AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯ ಪ್ರೇಮಿಗಳ‌ ನಡುವೆ ಸಣ್ಣ ಬಿರುಕು ಉಂಟಾಗಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯ ಪ್ರೇಮಿಗಳ‌ ನಡುವೆ ಸಣ್ಣ ಬಿರುಕು ಉಂಟಾಗಬಹುದು
ಇಂದಿನ ರಾಶಿಭವಿಷ್ಯImage Credit source: freepik
Rakesh Nayak Manchi
Rakesh Nayak Manchi|

Updated on: Jun 10, 2023 | 12:15 AM

Share

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ವಿಷ್ಕಂಭ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:18 ರಿಂದ 10:55ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:04 ಗಂಟೆ 07:41ರ ವರೆಗೆ.

ಮೇಷ: ನಿಮ್ಮ ಜವಾಬ್ದಾರಿಯು ಮುಕ್ತಾಯ ಆಗಬಹುದು. ತಂದೆಯಿಂದ ಸಂಪತ್ತನ್ನು ಅಪೇಕ್ಷಿಸುವಿರಿ. ನಿಮ್ಮ ವ್ಯವಹಾರವು ಲಾಭವನ್ನು ತಂದುಕೊಡಲಿದೆ. ಅತಿಯಾದ ನಿರೀಕ್ಷೆಯನ್ನು ಖಂಡಿತವಾಗಿ ಇಟ್ಟುಕೊಳ್ಳಬೇಡಿ. ಸಂದರ್ಭೋಚಿತ ನಿಮ್ಮ ವರ್ತನೆಯು ಅಪಾರ್ಥವನ್ನು ಕೊಡಬಹುದು. ಸ್ನೇಹಿತರಿಗೆ ಮಾಡಿದ ಸಹಾಯಕ್ಕೆ ಕೃತಜ್ಞತೆಯನ್ನು ಅರ್ಪಿಸುವಿರಿ. ದೇವರನ್ನು ನೀವು ಬಲವಾಗಿ ನಂಬಿ ಕೆಲಸದಲ್ಲಿ ಆಸಕ್ತಿಯನ್ನು ಇಟ್ಟುಕೊಳ್ಳಿ. ಉತ್ತಮ ಗತಿಯೂ ಸಿಕ್ಕೀತು. ನಿರ್ಧಾರಗಳು ಅಸ್ಪಷ್ಟವಾಗಿ ಇರುವುದು ಬೇಡ.

ವೃಷಭ: ಕಡಿಮೆ ಶ್ರಮದಿಂದ ಹೆಚ್ಚು ಗಳಿಸುವ ಬಗ್ಗೆ ಚಿಂತಿಸುವಿರಿ. ‌ಯಾರನ್ನೂ ದ್ವೇಷಿಸುವ ಮನಃಸ್ಥಿತಿಯನ್ನು ಬೆಳೆಸಿಕೊಳ್ಳುವುದು ಬೇಡ.‌ ಕೆಲಸಗಾರರ ಜೊತೆ ನೀವು ಜಗಳ ಮಾಡಿಕೊಳ್ಳುವಿರಿ‌. ಉದ್ಯಮವು ನಿಮ್ಮ ಕೈಹಿಡಿಯದೇ ಇರುವುದು ಬೇಸರವಾದೀತು. ನಿಮ್ಮ ಕಾರ್ಯಗಳು ಇಂದು ಮುಕ್ತಾಯಗೊಳ್ಳಬಹುದು. ಆಪ್ತರು ನಿಮ್ಮನ್ನು ಮತ್ತಷು ಇಷ್ಟಪಡುವರು. ಓದಿನ ಬಗ್ಗೆ ಸ್ವಲ್ಪ ಗಮನವು ಕಡಿಮೆ ಆಗಲಿದೆ. ತಿಳಿವಳಿಕೆಯ ಕೊರತೆಯು ನಿಮ್ಮನ್ನು ಅತಿಯಾಗಿ ಕಾಡಬಹುದು. ಸಮಯವನ್ನು ಸದುಪಯೋಗ ಮಾಡಿಕೊಳ್ಳಲು ಪ್ರಯತ್ನಿಸುವಿರಿ.

ಮಿಥುನ: ಸಹೋದರರಿಂದ‌ ನಿಮಗೆ ಬೇಕಾದ ಸಂಪತ್ತು ಸಿಗಲಿದೆ. ಸಮಯಕ್ಕೆ ಬೆಲೆ ಕೊಡಬೇಕಾದೀತು. ಮನೆಯಲ್ಲಿ ಧಾರ್ಮಿಕ ಕಾರ್ಯವನ್ನು ನೀವು ಇಂದು ಮಾಡಿಸುವಿರಿ. ಕಾಲಕ್ಕೆ ತಕ್ಕಂತೆ ಹೆಜ್ಜೆಹಾಕಬೇಕಾದ ಸ್ಥಿತಿ ಬರಲಿದೆ. ಆಯಾಸದಿಂದ ನಿಮಗೆ ಮುಕ್ತಿ ಸಿಗಬಹುದು. ಅನಧಿಕೃತ ವ್ಯವಹಾರವನ್ನು ನೀವು ಬೆಂಬಲಿಸುವುದು ಬೇಡ. ನೀವಿಂದು ಹೇಳುವ ಸುಳ್ಳು ಎಲ್ಲರಿಗೂ ಗೊತ್ತಾದೀತು. ಇಂದು ನೀವು ಉದ್ಯೋಗದಿಂದ ಸ್ವಲ್ಪ ವಿಶ್ರಾಂತಿ ಪಡೆಯುವಿರಿ. ಆರೋಗ್ಯವನ್ನು ನೀವು ನಿರ್ಲಕ್ಷಿಸುವಿರಿ. ಇದು ತೊಂದರೆ ಆದೀತು.

ಕರ್ಕಾಟಕ: ನಿಮ್ಮನ್ನು ದ್ವೇಷಿಸಲು ಕಾರಣವಿಲ್ಲದಿದ್ದರೂ ದ್ವೇಷಿಸುವರು. ಅದೃಷ್ಟವನ್ನು ನಂಬಿ ಏನನ್ನೂ ಮಾಡಲು ಹೋಗುವುದು ಬೇಡ. ನಿಮ್ಮ ಪ್ರಯತ್ನವೇ ಪೂರ್ಣವಾಗಿರಲಿ. ಸಂಗಾತಿಯು ನಿಮ್ಮನ್ನು ಬೆಂಬಲಿಸುವರು. ಹಳೆಯದನ್ನು ನೆನಪಿಸಿಕೊಳ್ಳುವುದು ನಿಮಗೆ ಖುಷಿಯ ವಿಷಯ. ಪ್ರೇಮಿಗಳ‌ ನಡುವೆ ಸಣ್ಣ ಬಿರುಕು ಉಂಟಾಗಬಹುದು.‌ ಮಕ್ಕಳ ಜೊತೆ ಕುಳಿತು ಹರಟೆ ಹೊಡೆಯುವುದು ನಿಮಗೆ ಖುಷಿ ಕೊಡಬಹುದು. ತಾಯಿಯ ಕಡೆಯಿಂದ ನಿಮಗೆ ಅಮೂಲ್ಯ ವಸ್ತುವು ಪ್ರಾಪ್ತವಾದೀತು. ಅಂಗಳದಲ್ಲಿ ನಿಂತು ಆಕಾಶವನ್ನು ಮುಟ್ಟಲಾಗದು.‌

-ಲೋಹಿತಶರ್ಮಾ ಇಡುವಾಣಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ