AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಹೊಸತನ್ನು ಕಲಿಯುವ ಹಂಬಲ ಕಡಿಮೆ, ನಿಮ್ಮ ಬೆಂಬಲಕ್ಕೆ ಯಾರೂ ಬರದಿರುವುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಹೊಸತನ್ನು ಕಲಿಯುವ ಹಂಬಲ ಕಡಿಮೆ, ನಿಮ್ಮ ಬೆಂಬಲಕ್ಕೆ ಯಾರೂ ಬರದಿರುವುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 25, 2023 | 12:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 25 ಮಂಗಳವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಭವಿಷ್ಯ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ಅಷ್ಟಮೀ, ನಿತ್ಯನಕ್ಷತ್ರ: ಸ್ವಾತೀ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 02 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:51 ರಿಂದ 05:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:39 ರಿಂದ 02:15ರ ವರೆಗೆ.

ಮೇಷ: ಅನಿವಾರ್ಯ ಕಾರಣದಿಂದ ನಿಮ್ಮ ಇಂದಿನ ಯೋಜನೆಯನ್ನು ಬದಲಿಸಬೇಕಾಗುವುದು. ಸಿಟ್ಟುಗೊಳ್ಳುವ ಸಂದರ್ಭದಲ್ಲಿ ನಿಮ್ಮ ನಿಯಂತ್ರಣವನ್ನು ಕಳೆದುಕೊಳ್ಳುವುದು ಬೇಡ. ಸಂಗಾತಿಯನ್ನು ನೀವು ಬೇಸರಿಸಿ ಸಮಾಧಾನ ಮಾಡುವಿರಿ. ನಿದ್ರೆಯನ್ನು ಅಧಿಕವಾಗಿ ಮಾಡಲಿದ್ದೀರಿ. ಸಹೋದರರ ಭೇಟಿಯು ಸಂತಸವನ್ನು ನೀಡುವುದು. ನೌಕರರಿಂದ ನಿಮ್ಮ ಕೆಲಸವು ಸುಲಭವಾಗುವುದು. ಮನೆಯಲ್ಲಿ ನೆಮ್ಮದಿಯ ಕೊರತೆ ಇದ್ದ ಕಾರಣ ವಾಯುವಿಹಾರವನ್ನು ಸ್ನೇಹಿತರ‌ ಜೊತೆ ಮಾಡುವಿರಿ. ಒತ್ತಡವನ್ನು ಉಪಾಯದಿಂದ ಕಡಿಮೆ ಮಾಡಿಕೊಳ್ಳುವಿರಿ.

ವೃಷಭ: ನ್ಯಾಯಾಲಯದ ವಿಚಾರದಲ್ಲಿ ನಿಮಗೆ ಜಯವು ಸಿಗಲಿದೆ. ಹಳೆಯ ಖಾಯಿಲೆಯು ಮರುಕಳಿಸಿದ್ದರಿಂದ ಸಂಕಟಪಡುವಿರಿ. ಗೆಳೆಯರ ಸಹವಾಸವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ. ಮುಖಂಡರಾಗಿ ಪಕ್ಷಪಾತವನ್ನು ಮಾಡುವುದು ಯೋಗ್ಯವಾಗದು. ನಿಮಗೆ ಹೆಚ್ಚು ವಿದ್ಯಾಭ್ಯಾಸವನ್ನು ಮಾಡಬೇಕು ಎಂದನಿಸಬಹುದು. ಮನೆಯಿಂದ ದೂರವಿರಲು ಇಷ್ಟಪಡುವಿರಿ. ಬರುವ ಹಣದ ನಿರೀಕ್ಷೆಯಲ್ಲಿ ಇರುವಿರಿ. ಸಾಹಸಕ್ಕೆ ಹೋಗುವುದು ಬೇಡ. ಇರುವ ಉದ್ಯೋಗವನ್ನು ಸರಿಯಾಗಿ ಮಾಡಲು ಪ್ರತ್ನಿಸುವುದು ಉತ್ತಮ.

ಮಿಥುನ: ನಿಮ್ಮವರೇ ಆದರೂ ನೀವು ನಂಬಿಕೆಯನ್ನು ಇಡಲಾರಿರಿ. ಹೊಸತನ್ನು ಕಲಿಯುವ ಹಂಬಲವು ಕಡಿಮೆಯಾಗಬಹುದು. ನಿಮ್ಮದೇ ರೀತಿಯ ಮಾರ್ಗದಲ್ಲಿ ನೀವು ಮುಂದುವರಿಯುವಿರಿ. ಯಾರ ಮಾತನ್ನೂ ಕೇಳುವ ತಾಳ್ಮೆ ಕಡಿಮೆ ಆಗಬಹುದು. ಕಛೇರಿಯಲ್ಲಿ ನಿಮ್ಮ ಬೆಂಬಲಕ್ಕೆ ಯಾರೂ ಬರದಿರುವುದು ಬೇಸರವನ್ನು ತರಿಸುವುದು. ಇಂದಿನ ಕೆಲಸವು ಸಮಯದ ಅಭಾವದಿಂದ ಪೂರ್ಣವಾಗದು. ಮನಸ್ಸಿನ ಸ್ಥಿರತೆಯನ್ನು ತಂದುಕೊಳ್ಳುವುದು ಕಷ್ಟವಾದೀತು. ಪರನಿಂದನೆಯಿಂದ ಆಚೆ ಬರುವುದು ಉತ್ತಮ.

ಕಟಕ: ದಾನದಲ್ಲಿ‌ ನೀವು ಬಹಳ ಹಿಂಗೈಯುಳ್ಳವರಾಗುವಿರಿ. ಬಿಚ್ಚು ಮನಸ್ಸಿನಿಂದ ನೀವು ಮಾತನಾಡುವುದು ಕಷ್ಟವಾದೀತು. ಕಛೇರಿಯಲ್ಲಿ ನಿಮ್ಮ ಬಗ್ಗೆ ನಕಾರಾತ್ಮಕ ಅಭಿಪ್ರಾಯಗಳು ಕೇಳಿ ಬಂದರೂ ನಿಮ್ಮ‌ ಮೌನವು ಮಾತಾಗಿ ಬಾರದು. ಸಂಗಾತಿಯನ್ನು ಪಡೆಯಲು ನೀವು ಬಹಳ ಶ್ರಮವಹಿಸುವಿರಿ. ಕೃಷಿಕರು ತಮ್ಮ ಕಾರ್ಯದಲ್ಲಿ ಮಗ್ನರಾಗುವರು. ಆಹಾರದ ವಿಚಾರದಲ್ಲಿ ನೀವು ಆಯ್ಕೆಯನ್ನು ಇಟ್ಟುಕೊಳ್ಳುವಿರಿ. ಸೌಂದರ್ಯವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನವು ಬಹಳ ಉತ್ಸಾಹದಿಂದ ಸಾಗುವುದು. ಮಕ್ಕಳಿಗೆ ಪ್ರೀತಿಯನ್ನು ತೋರಿಸಲು ಸಮಯದ ಅಭಾವ ಆಗಬಹುದು.

ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಕಾ ಕ್ಯಾಪ್ಟನ್ ಆಗಿದ್ದು ಇಷ್ಟ ಆಗಿಲ್ಲ ಎಂದ ಸೂರಜ್; ಆಪ್ತರಲ್ಲೇ ಕಿತ್ತಾಟ
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ರಾಶಿಗಳಿಗನುಗುಣವಾಗಿ ಕಷ್ಟಗಳಿಂದ ಪಾರಾಗುವುದು ಹೇಗೆ ಗೊತ್ತಾ?
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ