AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ, ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುವಿರಿ

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ, ಮಕ್ಕಳೊಂದಿಗೆ ಹೆಚ್ಚು ಸಮಯ ಕಳೆಯಲು ಇಷ್ಟಪಡುವಿರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Aug 29, 2023 | 12:10 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಆಗಸ್ಟ್ 29 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಮಘಾ, ಮಾಸ: ನಿಜ ಶ್ರಾವಣ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಶ್ರವಣಾ, ಯೋಗ: ಸೌಭಾಗ್ಯ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 45 ನಿಮಿಷಕ್ಕೆ, ರಾಹುಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:27 ರಿಂದ 11:00ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:33 ರಿಂದ 02:06ರ ವರೆಗೆ.

ಮೇಷ ರಾಶಿ: ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ದೂರ ಕಳಿಸುವಿರಿ. ಸ್ಥಾನಮಾನವನ್ನು ಪಡೆಯಲು ಯಾವುದಾದರೂ ಮಾರ್ಗವನ್ನು ಪಡೆಯುವಿರಿ. ಬೇರೆ ಬೇರೆ ಆಲೋಚನೆಯನ್ನು ಮಾಡುವಿರಿ. ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳುವಿರಿ. ಅನಗತ್ಯ ಕಾರ್ಯಗಳತ್ತ ಮನಸ್ಸು ಹೋಗುವುದು. ಸಂಗಾತಿಯು ನಿಮ್ಮ ಹಳೆಯ ವಿಚಾರವನ್ನು ನೆನಪಿಸಿ ಜಗಳವಾಡುವರು. ಜಲಭೀತಿಯು ನಿಮಗೆ ಆಗಲಿದೆ. ಯಾರನ್ನೋ ಮೆಚ್ಚಿಸಲು ಕೆಲಸ ಮಾಡಬೇಕಾಗಬಹುದು. ನಿಮ್ಮ‌ ಮಾತಿಗೆ ವಿರೋಧವು ಬರಬಹುದು. ನೀವು ನಿಶ್ಚಿಂತರಾಗಿರಿ.

ವೃಷಭ ರಾಶಿ: ಮನೆಯ ಕೆಲಸದಿಂದ ನಿಮಗೆ ಆಯಾಸವಾಗುವುದು. ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಅನಿರೀಕ್ಷಿತ ವಾರ್ತಯಿಂದ ಬೇಸರವಾಗಲಿದೆ. ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಷ್ಟಪಡುವಿರಿ. ಯಾರಾದರೂ ನಿಮಗೆ ಬೇಸರ ಮಾಡಿಸುವರು. ಆದರೆ ನಿಮಗೆ ಮೌನವೇ ಇಷ್ಟವಾದೀತು. ಇಬ್ಬಗೆಯ ಮನಃಸ್ಥಿತಿಯನ್ನು ಇಟ್ಟಕೊಂಡರೆ ಕಷ್ಟವಾಗುವುದು. ಕುಟುಂಬದ ಹತ್ತಿರದವರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ವೈದ್ಯ ವೃತ್ತಿಯಲ್ಲಿ ಅಪವಾದವು ಬರಬಹುದು. ಮಾನಸಿಕ ಕಿರಿಕಿರಿಯಿಂದ ನೆಮ್ಮದಿ ಸಿಗಲಿದೆ.

ಮಿಥುನ ರಾಶಿ: ಯಾವಾಗಲೂ ಸಿಟ್ಟು ಮಾಡುತ್ತಿದ್ದರೆ ನಿಮ್ಮ‌ ಸಿಟ್ಟಿಗೆ ಯಾವ ಬೆಲೆಯೂ ಇರದು. ಪ್ರಾಪಂಚಿಕ ಸುಖದಲ್ಲಿ ಆಸಕ್ತಿಯು ಕಡಿಮೆ ಇರುವುದು. ಅಧ್ಯಾತ್ಮದ ವಿಚಾರಕ್ಕೆ ಹೆಚ್ಚು ಒತ್ತು ಕೊಡುವಿರಿ. ಇನ್ನೊಬ್ಬರ ದುಃಖಕ್ಕೆ ನೀವು ಸ್ಪಂದಿಸುವಿರಿ. ಎಲ್ಲರ ಜೊತೆ ಸಂತೋಷದಿಂದ ಇರಲು ಇಷ್ಟಪಡುವಿರಿ. ನಿಮ್ಮ ಭಾವನೆಗಳಿಗೆ ಬೆಲೆ ಕೊಡುವವರು ನಿಮಗೆ ಇಷ್ಟವಾಗುವರು. ಇಂದು ನೀವು ಸ್ವಾರ್ಥವನ್ನು ಬಿಟ್ಟು ಕೆಲಸ ಮಾಡಲು ಬಯಸುವಿರಿ. ಹಣಕಾಸಿನ ವಿಚಾರದಲ್ಲಿ ನಿಮಗೆ ಬಹಳ ಗೊಂದಲವಾಗಲಿದೆ. ಸಾಮಾಜಿಕ ಕಾರ್ಯವನ್ನು ಮಾಡಲು ಇಷ್ಟವಾಗುವುದು. ಎಲ್ಲ ಕೆಲಸವನ್ನೂ ನೀವೇ ಮಾಡಬೇಕೆಂಬ ಆಸೆ ಇರುವುದು.

ಕಟಕ ರಾಶಿ: ಹೊಂದಾಣಿಕೆಯ ಮನೋಭಾವವು ನಿಮಗೆ ಆಗದು. ಯಾರ ಜೊತೆಗೂ ನಿಮ್ಮ ವರ್ತನೆಯು ಸಹಜತೆಯಿಂದ ಇರದು. ಆಸ್ತಿಯ ವಿಚಾರದಲ್ಲಿ ಆಂತರಿಕ ಕಲಹವು ದೊಡ್ಡದಾಗಬಹುದು. ದಾಂಪತ್ಯದಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಬೇಕಾಗುವುದು. ನಿಮ್ಮದೇ ಆದ ಕಾರ್ಯದಲ್ಲಿ ನೀವು ಮಗ್ನರಾಗುವಿರಿ. ವೃತ್ತಿಯಲ್ಲಿ ನಿಮಗೆ ಸಹಕಾರವು ಸಿಗದು. ನಾಲ್ಕಾರು ಕಾರ್ಯಗಳನ್ನು ಒಟ್ಟಿಗೇ ವಹಿಸಿಕೊಳ್ಳುವಿರಿ. ಪ್ರಯಾಣದಲ್ಲಿ ನೀವು ಎಚ್ಚರಿಕೆಯಿಂದ ಇರಬೇಕಾಗುವುದು. ಕೇಳಿದ್ದಕ್ಕಷ್ಟೇ ಉತ್ತರವನ್ನು ಕೊಟ್ಟು ಸುಮ್ಮನಾಗುವಿರಿ. ಸತ್ಯವನ್ನು ನೀವು ಮರೆಮಾಡಲು ಪ್ರಯತ್ನಿಸುವಿರಿ.

ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ