AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 10) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 10, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಮೇ​ 10) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ: ಸಾಧ್ಯ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಬೆಳಗ್ಗೆ 49 ನಿಮಿಷಕ್ಕೆ, ರಾಹು ಕಾಲ 12:29 ರಿಂದ 02:04ರ ವರೆಗೆ, ಯಮಘಂಡ ಕಾಲ 07:43 ರಿಂದ 09:18ರ ವರೆಗೆ, ಗುಳಿಕ ಕಾಲ 10:54 ರಿಂದ 12:29ರ ವರೆಗೆ.

ಮೇಷ: ಹಣಕಾಸಿನ ವ್ಯವಹಾರದಲ್ಲಿ ನಿಮಗೆ ಹೆಚ್ಚು ಸಂದೇಹಗಳು ಬರಬಹುದು. ಅತ್ಯಾಪ್ತರನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಮನೋರಂಜನೆಯನ್ನು ಇಂದು ಹೆಚ್ಚು ಇಷ್ಟಪಡುವಿರಿ. ನಿಮ್ಮ ಪರಿಕಲ್ಪನೆಯಂತೆ ಹೊಸ ಕಾರ್ಯಗಳು ಆರಂಭವಾಗಲಿದೆ. ಅದೃಷ್ಟವನ್ನು ನಂಬಿ ಮಾಡದಿದ್ದರೂ ಇರುವ ಅದೃಷ್ಟವೇ ನಿಮ್ಮನ್ನು ಕೈ ಹಿಡಿದು ನಡೆಸಲಿದೆ. ಸಾಮಾಜಿಕ ಕೆಲಸವನ್ನು ಮಾಡುವ ಹುಮ್ಮಸ್ಸು ಇಂದು ಇರಲಿದೆ. ಕೇಳಿದ ಬಂದವರಿಗೆ ಯಥಾಯೋಗ್ಯ ಸಹಾಯವನ್ನು ಮಾಡುವಿರಿ. ಕೋಪವನ್ನು ಕಡಿಮೆ ಮಾಡಿಕೊಂಡಿದ್ದರ ಪರಿಣಾಮ ನಿಮ್ಮ ಆಪ್ತರ ಸಂಖ್ಯೆ ಹೆಚ್ಚಾಗಿದೆ. ಇರುವ ಕೆಲಸದಿಂದ ಲಾಭವನ್ನು ದ್ವಿಗುಣಗೊಳಿಸಿಕೊಲ್ಳುವುದು ಉತ್ತಮ.

ವೃಷಭ: ನಿರೀಕ್ಷೆ ಮೀರಿದ ಅನುಕೂಲತೆಗಳು ಇದ್ದರೂ ಸಂತೃಪ್ತಿಯು ಇರಲಾರದು. ಪ್ರಣಯದಲ್ಲಿ ಅತಿಯಾದ ಆಸಕ್ತಿಯೂ ಇರಲಾರದು. ಹಳೆಯ ಘಟನೆಯು ಇಂದು ಕಾರಣಾಂತರದಿಂದ ನೆನಪಾಗಿ ಕಾಡಲಿದೆ. ಬಂಧುವರ್ಗವು ನಿಮಗೆ ವಿವಾಹಕ್ಕೆ ಸಂಬಂಧಿಸಿದ ಸಹಾಯವನ್ನು ಮಾಡಬಹುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದನ್ನು ಮರೆಯಬೇಡಿ. ಖುಷಿಯಿಂದ ದಿನವನ್ನು ಕಳೆಯುವಿರಿ. ದೇಶವನ್ನು ಸುತ್ತುವ ಮನಸ್ಸಾದೀತು. ವೈದ್ಯಕೀಯ ವಿಚಾರದಲ್ಲಿ ನಿಮಗೆ ಕೆಲವು ಕುತೂಹಲವು ಉಂಟಾಗಬಹುದು. ಆಪ್ತರ ಜೊತೆ ಸಮಾಲೋಚನೆ ನಡೆಸುವಿರಿ.

ಮಿಥುನ: ಯಾರನ್ನೂ ಹಗುರವಾಗಿ ಕಾಣುವುದು ಬೇಡ. ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವ ಅವಶ್ಯಕತೆ ಇಲ್ಲ. ಅದು ತಾನಾಗಿಯೇ ಗೊತ್ತಾಗಲಿದೆ. ನೂತನ ಅಧಿಕಾರವೂ ನಿಮಗಾಗಿ ಸೃಷ್ಟಿಯಾದೀತು. ಕಾರ್ಯದಲ್ಲಿ ಇರುವ ದಕ್ಷತೆಯನ್ನು ಎಲ್ಲರೂ ಮೆಚ್ಚುವರು. ಸಮಯಕ್ಕೆ ಹೆಚ್ಚು ಮಹತ್ವವನ್ನು ನೀವು ಕೊಡಲಿದ್ದೀರಿ. ಕಛೇರಿಯ ಕೆಲಸವೇ ಇಂದು ಅಧಿಕವಾದೀತು. ನಿಮ್ಮ ಆಲೋಚನೆಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನ‌ ಮಾಡುವಿರಿ. ಇನ್ನೊಬ್ಬರ ಸ್ಥಿತಿಯನ್ನು ಕಂಡು ನೀವು ನೆಮ್ಮದಿಯಿಂದ ಇರುವಿರಿ. ಸಂಗಾತಿಯಿಂದ ಅನಿರೀಕ್ಷಿತ ಸಮಾಚಾರ ಬರಬಹುದು.

ಕಟಕ: ಸ್ವಾಭಿಮಾನಕ್ಕೆ ಧಕ್ಕೆ ಬಂದು ಮನಸ್ಸಿನಲ್ಲಿ ಬಹಳ ಹಿಂಸೆಯನ್ನು ಅನುಭವಿಸಬಹುದು. ಸ್ನೇಹಿತರ ಜೊತೆ ಸುತ್ತಟ ಹಾಗೂ ಭೋಜನವನ್ನು ಮಾಡುವಿರಿ. ದಾಂಪತ್ಯದಲ್ಲಿ ಸುಖವಿದ್ದರೂ ಸಣ್ಣ ಕಿರಿಕಿರಿಗಳು ಬಂದು ಹೋಗಬಹುದು. ದಿನಚರ್ಯೆಯಲ್ಲಿ ವ್ಯತ್ಯಾಸವನ್ನು ಇಂದು ಕಾಣಬಹುದಾಗಿದೆ. ಹಠ ಸ್ವಭಾವವನ್ನು ಸ್ವಲ್ಪ ಕಡಿಮೆ ಮಾಡಿಕೊಳ್ಳುವುದು ಉತ್ತಮ. ಕ್ಷಣದ ಕೋಪವು ನಿಮ್ಮ ಉತ್ಸಾಹವನ್ನು ಕುಂದಿಸೀತು. ಮಾತಿನಲ್ಲಿ ಕಠೋರತಯು ಕಡಿಮೆಯಾದರೆ ಒಳ್ಳೆಯದು. ಕಫಪ್ರಕೃತಿಯು ನಿಮ್ಮನ್ನು ಹಿಂಸಿಸಬಹುದು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!