AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಉದ್ಯೋಗಸ್ಥರ ಆದಾಯದಲ್ಲಿ ಹೆಚ್ಚಳ, ಸಾಲಗಳಿಂದ ಮುಕ್ತಿ ಸಾಧ್ಯತೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 22) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಉದ್ಯೋಗಸ್ಥರ ಆದಾಯದಲ್ಲಿ ಹೆಚ್ಚಳ, ಸಾಲಗಳಿಂದ ಮುಕ್ತಿ ಸಾಧ್ಯತೆ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Jul 22, 2023 | 12:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 22 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವರಿಯಾನ್​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ.

ಮೇಷ: ಮದುವೆ ಮೊದಲಾದ ಶುಭಸಮಾರಂಭಗಳಿಗೆ ಭೇಟಿಕೊಡುವಿರಿ. ಶಾಂತ ಚಿತ್ತದಿಂದ ಎದುರಿಸಿದರೆ ಒಳ್ಳೆಯ ಫಲ ದೊರಕಲಿದೆ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ವಹಿಸಿ ಆತುರದಲ್ಲಿ ನಿರ್ಧಾರವನ್ನು ಮಾಡಬೇಡಿ. ಮಕ್ಕಳ ಬಗ್ಗೆ ಹೆಚ್ಚು ಅನುಮಾನ ಬೇಡ. ವಿದ್ಯಾರ್ಥಿಗಳು ಓದಿನಿಂದ ಶ್ರೇಯಸ್ಸನ್ನು ಪಡೆಯುವರು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗುವುದಿಲ್ಲ. ನಿಮ್ಮ ಆಪ್ತೆರ ಜೊತೆ ಮೃದುವಾಗಿ ವರ್ತಿಸಿ. ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯವಾಗಿರಲಿ. ವಿವಾಹದ ವಿಚಾರದಲ್ಲಿ ಒಳ್ಳೆಯದಾಗಲಿದೆ. ಹಿತೈಷಿಗಳ ಮಾತಿನ ಮೇಲೆ‌ ನಂಬಿಕೆ ಇರಲಿ. ನಿಮ್ಮನ್ನು ಹೊಗಳಿ ಶೂಲಕ್ಕೆ ಏರಿಸಬಹುದು. ನಿಮ್ಮ ಬಗ್ಗೆ ನಿಮಗೆ ಅರಿವಿರಲಿ.

ವೃಷಭ: ಅನಿರೀಕ್ಷಿತ ಘಟನೆಗಳಿಂದ ನೀವು ಬೆಚ್ಚಿಬೀಳುವಿರಿ. ಹೊಸ ವ್ಯಕ್ತಿಯ ಪರಿಚಯದಿಂದ ಸಂತಸವಾಗಲಿದೆ. ಹಳೆಯ ಸಾಲಗಳಿಂದ ಮುಕ್ತಿ ಸಿಗುವುದು. ಉದ್ಯೋಗಸ್ಥರಿಗೆ ಆದಾಯದಲ್ಲಿ ಅಲ್ಪ ಏರಿಕೆ ಇರಲಿದೆ. ಒತ್ತಡದಲ್ಲಿ ಕೆಲಸಚನ್ನು ನಿರ್ವಹಿಸಬೇಕಾದ ಅನಿವಾರ್ಯತೆ ಎದುರಾಗಬಹುದು. ಪಾಲುದಾರಿಕೆಯಲ್ಲಿ ತಾಳ್ಮೆ ಅಗತ್ಯ‌. ಅವಿವಾಹಿತರಿಗೆ ವಿವಾಹಯೋಗವು ಇರಲಿದೆ. ಯಾರನ್ನೋ ದ್ವೇಷಿಸುವ ಸ್ವಭಾವವು ಬದಲಾಗಲಿ. ಉಚಿತವಾದುದನ್ನು ಪಡೆಯಲು ಶ್ರಮಿಸುವಿರಿ. ಎಲ್ಲರೊಂದಿಗೂ ಅತಿಯಾದ ಸಲುಗೆ ಬೇಡ. ದೂರದ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಮಿಥುನ: ನೀವು ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನವನ್ನು ಇಟ್ಟಕೊಳ್ಳುವಿರಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದೆ. ಮನೆಯವರನ್ನು ಕರೆದುಕೊಂಡು ದೂರದ ಪ್ರಯಾಣವನ್ನು ಮಾಡುವಿರಿ. ಆಸ್ತಿಗಾಗಿ ದಾಖಲೆಗಳನ್ನು ಬದಲಿಸುವ ಯೋಚನೆ ಮಾಡುವಿರಿ. ಸರ್ಕಾರಿ ಕೆಲಸದಲ್ಲಿರುವವರಿಗೆ ಹೆಚ್ಚಿನ ಸ್ಥಾನವನ್ನು ನಿರೀಕ್ಷಿಸಬಹುದು. ಸಂಗಾತಿಯ ಆದಾಯವನ್ನು ಬಳಸಿಕೊಳ್ಳುವಿರಿ. ನೀವು ವೃತ್ತಿಯನ್ನು ಹೊಸ ರೀತಿಯಲ್ಲಿ ನೋಡುವಿರಿ. ಸತ್ಯವನ್ನು ಮುಚ್ಚಿಡುವುದು ನಿಮ್ಮ ಮಾತಿನಲ್ಲಿ ಗೊತ್ತಾಗಲಿದೆ.‌

ಕಟಕ: ಒಳ್ಳೆಯ ಚಿಂತನೆಗಳು ಹೆಚ್ಚಾಗಲಿವೆ. ಮನೆಯಲ್ಲಿ ಧಾರ್ಮಿಕ ಚಟುವಟಿಕೆಗಳಿಂದ ಶಾಂತಿ ಇರುವುದು. ಮಕ್ಕಳ ಬಗ್ಗೆ ಅನಾವಶ್ಯಕ ಅನುಮಾನ ಬೇಡ. ಓದುವ ಹವ್ಯಾಸವನ್ನು ಹೆಚ್ಚಿಸಿ. ಅಗತ್ಯದ ಖರ್ಚುಗಳಿಗೆ ಮಾತ್ರ ಪ್ರಾಧಾನ್ಯ ನೀಡಿ. ಹಣದ ಹರಿವು ಇಂದು ಮಂದಗತಿಯಲ್ಲಿ ಇರುತ್ತದೆ. ವ್ಯರ್ಥ ಓಡಾಟದಿಂದ ತೊಂದರೆಯಾಗಲಿದೆ. ಎಷ್ಟೇ ಸಮಾಧನಾ ಇದ್ದರೂ ಒತ್ತಡವೂ ನಿಮಗೆ ಗೊತ್ತಿಲ್ಲದೇ ಇರಲಿದೆ. ಸಣ್ಣ ವಿಷಯವನ್ನು ದೊಡ್ಡ ಮಾಡಿಕೊಳ್ಳುವುದು ಉಚಿತವಲ್ಲ. ಕಛೇರಿಯಲ್ಲಿ ಸಹೋದ್ಯೋಗಿಗಳ ಸಹಾಯವು ಸಿಗಲಿದೆ. ಹೆಚ್ಚು ವೃತ್ತಿಗಳಲ್ಲಿ ನಿಮಗೆ ಆಯ್ಕೆಗೆ ಗೊಂದಲವಾಗಬಹುದು.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!