AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರಿಗೆ ಇಂದು ಸಂಗಾತಿಯಿಂದ ಮಾನಸಿಕ ಕಿರಿಕಿರಿ ಉಂಟಾಗಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರಿಗೆ ಇಂದು ಸಂಗಾತಿಯಿಂದ ಮಾನಸಿಕ ಕಿರಿಕಿರಿ ಉಂಟಾಗಬಹುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 24, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 24 ಸೋಮವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಶಿವ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:51 ರಿಂದ 09:27 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 11:03 ರಿಂದ ಮಧ್ಯಾಹ್ನ 12:39ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ.

ಮೇಷ: ಉಪಾಯದಿಂದ ನಿಮ್ಮ ಸ್ಥಾನವನ್ನು ಗಟ್ಟಿಮಾಡಿಕೊಳ್ಳುವಿರಿ. ಕೃಷಿಯಲ್ಲಿ ಆಸಕ್ತಿಯು ನಿಮಗೆ ಹೆಚ್ಚಾಗಲಿದೆ. ಇನ್ನೊಬ್ಬರ ಬಗ್ಗೆ ಸದ್ಭಾವನೆ ಇರಲಿ. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯಲ್ಲಿ ನೀವು ಇರುವಿರಿ.‌ ನಿಮ್ಮ ಸಾಮರ್ಥ್ಯದ ಪರೀಕ್ಷೆಯು ಇಂದು ಆಗಬಹುದು. ಇಷ್ಟವಾದುದನ್ನು ಬಿಟ್ಟುಕೊಡಬೇಕಾದೀತು. ಎಲ್ಲದಕ್ಕೂ ಇನ್ನೊಬ್ಬರನ್ನು ದೂರುವಿರಿ. ಖರ್ಚಿನ‌ ಮೇಲೆ‌ ಹಿಡಿತವಿರಲಿ. ವ್ಯಕ್ತಿತ್ವವನ್ನು ನೀವು ಸುಧಾರಿಸಿಕೊಳ್ಳುವತ್ತ ಗಮನ ಇರಲಿ. ನಿಮ್ಮ ಬಗ್ಗೆ ಆಡಿಕೊಳ್ಳುವವರಿಗೆ ಉತ್ತರಿಸಲು ಹೋಗುವುದು ಬೇಡ. ಸರ್ಕಾರಿ ಕೆಲಸದ ವೇಗವನ್ನು ನೀವು ಹೆಚ್ಚಿಸಿ ಆಗಬೇಕಾದುದನ್ನು ಮಾಡಿಸಿಕೊಳ್ಳುವಿರಿ.

ವೃಷಭ: ಕರ್ತವ್ಯದಲ್ಲಿ ನಿರಾಸಕ್ತಿ ಬರಬಹುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರಲ ಬಯಸುವಿರಿ. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ಹೆಚ್ಚಾಗಲಿದೆ. ಪ್ರವಾಸವನ್ನು ಹೆಚ್ಚು ಮಾಡುವ ಆಸಕ್ತಿಯನ್ನು ಹೊಂದಿರುವಿರಿ. ನಿಮ್ಮ ವರ್ತನೆಯು ಅಹಂಕಾರದಂತೆ ತೋರಲಿದೆ. ಹಣವನ್ನು ಬಹಳ ಜೋಪಾನವಾಗಿ ಇಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಕಳೆದ ಸಂದರ್ಭಗಳನ್ನು ಬಹಳ ಇಷ್ಟಪಡುವಿರಿ. ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಲಿದೆ. ಹಿರಿಯರಿಂದ ಸಮಾಧಾನವೂ ಸಿಗಬಹುದು.

ಮಿಥುನ: ಹಣಕಾಸಿನ ವಿಚಾರಕ್ಕೆ ದಾಂಪತ್ಯದಲ್ಲಿ ಕಲಹವುಂಟಾಗಿ ಕೊನೆಗೆ ಮೌನದಲ್ಲಿ ಮುಕ್ತಾಯವಾಗಬಹುದು. ಕುಟುಂದ ಜೊತೆ ಸಮಯವನ್ನು ಕೊಡುವುದು ಇಂದು ಕಷ್ಟವಾದೀತು. ನಿಮ್ಮ ಸಿಟ್ಟನ್ನು ಎಲ್ಲ ಕಡೆಗಳಲ್ಲಿ ತೋರಿಸುವುದು ಬೇಡ. ಸುಮ್ಮನೇ ವ್ಯರ್ಥವಾದೀತು. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳುವುದು ಉತ್ತಮ. ನಿಮ್ಮವರ ಪ್ರೀತಿಯನ್ನು ನೀವು ಗಳಿಸುವಿರಿ. ಒಂದೇ ಕೆಲಸವನ್ನು ಹೆಚ್ಚು ಸಮಯ ಮಾಡಲು ನಿಮಗೆ ಇಷ್ಟವಾಗದು. ಆಸ್ತಿ ಖರೀದಿಯ ಬಗ್ಗೆ ನಿಮಗೆ ಸ್ಪಷ್ಟತೆ ಸಾಕಾಗದು. ಮಾಧ್ಯಮದಲ್ಲಿ ಇರುವವರು ಹೆಚ್ಚು ಪ್ರಚಾರವನ್ನು ಪಡೆಯುವರು. ಕಲಾವಿದರಿಗೆ ಕೆಲವು ಒಳ್ಳೆಯವ ಅವಕಾಶಗಳು ಸಿಗಲಿವೆ.

ಕಟಕ: ಮೋಸ ಹೋಗುವ ಸಾಧ್ಯತೆ ಇದೆ. ಮನೋಬಲವನ್ನು ಹೆಚ್ಚಿಸಿಕೊಳ್ಳುವ ವಿಧಾನವನ್ನು ತಿಳಿಯುವುದು ಒಳ್ಳೆಯದು. ಸುಮ್ಮನೇ ಮಾತನಾಡುವುದು ವ್ಯರ್ಥ ಎಂದು ನಿಮಗೆ ಅನ್ನಿಸಬಹುದು. ಯಾರ ಮೇಲೋ ನಿಮ್ಮ ಅನುಮಾನ ಬರಬಹುದು. ನಿಮ್ಮ‌ ಬಗ್ಗೆ ಬಂಧುಗಳು ಆಡಿಕೊಳ್ಳಬಹುದು. ಸಂಗಾತಿಯಿಂದ ಮಾನಸಿಕ ಕಿರಿಕಿರಿಯಾಗಲಿದೆ. ಪ್ರತಿಭೆಗೆ ಅವಕಾಶಗಳು ಕಡಿಮೆ ಸಿಗಬಹುದು. ವೃತ್ತಿಯಲ್ಲಿ ನೀವು ಸ್ವಸ್ಥಾನವನ್ನು ಭದ್ರವಾಗಿರಿಸಿಕೊಳ್ಳಲು ಪ್ರಯತ್ನಿಸಿ. ಇನ್ನೊಬ್ಬರನ್ನು ನೋಡಿ ಖುಷಿಯಿಂದ ಇರುವುದನ್ನು ಕಲಿಯುವ ಅವಶ್ಯಕತೆ ಇದೆ.

Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು
Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು
ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು
ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ಜನತೆಗೆ ಗುಡ್​ ನ್ಯೂಸ್ ಕೊಟ್ಟ ಕೇಂದ್ರ: ಯಾವೆಲ್ಲಾ ವಸ್ತುಗಳ ಬೆಲೆ ಇಳಿಕೆ?
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್