AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಇಂದು ಕಛೇರಿಯ ಕಾರ್ಯವು ಅಧಿಕವಾಗಿರುವುದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಸೆಪ್ಟೆಂಬರ್ 24) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆ ಇಂದು ಕಛೇರಿಯ ಕಾರ್ಯವು ಅಧಿಕವಾಗಿರುವುದು
ಪ್ರಾತಿನಿಧಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Sep 24, 2023 | 6:43 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಸೆಪ್ಟೆಂಬರ್ 24 ರವಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ಭಾದ್ರಪದ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ:ಪೂರ್ವಾಷಾಢ, ಯೋಗ: ಶೋಭನ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 22 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 26 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 04:56 ರಿಂದ 6:27 ರವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:25 ರಿಂದ 01:55 ರವರೆಗೆ, ಗುಳಿಕ ಕಾಲ ಸಂಜೆ 03:26 ರಿಂದ 04:56ರ ವರೆಗೆ.

ಮೇಷ ರಾಶಿ: ಇನ್ನೊಬ್ಬರಲ್ಲಿ ತಪ್ಪನ್ನೇ ಹುಡುಕುವ ಕೆಲಸ ಇಂದು ಬೇಡ. ಇಂದು ನೀವು ಮಾತನಾಡುವ ಸಂದರ್ಭವು ಕಡಿಮೆ‌ ಇರುವುದು. ಕುಲದ ಮರ್ಯಾದೆಗೆ ತಕ್ಕಂತೆ ವರ್ತಿಸುವಿರಿ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರುವುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ಕೃಷಿಯ ಬಗ್ಗೆ ಒಲವು ಬರಬಹುದು. ನಿಮ್ಮ ವಿಚಾರವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಿರುವುದು.‌ ಇಂದು ನಿಮ್ಮ ಪರಿಚಯವು ಇತರರಿಗೆ ಆಗುವುದು. ವ್ಯಕ್ತಿತ್ವವನ್ನು ನೀವು ಸರಿಯಾಗಿ ಮಾಡಿಕೊಳ್ಳಲು ಗಮನವಿರುವುದು. ಓಡಾಟವು ಅಧಿಕ ಆಯಾಸವನ್ನು ತರಿಸಬಹುದು. ನಿಮ್ಮನ್ನು ನೀವು ಸಮರ್ಥಿಸಿಕೊಳ್ಳುವಿರಿ.

ವೃಷಭ ರಾಶಿ: ನೀವು ಇಂದು ಯಾರ ಮಾತನ್ನೂ ಕೇಳದ ಸ್ಥಿತಿಯಲ್ಲಿ ಇರುವಿರಿ. ಸುಲಭವಾದ ಕಾರ್ಯವನ್ನು ಸಂಕೀರ್ಣ ಮಾಡಿಕೊಳ್ಳುವಿರಿ. ಒಂದೇ ವಿಚಾರಕ್ಕೆ ಹತ್ತು ಬಾರಿ ಹೇಳಿಸಿಕೊಳ್ಳುವಿರಿ. ಕರ್ತವ್ಯದಲ್ಲಿ ನಿರಾಸಕ್ತಿ ಇರುವುದು. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ.. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ಆಸಕ್ತಿಯಿರುವುದು. ನಿಮ್ಮ ವರ್ತನೆಯು ಅಹಂಕಾರದಂತೆ ಇರಲಿದೆ. ಹಣವನ್ನು ಬಹಳ ಜೋಪಾನವಾಗಿ ತೆಗೆದಿಟ್ಟುಕೊಳ್ಳಿ. ಇಷ್ಟ ಮಿತ್ರರ ಸಹವಾಸವು ಸಿಗಬಹುದು. ಭವಿಷ್ಯದ ಬಗ್ಗೆ ಚಿಂತೆ ಆರಂಭವಾಗಲಿದೆ.

ಮಿಥುನ ರಾಶಿ: ಇಂದು ವಿಸ್ಮರಣೆಯಿಂದ ಮಾಡಬೇಕಾದ ಕೆಲಸವನ್ನು ಮಾಡದೇ ಇರುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಷ್ಠೆ ಇರಲಿದೆ. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಆರ್ಥಿಕತೆಯು ದಾಂಪತ್ಯದಲ್ಲಿ ಕಲಹವಾಗುವಂತೆ ಮಾಡುವುದು. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ. ಇರುವುದರಲ್ಲಿ ಸುಖಪಡುವುದನ್ನು ಕಲಿತುಕೊಳ್ಳಬೇಕಾದೀತು. ನಿಮ್ಮವರ ಪ್ರೀತಿಯನ್ನು ಇಂದು ಗಳಿಸುವಿರಿ. ಒಂದೇ ಕೆಲಸವನ್ನು ಬಹಳ ಕಾಲ ಮಾಡುವುದು ನಿಮಗೆ ಇಷ್ಟವಾಗದು. ಆಸ್ತಿ ಖರೀದಿಯ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಲಭ್ಯವಾಗದು. ಸಾಕಾಗದು. ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಸಿಗಲಿದೆ.

ಕಟಕ ರಾಶಿ: ಮನೋವಿಕಾರದಿಂದ ಜೊತೆಗಾರರಿಗೆ ತೊಂದರೆಯಾಗುವುದು. ಪ್ರವಾಸಕ್ಕೆ ಸ್ನೇಹಿತರ ಜೊತೆ ಎಲ್ಲಗಾದರೂ ಹೋಗುವಿರಿ. ಅನಿರೀಕ್ಷಿತ ಧನವನ್ನು ಪಡೆಯುವಿರಿ. ಸಮಾರಂಭಗಳಿಗೆ ಹೋಗುವಿರಿ. ವಂಚನೆಗೆ ಸಿಕ್ಕಿಕೊಳ್ಳುವಿರಿ. ಯೋಗ್ಯತೆ ಅನುಸಾರವಾಗಿ ನಿಮ್ಮ ಮಾತು ಇರಲಿ.‌ ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಸುಮ್ಮನೇ ಮಾತಿಗಾಗಿ ಮಾತು ಬೆಳೆಸುವುದು ಬೇಡ. ನಿಮ್ಮ ತಪ್ಪನ್ನು ಯಾರದೋ ಮೇಲೆ ಹಾಕಿ ಖುಷಿ ಪಡುವಿರಿ. ಸಂಗಾತಿಯಿಂದ ಮಾನಸಿಕ ಕಿರಿಕಿರಿ ಇರುವುದು. ಪ್ರತಿಭೆಯ ಪ್ರದರ್ಶನಕ್ಕೆ ಅವಕಾಶಗಳು ಸಿಗದೇ ಹೋಗಬಹುದು. ವೃತ್ತಿಯಲ್ಲಿ ನಿಮ್ಮ ಸ್ಥಾನವನ್ನು ಭದ್ರವಾಗಿರಿಸಿಕೊಳ್ಳಲು ನೋಡುವಿರಿ.

-ಲೋಹಿತಶರ್ಮಾ – 8762924271 (what’s app only)