AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Aug 23, 2023 | 12:30 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 20 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 49 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:43 ರಿಂದ 02:16ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:54 ರಿಂದ 09:28ರ ವರೆಗೆ, ಗುಳಿಕ ಕಾಲ ಬೆಳಿಗ್ಗೆ 11:01 ರಿಂದ 12:35ರ ವರೆಗೆ.

ಮೇಷ ರಾಶಿ : ಸಾಮಾಜಿಕ ಕಾರ್ಯಗಳು ನಿಮಗೆ ಪ್ರಶಂಸೆಯನ್ನು ತಂದುಕೊಡುವುದು. ಅಂದುಕೊಂಡ ಕಾರ್ಯವು ಪೂರ್ಣವಾಗಿ ಆಗುವುದಿಲ್ಲ. ಮಾತುಗಳನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ಸಂಪತ್ತಿನ‌ ನಿರ್ವಹಣೆಯನ್ನು ಮಾಡಲು ನೀವು ಸಮರ್ಥರಾಗುವಿರಿ. ಅಪರಿಚಿತರು ನಿಮ್ಮನ್ನು ಭೇಟಿಯಾಗಲಿದ್ದಾರೆ. ಸಂಗಾತಿಯಿಂದ ಉಡುಗೊರೆ ಸಿಗಲಿದೆ. ಮನೆಗೆ ಬೇಕಾದ ವಸ್ತುಗಳನ್ನು ನೀವು ಖರೀದಿಸುವಿರಿ. ಕೃಷಿಯಲ್ಲಿ ನಿಮಗೆ ಸ್ವಲ್ಪ ಆಸಕ್ತಿಯು ಬರುವುದು. ವಿದ್ಯಾರ್ಥಿಗಳ ಯಶಸ್ಸಿನಲ್ಲಿ ನಿಮ್ಮ ಪಾಲೂ ಇರುವುದು. ನಿಮ್ಮನ್ನು ನೇರವಾಗಿ ಕೇಳಿದ್ದಕ್ಕೆ ಮಾತ್ರ ಉತ್ತರಿಸುವುದು ಒಳ್ಳೆಯದು.

ವೃಷಭ ರಾಶಿ : ಬರುವ ಅಲ್ಪ ಆದಾಯವನ್ನು ನೀವು ರಕ್ಷಿಸಿಕೊಳ್ಳಲು ಪ್ರಯತ್ನಿಸುವಿರಿ. ಕುಟುಂಬಕ್ಕೆ ನಿಮ್ಮ ಮೇಲೆ ಪ್ರೀತಿಯು ಅಧಿಕವಾಗಲಿದೆ. ಓಡಾಟದಿಂದ ಆಯಾಸಗೊಳ್ಳುವಿರಿ. ಬಂಧುಗಳಿಂದ ಸಲ್ಲದ ಮಾತುಗಳು ಕೇಳಿಬರಬಹುದು. ಆಸ್ತಿಯ ವಿಚಾರದಲ್ಲಿ ವಾದಗಳು ಆಗಬಹುದು. ಆಲಸ್ಯದಿಂದ ನಿಮ್ಮ ಎಲ್ಲ ಕೆಲಸಗಳೂ ಹಾಗೆಯೇ ಉಳಿಯಬಹುದು. ಯಾವುದನ್ನೂ ನೀವು ಅತಿಯಾಗಿ ಇಷ್ಟಪಡದೇ ಇರುವುದು ಉತ್ತಮ. ಅನಂತರ ಇದರಿಂದ ದುಃಖಿಸಬೇಕಾಗಬಹುದು. ವಾಹನವನ್ನು ಚಲಾಯಿಸುವಾಗ ಜಾಗರೂಕತೆ ಇರಲಿ. ಆರೋಗ್ಯವು ಹದ ತಪ್ಪುವ ಸಾಧ್ಯತೆ ಇದೆ.

ಮಿಥುನ ರಾಶಿ : ನಿಮ್ಮ ಕುಶಲ ಕಾರ್ಯಗಳು ಇತರರಿಗೂ ಗೊತ್ತಾದೀತು. ವೇತನವು ಹೆಚ್ಚಾಗುವ ಸಾಧ್ಯತೆ ಇದೆ. ತಾಯಿಗೆ ನಿಮ್ಮ ಕಡೆಯಿಂದ ಅಮೂಲ್ಯವಾದ ಉಡುಗೊರೆಯನ್ನು ಕೊಡುವಿರಿ. ನಿಮ್ಮನ್ನು ಹಾಸ್ಯವಾಗಿ ಯಾರದರೂ ಕಾಣಬಹುದು. ನಿಮ್ಮ ಬಗ್ಗೆ ನಿಕವು ಹೇಳಿಕೊಳ್ಳದೇ ಇರುವ ಹಲವು ವಿಚಾರಗಳು ಸ್ನೇಹಿತರಿಗೆ ಗೊತ್ತಾಗುವುದು. ಸಂಗಾತಿಗೆ ನೀವು ಸಹಾಯವನ್ನು ಮಾಡುವಿರಿ. ಸಂಗಾತಿಯ ಜೊತೆ ಸಂತೋಷದಿಂದ ಇರುವಿರಿ. ಸಂಪತ್ತಿನ ಉಳಿತಾಯದ ಮಾರ್ಗವನ್ನು ನೀವು ಕಂಡುಕೊಳ್ಳುವಿರಿ. ನಿಮಗೆ ಸಿಗದೇ ಇರುವ ಜವಾಬ್ದಾರಿಯ ಬಗ್ಗೆ ಸಿಮಗೆ ಸ್ವಲ್ಪ ಅಸಮಾಧನ ಇರಬಹುದು. ಮುಚ್ಚು ಮರೆ ಇಲ್ಲದೇ ಎಲ್ಲವನ್ನೂ ಆಪ್ತರ ಜೊತೆ ಹಂಚಿಕೊಳ್ಳುವ ಸಂಭವವಿದೆ.

ಕರ್ಕ ರಾಶಿ : ವಿದ್ಯಾರ್ಥಿಗಳ ಪ್ರಗತಿಯ ವಿಷಯವು ಮಂದಗತಿಯಲ್ಲಿಯೇ ಇರುವುದು. ನಂಬಿಕೆಯನ್ನು ಉಳಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಕಷ್ಟವಾದೀತು. ಆದಾಯ ಮೂಲದ ಬಗ್ಗೆ ನಿಮಗೇ ಸಂತೃಪ್ತಿ ಇರದು. ನಿಮ್ಮದೇ ಸರಿ ಎಂಬ ಅಹಂ ಭಾವವು ಇನ್ನೊಬ್ಬರ ಮನಸ್ಸಿನ ಮೇಲೆ ಪರಿಣಾಮವನ್ನು ಉಂಟುಮಾಡೀತು. ನಿಮ್ಮ ಬಳಿ‌ ಕೇಳಿದರಷ್ಟೇ ಸಲಹೆಯನ್ನು ಕೊಡಿ.‌ ತಂದೆಯ ಕೋಪಕ್ಕೆ ನೀವು ಗುರಿಯಾಗಬಹುದು. ಕಛೇರಿಯಲ್ಲಿ ನಿಮಗೆ ಆಗದವರ ಸಂಗವು ನಿರ್ಮಾಣವಾಗಲಿದೆ. ಶುಭ ಸಮಾರಂಭಗಳಿಗೆ ಭೇಟಿ ಕೊಡುವಿರಿ. ಸರ್ಕಾರದ ಕೆಲಸವು ಸ್ವಲ್ಪ ವೇಗವನ್ನು ಪಡೆದುಕೊಳ್ಳುವುದು. ಅದಕ್ಕೆ ಬೇಕಾದ ಪೂರಕ ವ್ಯವಸ್ಥೆಯನ್ನು ನೀವು ಮಾಡಿಕೊಳ್ಳಬೇಕಾದೀತು.

-ಲೋಹಿತಶರ್ಮಾ – 8762924271 (what’s app only)

ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ