AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆರಾಜಕೀಯದ ಅನಿರೀಕ್ಷಿತ ಬದಲಾವಣೆಯ ಬಿಸಿಯು ನಿಮಗೂ ತಟ್ಟಬಹುದು

ಚಂದ್ರ, ಸೂರ್ಯನ ಸಂಚಾರ ಚೆನ್ನಾಗಿರಬೇಕು. ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ. ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (ಅಕ್ಟೋಬರ್ 31) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ಈ ರಾಶಿಯವರಿಗೆರಾಜಕೀಯದ ಅನಿರೀಕ್ಷಿತ ಬದಲಾವಣೆಯ ಬಿಸಿಯು ನಿಮಗೂ ತಟ್ಟಬಹುದು
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ|

Updated on: Oct 31, 2023 | 12:03 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 31) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಕೃತಿಕಾ, ಯೋಗ: ಶುಭ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 28 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:10 ರಿಂದ 04:37 ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 09: 22 ರಿಂದ 10:49 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:16 ರಿಂದ 13:43ರ ವರೆಗೆ.

ಮೇಷ ರಾಶಿ: ನ್ಯಾಯಾಲಯದ ಆದೇಶಕ್ಕೆ ತಲೆ ಬಾಗಿ ನಿಮ್ಮ ಮುಂದಿನ ಕೆಲಸವನ್ನು ಮಾಡುವಿರಿ. ಕಳೆದುಕೊಂಡ ವಸ್ತುವಿನ ಮೌಲ್ಯವನ್ನು ಪಡೆಯುವಿರಿ. ಹದಗೆಡುವ ಆರೋಗ್ಯವನ್ನು ಮೊದಲೇ ಸರಿಮಾಡಿಕೊಂಡು ಜಾಣರಾಗಿರಿ. ಒಂದೇ ವಿಚಾರದ ಬಗ್ಗೆ ಹೆಚ್ಚು ಹೊತ್ತು ಚಿಂತಿಸಿದರೂ ಪ್ರಯೋಜನವಾಗದು. ದುರಭ್ಯಾಸವನ್ನು ಬೆಳೆಸಿಕೊಳ್ಳುವುದು ಬೇಡ. ಆಕಸ್ಮಿಕವಾಗಿ ಆರ್ಥಿಕಲಾಭವಿದ್ದರೂ ಸಂತೋಷವಾಗದು. ಸಂತೋಷವನ್ನು ಹೇಳಿಕೊಳ್ಳಲು ನಿಮ್ಮ ಜೊತೆ ಯಾರೂ ಇಲ್ಲವೆನಿಸುವುದು. ಆಪ್ತರ ಮಾತಿಗೆ ಕಿವಿಯಾಗಿರುವಿರಿ. ಸಿಕ್ಕ ಅವಕಾಶಗಳನ್ನು ನೀವು ಯೋಗ್ಯ ರೀತಿಯಿಂದ ಬಳಸಿಕೊಳ್ಳಬೇಕಾದೀತು. ಸಮಾರಂಭಗಳಿಗೆ ಒಂಟಿಯಾಗಿ ಹೋಗುವಿರಿ.

ವೃಷಭ ರಾಶಿ: ರಪ್ತು ವ್ಯಾಪಾರವು ಸುಗಮವಾಗಿ ಸಾಗುವುದು. ನೌಕರರ ಸಮಸ್ಯೆಗಳಿಗೆ ಸ್ಪಂದಿಸುವಿರಿ. ಅಪರಿಚಿತರಿಗೆ ನಿಮ್ಮ ವಾಹನವನ್ನು ಕೊಟ್ಟು ಕೆಡಿಸಿಕೊಳ್ಳುವಿರಿ. ದೂರಪ್ರಯಾಣವನ್ನು ಮಾಡಲು ಮನಸ್ಸು ಒಪ್ಪದು. ಸಮಯಪ್ರಜ್ಞೆಯಿಂದ ನೀವು ಯೋಗ್ಯ ಮಾತುಗಳನ್ನು ಆಡುವಿರಿ. ನಿಮ್ಮ ಆತಂಕವನ್ನು ನೀವು ಆಪ್ತರ ಜೊತೆ ಹೇಳಿಕೊಳ್ಳಿ. ಯಾರದೋ ಪ್ರೇರಣೆಯಿಂದ ನಿಮ್ಮ ಬದುಕು ಬದಲಾವಣೆಯ ಕಡೆ ಹೋಗಲಿದೆ. ಪ್ರೀತಿಯು ಸಿಗದೇ ಮೀನಿನಂತೆ ಒದ್ದಾಡುವಿರಿ. ಕೊಟ್ಟ ಹಣವನ್ನು ಪುನಃ ಹಿಂದಿರುಗಿಸಿ ಪ್ರಶಂಸೆ ಪಡೆಯುವಿರಿ. ನಿಮ್ಮ ಊಹೆಯನ್ನು ಸಮರ್ಥಿಸಿಕೊಳ್ಳಲು ಹೋಗಿ ವಾದ ಮಾಡಬೇಕಾದೀತು.

ಮಿಥುನ ರಾಶಿ: ಮಕ್ಕಳ ವಿವಾಹದ ಆತಂಕವು ನಿಮ್ಮಲ್ಲಿ ಇರಬಹುದು. ತಂದೆಯ ಜೊತೆಗಿನ ಮನಸ್ತಾಪವನ್ನು ನೀವು ಕುಳಿತು ಬಗೆಹರಿಸಿಕೊಳ್ಳುವುದು ಸೂಕ್ತ. ಕಲಾವಿದರು ಹೊಸ ಅವಕಾಶಗಳನ್ನು ಪಡೆದುಕೊಳ್ಳುವರು. ನಿಮ್ಮ ವಿದ್ಯೆಗೆ ಗೌರವ ಸಿಗುವುದು. ಅತಿಯಾದ ಅಸೆಯಿಂದ ನಿಮ್ಮಲ್ಲಿರುವ ವಸ್ತುವು ನಿಮಗೆ ದುಃಖಕೊಟ್ಟೀತು. ಅಪರಿಚಿತರ ಸಲಹೆಗಳು ನಿಮಗೆ ಯೋಗ್ಯವೆನಿಸಬಹುದು. ಸಂಗಾತಿಯನ್ನು ನೋಡುವ ದೃಷ್ಟಿಯು ಬದಲಾದೀತು‌. ನೀವಿಟ್ಟ ನಂಬಿಕೆಯನ್ನು ಉಳಿಸಿಕೊಳ್ಳಲು ನಿಮ್ಮವರು ಕಷ್ಟಪಟ್ಟಾರು. ಇಂದು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಅವಕಾಶ ಇರಲಿದೆ. ಅಧ್ಯಾತ್ಮದಲ್ಲಿ ಪ್ರೀತಿಯು ಹೆಚ್ಚಾಗಬಹುದು.

ಕಟಕ ರಾಶಿ: ರಾಜಕೀಯದ ಅನಿರೀಕ್ಷಿತ ಬದಲಾವಣೆಯ ಬಿಸಿಯು ನಿಮಗೂ ತಟ್ಟಬಹುದು. ಕೆಲವನ್ನು ನೀವು ಹೇಳಿ ಮಾಡುವುದು ಸಾಧ್ಯವಾಗದು. ಕಳ್ಳತನದ ಭೀತಿ ಇರಲಿದೆ. ಅಕಸ್ಮಾತ್ ವಾಹನದಿಂದ ಬೀಳಬಹುದು. ಸಣ್ಣ ಗಾಯಗಳೂ ಆಗಬಹುದು. ಮನೆಯ ಸ್ವಚ್ಛತೆಯ ಕಡೆ ಗಮನ ಇರಲಿದೆ. ಸಣ್ಣ ಉದ್ಯೋಗದವರು ಅಲ್ಪ ಲಾಭವನ್ನು ಗಳಿಸುವರು. ಉದ್ಯೋಗದ ನಿಮಿತ್ತ ಸುತ್ತಾಡುವುದರಿಂದ ಅನಾರೋಗ್ಯಕ್ಕೆ ಕಾರಣವಾಗಬಹುದು. ಅಧಿಕ ಒತ್ತಡವು ನಿಮ್ಮ ಕಾರ್ಯಕ್ಕೆ ಭಂಗ ತರಬಹುದು. ಕಬ್ಬಿಣದ ವ್ಯಾಪರದಿಂದ ಲಾಭವನ್ನು ಪಡೆಯುವಿರಿ. ವೃತ್ತಿಯಲ್ಲಿ ನಿಮ್ಮ ಬಗ್ಗೆ ಸಲ್ಲದ ಮಾತುಗಳು ಕೇಳಿ ಆತಂಕವಾಗಬಹುದು. ಸಾಮಾಜಿಕ ಕೆಲಸಗಳಿಂದ ನೀವು ಪ್ರಶಂಸೆಯನ್ನು ಪಡೆಯಬಹುದು.

ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ಸುಜಾತ ಭಟ್ ಗೆ ಮಹೇಶ್ ತಿಮರೋಡಿ ಕೆಲದಿನ ಆಶ್ರಯ ನೀಡಿದ್ದರು: ಜಯಂತ್
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ರಸ್ತೆ ಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಮೇಲೆ ಹತ್ತಿ ಎಳೆದುಕೊಂಡು ಹೋದ ಕಾರು!
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ಕೆಎಸ್​ಸಿಎಗೆ ಪರವಾನಗಿ ಇರದಿದ್ದರೆ ಡಿಸಿಎಂ ಹೋಗಿದ್ದು ಯಾಕೆ? ಅಶೋಕ
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ನಿಯಮಗಳನ್ನು ಉಲ್ಲಂಘಿಸಿ ತಿಮರೋಡಿಯವರನ್ನು ಬಂಧಿಸಲಾಗಿದೆ: ಮಟ್ಟಣ್ಣನವರ್
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ವಿವಾದದಲ್ಲಿ ರಮೋಲಾ; ಸಿನಿಮಾದಲ್ಲಿ ನಟಿಸಿ ಪ್ರಮೋಷನ್​ಗೆ ಬರಲ್ಲ ಎಂದ ನಟಿ?
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರವನ್ನು ಅಬೆಟರ್ ಅನ್ನೋದು ಸರಿಯಲ್ಲ: ಸಿಎಂ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ರಸ್ತೆ ತಡೆಗೋಡೆ ಮೇಲೆ ಕುಳಿತು ಕ್ಯಾಮೆರಾಗೆ ಪೋಸ್​​ ಕೊಟ್ಟ ಚಿರತೆ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ವಿರೇಂದ್ರ ಪಪ್ಪಿ ಜೊತೆ ಕುಸುಮ ಸಹೋದರನ ವ್ಯಾವಹಾರಿಕ ಸಂಬಂಧ ಹಿನ್ನೆಲೆ ದಾಳಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ ತೆಗೆದುಕೊಂಡ ಯಾವುದೇ ನಿರ್ಧಾರ ವ್ಯರ್ಥವಾಗುವುದಿಲ್ಲ: ಮೋದಿ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
ಬಿಹಾರದಲ್ಲಿ 13 ಸಾವಿರ ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ