AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಮನಸ್ಸಿನೊಳಗೆ ನೋವು ಇಟ್ಟುಕೊಂಡು ಸಂಕಟ ಪಡುವಿರಿ, ಸಣ್ಣ ವಿಚಾರಕ್ಕೂ ಕೋಪ ಬೇಡ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 18) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಮನಸ್ಸಿನೊಳಗೆ ನೋವು ಇಟ್ಟುಕೊಂಡು ಸಂಕಟ ಪಡುವಿರಿ, ಸಣ್ಣ ವಿಚಾರಕ್ಕೂ ಕೋಪ ಬೇಡ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 18, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 18 ಸೋಮವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಚಿತ್ರಾ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ತೃತೀಯಾ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಪ್ರೀತಿ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 32 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 07:54 ರಿಂದ 09:25 ರವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:56 ರಿಂದ 12:27ರವರೆಗೆ, ಗುಳಿಕ ಕಾಲ ಸಂಜೆ 01:58 ರಿಂದ 03:29ರ ವರೆಗೆ.

ಮೇಷ ರಾಶಿ: ನೋವನ್ನು ಮನಸ್ಸಿನೊಳಗೇ ಇಟ್ಟುಕೊಂಡು ಸಂಕಟಪಡುವಿರಿ. ಸಣ್ಣ ವಿಚಾರಕ್ಕೂ ಕೋಪಗೊಳ್ಳುವಿರಿ. ಹೊಸ ವಸ್ತ್ರಗಳನ್ನು ಧರಿಸುವಿರಿ. ಉಡುಗೊರೆಯನ್ನು ಸ್ನೇಹಿತರಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಹಿನ್ನಡೆಯಾಗಲಿದೆ. ಇಂದಿನ ಸಮಯವು ವ್ಯರ್ಥವಾಗುವುದು. ಇಂದು ನಿಮ್ಮ ಜವಾಬ್ದಾರಿಯ ಕಾರ್ಯದಲ್ಲಿ ಮಗ್ನರಾಗುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಲು ಆಸಕ್ತಿಯು ಕಡಿಮೆ ಇರುವುದು.‌ ನಿಮ್ಮ ಪ್ರಾಮಾಣಿಕತೆಯ ಪರೀಕ್ಷೆ ಆಗಬಹುದು. ಸಂಗಾತಿಯನ್ನು ಭೇಟಿಯಾಗಲು ನಾನಾ ಕಾರಣವನ್ನು ಹುಡುಕುವಿರಿ. ನಿಮ್ಮ ಮಾತಿನಿಂದ ತಾಯಿಗೆ ನೋವಾಗಬಹುದು. ವೃತ್ತಿಯಲ್ಲಿ ನಿಮ್ಮ‌ ಸೇವೆಯು ಗಣನೀಯವಾಗಿರುವುದು. ನಿಮ್ಮನ್ನು ನಂಬಿಸಿ ಕೆಲಸವನ್ನು ಮಾಡಿಸಿಕೊಳ್ಳುವರು.

ವೃಷಭ ರಾಶಿ: ದಾಯಾದಿಗಳು ನಿಮ್ಮ ಸಂಕಷ್ಟವನ್ನು ಎದುರು ನೋಡುವರು. ಎಲ್ಲ ವಿಚಾರಗಳನ್ನೂ ನೀವು ನಿರಾಧಾರವಾಗಿ ತಳ್ಳಿಹಾಕುವಿರಿ. ಅಸತ್ಯವನ್ನು ಹೇಳುವುದು ಗೊತ್ತಾದೀತು. ಹಿತವಚನದಿಂದ ಯಾವ ಪರಿವರ್ತನೆಯೂ ಆಗದು. ನಿಮ್ಮ ನಡೆವಳಿಕೆಯು ಅಸಹಜತೆ ಎಂದು ಕೆಲವರಿಗೆ ಅನ್ನಿಸಬಹುದು. ಅನಿರೀಕ್ಷಿತ ಬದಲಾವಣೆಯನ್ನು ನೀವು ಸ್ವೀಕರಿಸಲಾರಿರಿ. ಎಂದೋ ಕಳೆದುಕೊಂಡ ವಸ್ತುವು ಇಂದು ಪ್ರಾಪ್ತವಾಗುವುದು. ಹಣದ ಅಭಾವವಿದ್ದರೂ ಖರ್ಚನ್ನು‌ ಮಾಡಬೇಕಾದ ಸ್ಥಿತಿಯು ಬರಬಹುದು. ಮನೆಯಿಂದ ದೂರವಿದ್ದು ಬೇಸರವಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ನಿಮಗೆ ಮುಜುಗರವಾದೀತು. ಆಸ್ತಿಯ ವಿಚಾರವಾಗಿ ಮನೆಯಲ್ಲಿ ವಾಗ್ವಾದ ಆಗಬಹುದು.

ಮಿಥುನ ರಾಶಿ: ಹಿರಿಯರಿಗೆ ಅಗೌರವದ ಮಾತುಗಳನ್ನು ಆಡುವಿರಿ. ನಿಮ್ಮ‌ ಮೇಲೆ ಸಂದೇಹವು ಬರಬಹುದು. ಭವಿಷ್ಯದ ಬಗ್ಗೆ ಕೆಲವು ವಿಚಾರಗಳನ್ನು ಹಂಚಿಕೊಳ್ಳುವಿರಿ. ನಿಮ್ಮ ಮನೆಯ ಸಮಸ್ಯೆಯನ್ನು ಬೇರೆಯವರ ಜೊತೆ ಹಂಚಿಕೊಳ್ಳುವುದು ಬೇಡ. ನಿಮ್ಮ ನಿರ್ಧಾರಕ್ಕೆ ನಿಮಗೆ ಸಂಪೂರ್ಣ ಬೆಂಬಲವಿರುವುದು. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸಬೇಕಾಗುವುದು. ವಾತಕ್ಕೆ ಸಂಬಂಧಿಸಿದ ಖಾಯಿಲೆ ಕಾಣಿಸಿಕೊಳ್ಳುವುದು. ಭವಿಷ್ಯದ ಬಗ್ಗೆ ಚಿಂತೆ ಇದ್ದರೂ ಬಂದಂತೆ ಸ್ವೀಕರಿಸಬೇಕು ಎಂದು ನಿರ್ಧರಿಸುವಿರಿ. ಸಂಗಾತಿಯ ಮಾತಿನಿಂದ ಸಿಟ್ಟಾಗುವಿರಿ. ಇಂದು ಕಛೇರಿಯಲ್ಲಿ ನಿಮಗೆ ಸ್ವಲ್ಪ ಬಿಡುವುದು ಸಿಗಬಹುದು. ಆಟದತ್ತ ನಿಮಗೆ ಗಮನ ಇರಲಿದೆ.

ಕಟಕ ರಾಶಿ: ತಂದೆಯ ಕಾರ್ಯಕ್ಕೆ ನಿಮ್ಮ ಸಹಕಾರವು ಇರಲಿದೆ. ನಿಮ್ಮವರ ಪ್ರೀತಿಯನ್ನು ಕಳೆದುಕೊಳ್ಳುವ ಭಯವು ಇರಲಿದೆ. ಹೇಳಬೇಕಾದ ವಿಚಾರವನ್ನು ನೇರವಾಗಿ ಹೇಳಿ. ನಿಮ್ಮ ಮಾತು ಚೌಕಟ್ಟನ್ನು ಮೀರಬಹುದು. ಎಲ್ಲರ ಕಣ್ಣಿಗೆ ಪರಮಸ್ವಾರ್ಥಿ ಎನಿಸಿಕೊಳ್ಳುವಿರಿ. ಸರ್ಕಾರದ ಸೌಲಭ್ಯವನ್ನು ಪಡೆಯಲು ನೀವು ಓಡಾಟ ಮಾಡುವಿರಿ. ಮಾತಿನಿಂದ ನೀವು ಗೆಲ್ಲವುದು ಸುಲಭವಲ್ಲ. ಚಿತ್ತವನ್ನು ಸಮಾಧಾನವಾಗಿ ಇಟ್ಟಕೊಳ್ಳಲು ವಿಫಲರಾಗುವಿರಿ. ಇಂದು ಮನೋರಂಜನೆಗೆ ಹೆಚ್ಚಿನ ಒತ್ತು ಕೊಡುವಿರಿ. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡುವುದು ನಿಮಗೆ ಇಷ್ಟವಾಗದು. ಆರೋಗ್ಯವು ಸ್ಥಿರವಾಗಿರುವಂತೆ ನೋಡಿಕೊಳ್ಳಿ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್