್ಥರು ಸುಲಭದಲ್ಲಿ ಲಾಭವನ್ನು ಗಳಿಸುವುದು ಕಷ್ಟವಾದೀತು. ಮನೆಯ ವಾತಾವರಣ ಪ್ರಶಾಂತವಾಗಿರುವುದು. ನಿಮ್ಮ ಕಾರ್ಯದ ಪರಿಶೀಲನೆಗೆ ಅಧಿಕಾರಿಗಳು ಬರಬಹುದು. ಪ್ರಶಂಸೆ ಸಿಗುವ ಸಾಧ್ಯತೆಯೂ ಇದೆ. ನಿಮ್ಮ ಏಳ್ಗೆಯನ್ನು ಕಂಡು ದಾಯಾದಿಗಳು ಅಸೂಯೆ ಪಡಲಡುವರು. ಯಾವುದಾದರೂ ಒಂದು ಆರೋಪದಲ್ಲಿ ಸಿಕ್ಕಿಹಾಕಿಕೊಳ್ಳುವ ಸನ್ನಿವೇಶವು ಬರಬಹುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇಟ್ಟಕೊಳ್ಳಿ. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಗೊಂದಲವನ್ನು ಮಾಡಿಕೊಂಡು ಹಣವನ್ನು ಕಳೆದುಕೊಳ್ಳಬೇಕಾಗಬಹುದು.

ಕರ್ಕಾಟಕ ರಾಶಿ: ನಿಮ್ಮ ಸಂಗಾತಿಯ ಜೊತೆ ಭಿನ್ನಾಭಿಪ್ರಾಯವಿದ್ದರೆ ಶೀಘ್ರದಲ್ಲಿ ಸರಿಯಾಗುವುದು. ಕೆಲಸದ ಜಾಗದಲ್ಲಿ ಇನ್ನೊಬ್ಬರ ಕೆಲಸದಲ್ಲಿ ಹಸ್ತಕ್ಷೇಪ ಮಾಡಬೇಡಿ. ಪಾಲುದಾರಿಕೆಯಲ್ಲಿ ವ್ಯಾಪಾರ ಮಾಡುವವರು ಇಂದು ಉತ್ತಮ ಲಾಭವನ್ನು ಪಡೆಯುವರು. ನಿಮ್ಮ ಸ್ಥಗಿತಗೊಂಡ ಕೆಲಸವು ಪೂರ್ಣವಾಗುವ ಹಂತಕ್ಕೆ ಹೋಗಬಹುದು. ಧನವ್ಯಯವಾದರೂ ದೊಡ್ಡ ಸಮಸ್ಯೆ ಆಗುವುದಿಲ್ಲ. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯಿರಿ. ಶತ್ರುಗಳಿಂದ ಕೆಲಸಗಳಿಗೆ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನವಿದ್ದರೂ ಸ್ವಲ್ಪ ಫಲವು ಇರಲಿದೆ. ಅವಕಾಶದ ಕೊರತೆಯು ನಿಮ್ಮ ಹತಾಶಗೊಳಿಸಬಹುದು.‌ ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು ಎಂಬ ಸತ್ಯವು ತಿಳಿಯಲಿದೆ. ಯೋಜನೆಯನ್ನು ಮಾಡುವಾಗ ಸರಿಯಾಗಿ ಇರಲಿ. ಒತ್ತಡಕ್ಕೆ ಅವಕಾಶವನ್ನು ಕೊಡದೇ ನೀವು ನೆಮ್ಮದಿಯಿಂದ ಇರಿ. ನಿಮ್ಮನ್ನು ನೀವು ಸುಧಾರಿಸಿಕೊಳ್ಳಬೇಕಾಗಬಹುದು. ನಾಯಕತ್ವದಿಂದ ದೂರವಾಗಲು ದಾರಿ ಹುಡುಕುವಿರಿ. ವರ್ಗಾವಣೆಯ ಕಿರಿಕಿರಿ ನಿಮ್ಮ ತಲೆಯಲ್ಲಿ ಇರಲಿದೆ.

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ