AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ, ಅತಿ ಕೋಪ ಒಳ್ಳೆಯದಲ್ಲ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ, ಅತಿ ಕೋಪ ಒಳ್ಳೆಯದಲ್ಲ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 27, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 27  ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಭಾನು, ತಿಥಿ: ಏಕಾದಶೀ, ನಿತ್ಯನಕ್ಷತ್ರ: ಪೂರ್ವಾಷಾಢಾ, ಯೋಗ: ಪ್ರೀತಿ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹುಕಾಲ ಬೆಳಿಗ್ಗೆ 05:13 ರಿಂದ 06:47ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:40 ರಿಂದ 05:13ರ ವರೆಗೆ.

ಮೇಷ ರಾಶಿ: ಹೆಚ್ಚು ಖುಷಿಯಾಗಿ ಇಂದು ಇರಲಿದ್ದೀರಿ.‌ ಒಬ್ಬರೇ ಒಂಟಿಯಾಗಿ ಎಲ್ಲಿಗಾದರೂ ಹೋಗುವ ಮನಸ್ಸಾದೀತು. ಅಧಿಕಾರದ ವಿಚಾರದಲ್ಲಿ ನೀವು ಮೋಸ ಹೋಗಬಹುದು. ಆರ್ಥಿಕ ಮೌಲ್ಯವನ್ನು ನೀವು ತಿಳಿದುಕೊಳ್ಳುವಿರಿ. ಇಂದು ನಿಮ್ಮ‌ ಮನಸ್ಸು ಬಹಳ ಅತಂತ್ರವಾಗಿ ಇರಲಿದೆ. ಒಂದೇ ವಿಚಾರವನ್ನು ಮತ್ತೆ ಮತ್ತೆ ನೆನಪಿಸಬೇಕಾದೀತು. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೆ ಬೇಸರಿಸುವಿರಿ. ಸಾಮರಸ್ಯವನ್ನು ಕಾಪಾಡಿಕೊಳ್ಳಲು ಯತ್ನಿಸುವಿರಿ.

ವೃಷಭ ರಾಶಿ: ಸಮಾರಂಭಗಳಿಗೆ ಮುಖ್ಯ ಅತಿಥಿಯಾಗಿ ಹೋಗುವಿರಿ. ವಿದ್ಯಾರ್ಥಿಗಳು ಕೌಶಲವನ್ನು ಪ್ರದರ್ಶಿಸುವರು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ಹುಸಿಗೊಳಿಸುವಿರಿ. ದಿನದ ಆರಂಭವು ಬಹಳ ಸಂತೋಷದಿಂದ‌ ಇರಲಿದೆ. ಸ್ವಾಭಿಮಾನವನ್ನು ಬಿಟ್ಟು ನೀವು ಬದಲಾಗುವುದಿಲ್ಲ. ಕೋಪವನ್ನು ಸ್ವಲ್ಪ ಕಡಿಮೆ‌ ಮಾಡಿಕೊಳ್ಳುವುದು ಉತ್ತಮ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಸದ್ಯದ ಸೂಕ್ತ ಪರಿಹಾರ. ಸಂಗಾತಿಯನ್ನು ನೀವು ಕೆಲವು ವಿಚಾರಗಳಿಗೆ ಬೇಸರಿಸಿ ಸಮಾಧಾನ ಮಾಡುವಿರಿ. ಅಸಮಯದ ಭೋಜನದಿಂದ‌ ನಿಮಗೆ ಆರೋಗ್ಯವು ಹಾಳಾಗುವುದು. ನೀವು ಯತ್ನಿಸಿದ ಕೆಲಸವು ಪೂರ್ಣಫಲಪ್ರದವಾಗದು.

ಮಿಥುನ ರಾಶಿ: ಉದ್ಯೋಗವನ್ನು ಪ್ರಾಮಾಣಿಕತೆಯಿಂದ ಮಾಡುವಿರಿ. ಕೆಲವು ಔದ್ಯೋಗಿಕ ಸಮಸ್ಯೆಯನ್ನು ಮೇಲಧಿಕಾರಿಗಳ ಮೂಲಕ ಬಗೆ ಹರಿಸಿಕೊಳ್ಳಿ. ನಿಮ್ಮ ಆಸ್ತಿಯ ಬಗ್ಗೆ ನಿಮಗೆ ಸಂಪೂರ್ಣ ಮಾಹಿತಿಯ ಕೊರತೆ ಇರಲಿದೆ.‌ ಮನಸ್ಸಿನಲ್ಲಿ ಇರುವು ವಿಚಾರವನ್ನು ಯಾರ ಜೊತೆಗಾದರೂ ಹೇಳಿಕೊಳ್ಳಿ. ನಿಮ್ಮ‌ ನೋವಿಗೆ‌ ಸ್ಪಂದಿಸಲು ಸಿಗುವರು. ನಿಮ್ಮ‌ ಕ್ರಿಯಾಶೀಲತೆಗೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನೀವು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ನಿಮಗೆ ಇಷ್ಟವಾದುದನ್ನು ಕೇಳಿ ಪಡೆದುಕೊಳ್ಳುವಿರಿ. ಹಣವನ್ನು ಉಳಿತಾಯ ಮಾಡಿದ್ದರ ಸಮಾಧಾನವು ಸಿಗಲಿದೆ.

ಕಟಕ ರಾಶಿ: ಹಣಕಾಸಿನ ವಿಚಾರದಲ್ಲಿ ನೀವು ಹತಾಶಭಾವದಿಂದ ಇರುವಿರಿ. ದಿನದಿಂದ ದಿನಕ್ಕೆ ಆರೋಗ್ಯದಲ್ಲಿ ಕ್ಷೀಣತೆ ಇರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಅಧಿಕವಾಗಿ ಕಾಣಿಸುವುದು. ನಿಮಗೆ ಸ್ಥಿರ ಬುದ್ಧಿಯನ್ನು ತಂದುಕೊಳ್ಳಲು ಆಗದು.‌ ಹತ್ತಾರು ಯೋಚನೆಗಳು ಒಂದಾದಮೇಲೆ ಒಂದರಂತೆ ಬರುವುದು. ನೀವು ಮಾಡಿದ ಕೆಲಸವು ನಿಮಗೇ ಇಷ್ಟವಾಗದು. ತಾಯಿಯ ಮಾತನ್ನು ನೀವು ಅಸಡ್ಡೆಯಿಂದ ಕೇಳುವಿರಿ. ಸಾಹಸಮಯವಾದ ಕೆಲಸಕ್ಕೆ ಹೋಗುವುದು ಬೇಡ.‌ ನಿಮಗೆ ಸಿಗಬೇಕಾದ ಹಣವು ವಿಳಂಬವಾಗಿದ್ದಕ್ಕೆ ಬೇಸರಗೊಳ್ಳುವಿರಿ. ನಿಮ್ಮ‌ ಕೌಶಲವನ್ನು ಕೆಲಸದಲ್ಲಿ ತೋರಿಸಿ. ಯಾರ ಜೊತೆಗೋ ವಾಗ್ವಾದಕ್ಕೆ ಹೋಗಿ ನೀವೇ ಸಿಕ್ಕಿಕೊಳ್ಳುವಿರಿ.

ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ಮೂರು-ಪರೀಕ್ಷೆ ನೀತಿಯಿಂದ ಸಹಸ್ರಾರು ವಿದ್ಯಾರ್ಥಿಗಳಿಗೆ ಪ್ರಯೋಜನ: ಮಧು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ನಿರಂತರ ಮಳೆಗೆ ದೇವಿಮನೆ ಘಟ್ಟ ಭಾಗದ ಗುಡ್ಡ ಕುಸಿತ: ಹೆದ್ದಾರಿ ತುಂಬಾ ಮಣ್ಣು
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಯಾಕೆ ಅಂತ ಗೊತ್ತಿದೆ: ವಿಜಯೇಂದ್ರ
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ಕೆಆರ್​ಎಸ್​ ಡ್ಯಾಂನ ಕ್ರಸ್ಟ್ ಗೇಟ್ ಬಳಿ ಯುವಕರ ಹುಚ್ಚಾಟ: ವಿಡಿಯೋ ವೈರಲ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ಬೆಣ್ಣೆಹಳ್ಳದಲ್ಲಿ ಪ್ರತಿವರ್ಷ ಪ್ರವಾಹದಂಥ ಸ್ಥಿತಿಯಿಂದ ಮೂರು ಬೆಳೆ ನಷ್ಟ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ