AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ

2023 ಮಾರ್ಚ್ 11 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಯವರ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: drikpanchang.com
ಗಂಗಾಧರ​ ಬ. ಸಾಬೋಜಿ
| Edited By: |

Updated on: Mar 11, 2023 | 6:33 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 11 ಶನಿವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ಮೇಷ: ಇಂದು ನೀವು ಆಸಕ್ತಿದಾಯಕವಾದದ್ದನ್ನು ಮಾಡಲು ಅಥವಾ ನಿಮ್ಮ ಸ್ನೇಹಿತರೊಂದಿಗೆ ಇದ್ದು ನೀವು ಸ್ಫೂರ್ತಿಯನ್ನು ಪಡೆಯಬಹುದಾಗಿದೆ. ಹಣದ ಕೊರತೆಯಿಂದ ಸಾಲವನ್ನು ಮಾಡುವ ಸಾಧ್ಯತೆಯಿದೆ. ವಾಹನ ಖರೀದಿಯ ವಿಚಾರದಲ್ಲಿ ಗೊಂದಲಗಳು ಬರಬಹುದು. ಮನೆಯಲ್ಲಿ ಭಿನ್ನಾಭಿಪ್ರಾಯ ಇರಲಿದೆ. ಕೆಲವು ಸಮಸ್ಯೆಗಳು ನಿಮ್ಮೆದುರು ಬರಬಹುದು. ಉದ್ಯೋಗದ ನಿಮಿತ್ತ ಪರದೇಶಕ್ಕೆ ಪ್ರಯಾಣವನ್ನು ಮಾಡಬೇಕಾಗಿಬರಬಹುದು. ಸಂಗಾತಿಯ ಮಾತುಗಳನ್ನು ನೀವು ಸಹಿಸಲಾರಿರಿ. ಸಹನೆಯನ್ನು ಇಟ್ಟುಕೊಳ್ಳುವಿದೇ ನಿಜವಾದ ಶ್ರೀಮಂತಿಕೆ. ಇಂದು ನೀವು ನಿರಾಶಾವಾದಿ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬಹುದು.

ವೃಷಭ: ನಿಮ್ಮ ಸಂಬಂಧದಲ್ಲಿ ಅನಗತ್ಯ ಅಡೆತಡೆಗಳನ್ನು ಉಂಟುಮಾಡಬಹುದು. ಒತ್ತಡದಿಂದ ನಿಮಗೆ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಇಲ್ಲವಾದರೆ ಮಾಡುವ ಕೆಲಸವು ಅಶಿಸ್ತಿನಿಂದ ಇರಬಹುದು. ದೂರದ ಬಂಧುಗಳು ನಿಮ್ಮ ಪರಿಚಯವನ್ನು ಮಾಡಿಕೊಂಡಾರು. ನೈಜ-ಸಮಯದ ಆರ್ಥಿಕ ಲಾಭಗಳನ್ನು ನೋಡುವುದು ನಿಮ್ಮನ್ನು ಬಹಳಷ್ಟು ಪ್ರೇರೇಪಿಸುತ್ತದೆ. ಕೆಲವು ಸಂಗತಿಗಳು ಅನಿರೀಕ್ಷಿತವಾಗಿ ಬಂದು ಮನಸ್ಸಿನ ನೆಮ್ಮದಿಯನ್ನು ಹಾಳುಗೆಡವುವುವು. ಅತಿಯಾದ ಆತ್ಮವಿಶ್ವಾಸದ ಜೊತೆ ಪೂರ್ವಾಪರಜ್ಞಾನವೂ ಇರಲಿ. ಯಾರ ಮಾತನ್ನೇ ಕೇಳುವುದಿದ್ದರೂ ನಿಮ್ಮ ಸಾಮರ್ಥ್ಯವನ್ನು ನೋಡಿಕೊಂಡು ತೀರ್ಮಾನಕ್ಕೆ ಬನ್ನಿ. ಅನಾರೋಗ್ಯವು ಬಾಧಿಸಬಹುದು.

ಮಿಥುನ: ಆಪ್ತರೆಂದು ನಿಮ್ಮ ಎಲ್ಲ ವಿಚಾರಗಳನ್ನು ಯಾರ ಜೊತೆಯೂ ಹಂಚಿಕೊಳ್ಳಬೇಡಿ. ಹಗುರವಾದ ಮಾತುಗಳು ನಿಮಗೆ ಅಪಮಾನವನ್ನು ಮಾಡುವುದು. ನಿದ್ರೆಯಿಲ್ಲದೇ ಮನಸ್ಸು ಕಿರಿಕಿರಿಯನ್ನು ಅನುಭವಿಸುವುದು. ತಂದೆಯಿಂದ ಹಣವನ್ನು ಪಡೆದು ನಿಮಗೆ ಬೇಕಾದ ವಸ್ತುಗಳನ್ನು ಪಡೆಯುವಿರಿ. ಅಧಿಕ ತೂಕವು, ಭವಿಷ್ಯದಲ್ಲಿ ಗಂಭೀರ ಸಮಸ್ಯೆಯನ್ನು ಉಂಟುಮಾಡಬಹುದು. ಅವಾಕಶಗಳು ನೂರಿದ್ದರೂ ಯೋಗ್ಯತೆ ಹಾಗೂ ಸಾಮರ್ಥ್ಯವನ್ನು ಅರಿತುಕೊಂಡು ಮುಂದಡಿಯಿಡಿ. ವ್ಯಾಪಾರಸ್ಥರು ತಮ್ಮ ಗೆಳೆಯರ ಸಲಹೆಯನ್ನು ಆಲಿಸಬೇಕು. ನಕಾರಾತ್ಮಕ ಆಲೋಚನೆಗಳು ನಿಮ್ಮ ಗಮನವನ್ನು ಕಳೆದುಕೊಳ್ಳಲು ಕಾರಣವಾಗಬಹುದು.

ಕಟಕ: ನಿಮ್ಮ ಕುಟುಂಬ ಅಥವಾ ಆಸ್ತಿಯ ಬಗ್ಗೆ ನಿರ್ಧಾರಗಳನ್ನು ತೆಗೆದುಕೊಳ್ಳಲು ಉತ್ತಮ ಸಮಯವಲ್ಲ. ನಿಮ್ಮ ಅಗತ್ಯತೆಗಳ ಯಾದಿಯು ತುಂಬಾ ದೊಡ್ಡದಿದ್ದು ಅದನ್ನು ಪೂರೈಸಲು ಸತತ ಪ್ರಯತ್ನವನ್ನು ಮಾಡುವಿರಿ. ನೀವು ಕೈಗೊಂಡ ಕಾರ್ಯಗಳು ಸಫಲವಾಗಲಿಲ್ಲ ಎಂಬ ಹತಾಶಭಾವವೂ ಸಿಟ್ಟೂ ಏಕಕಾಲಕ್ಕೆ ಬರಲಿದೆ. ಅಪರಿಚಿತರನ್ನು ಆಪ್ತರನ್ನಾಗಿ ಮಾಡಿಕೊಳ್ಳಲು ಹೋಗಿ ಅನಾಹುತವಾದೀತು. ನಿಮಗಿರುವ ಖಾಯಿಲೆಯು ಹೆಚ್ಚು ನೋವನ್ನು ಕೊಟ್ಟೀತು. ಅಲ್ಪ ಧನಲಾಭವಾಗಲಿದೆ. ವಿದ್ಯುತ್ ಉಪಕರಣಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ನಿಮ್ಮ ವ್ಯಾಪಾರವನ್ನು ವಿಸ್ತರಿಸಲು ನೀವು ಬ್ಯಾಂಕ್ ಸಾಲಕ್ಕೆ ಅರ್ಜಿ ಸಲ್ಲಿಸಬಹುದು.

-ಲೋಹಿತಶರ್ಮಾ, ಇಡುವಾಣಿ

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್