AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: Aajtak.In
Rakesh Nayak Manchi
|

Updated on: Apr 12, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ರೇವತೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮೂಲ, ಯೋಗ : ಪರಿಘ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06-22 ಕ್ಕೆ, ಸೂರ್ಯಾಸ್ತ ಸಂಜೆ 06-44 ಕ್ಕೆ, ರಾಹು ಕಾಲ ಮಧ್ಯಾಹ್ನ 12:33 – 02:06ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:55 – 09:28ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:00 – ಮಧ್ಯಾಹ್ನ 12:33ರ ವರೆಗೆ.

ಮೇಷ: ಯಾವುದೂ ಸರಿಯಿಲ್ಲ ಎಂದು ಹೇಳುವ ಬದಲು ಏನು ಸರಿಯಿದೆ? ಹೇಗೆ ಸರಿ ಮಾಡಬಹುದು ಎನ್ನುವ ಬಗ್ಗೆ ಗಮನ ಕೊಡಿ. ಸಂಸ್ಥೆಯು ನಿಮ್ಮ ನೇತೃತ್ವದಲ್ಲಿ ಚೆನ್ನಾಗಿ ನಡೆಯಬಹದು. ಅವುಗಳ ಕುರಿತು ಅತಿಯಾಗಿ ಆಲೋಚಿಸಿದಷ್ಟೂ ಸಮಸ್ಯೆಗಳು ಹಾಗೇ ಇರುತ್ತವೆ. ಹೊಸ ಉದ್ಯೋಗದ ಸೃಷ್ಟಿಗೆ ಹೆಚ್ಚು ಮನಸ್ಸು ಮಾಡುವಿರಿ. ವಾಹನದಿಂದ ಅಪಘಾತವಾಗುವ ಸಾಧ್ಯತೆ. ವೃತ್ತಿಯ ಸ್ಥಳದಲ್ಲಿ ನೀವು ಸಂತೋಷವಾಗಿ ಕೆಲಸಮಾಡುವಿರಿ. ಆಲಸ್ಯವು ದೂರವಾದ ಕಾರಣ ಅನೇಕ ಕೆಲಸಗಳನ್ನು ಅನಾಯಸವಾಗಿ, ಶೀಘ್ರವಾಗಿ ಮಾಡಿ ಮುಗಿಸುವಿರಿ.

ವೃಷಭ: ಮನೆಯವರ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ಒತ್ತಡವನ್ನು ತಂದುಕೊಳ್ಳದೇ ಕೆಲಸವನ್ನು ಮಾಡಿ. ಇಲ್ಲವಾದರೆ ಆರೋಗ್ಯದ ಮೇಲೆ ಹೆಚ್ಚು ಪ್ರಭಾವವನ್ನು ಬೀರಬಹುದು. ಕೇಳದೇ ಯಾರಿಗೂ ಏನನ್ನೂ ಹೇಳಬೇಡಿ. ವಸ್ತುಗಳ ಖರೀದಿಯಿಂದ ಉಂಟಾದ ಧನದ ವ್ಯಯವು ನಿಮ್ಮಲ್ಲಿ ಆತಂಕವನ್ನು ಉಂಟುಮಾಡಲಿದೆ. ಕಥೆಯನ್ನು ಹೇಳವ ಆಸಕ್ತಿ ಹೆಚ್ಚಾಗಬಹುದು. ಬರವಣಿಗೆಯ ವಿಚಾರದಲ್ಲಿ ಹೆಚ್ಚು ಮನಸ್ಸನ್ನು ಕೊಡಿ. ಬೇಸರಿಸದೇ ಬಂದುದನ್ನು ಬಂದಂತೆ ಎದುರಿಸವುದು ನಿಮಗೆ ಸ್ವಭಾವಸಿದ್ಧ.

ಮಿಥುನ: ಅಧಿಕಾರದ ಆಸೆಯಿಂದ ಮತ್ಯಾರನ್ನೋ ಕೆಟ್ಟವರನ್ನಾಗಿ ಮಾಡುವುದು ಸರಿಯಲ್ಲ. ನಿಮ್ಮ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳಿ, ಬೇಕಾದ ಶ್ರಮವಹಿಸಿ. ಅನಾರೋಗ್ಯವು ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳುಮಾಡಬಹುದು. ಪ್ರಾಣಿಗಳ ಜೊತೆ ಸಮಯವನ್ನು ಕಳೆಯುವಿರಿ. ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕ ಸನ್ಮಾರ್ಗದಲ್ಲಿ ಹೋಗುತ್ತಿದೆಯೇ ಗಮನಿಸಿಕೊಳ್ಳಿ. ಮಾತನ್ನು ಯೋಗ್ಯವಾಗಿ, ಯೋಗ್ಯಸ್ಥಾನದಲ್ಲಿ ಆಡಿರಿ. ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಹೋರಾಡುವಿರಿ. ಯಾರನ್ನೂ ಒತ್ತಾಯಿಸದೇ ಕೆಲಸವನ್ನು ಮಾಡಿಸಿಕೊಳ್ಳಿ.

ಕಟಕ: ಸಮಾಜಕ್ಕೆಂದು ನಿಮ್ಮನ್ನು ನೀವು ಸಮರ್ಪಣೆ ಮಾಡಿಕೊಳ್ಳುವ ಮನಸ್ಸು ಮಾಡುವಿರಿ. ಅದು ನಿಮಗೆ ಮುಳುವಾದೀತು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಪ್ರಪಂಚದ ಬೇರೆ ಬೇರೆ ಸ್ಥಳಗಳಿಗೆ ಹೋಗುವ ಆಸೆಯುಳ್ಳವರಾಗಿರುವಿರಿ. ಧಾರ್ಮಿಕ ಕಾರ್ಯಗಳನ್ನು ಮಾಡಲು ಒಲವು ಬರಲಿದೆ. ಕುಟುಂಬದವರು ನಿಮ್ಮನ್ನು ಬಹಳ ಪ್ರೀತಿಸುವರು. ಅವರಿಗೆ ಸ್ವಲ್ಪ ಸಮಯ ಕೊಡಿ. ಹಣವನ್ನು ಉಳಿಸಲು ಪ್ರಯತ್ನಶೀಲರಾಗುವಿರಿ.

-ಲೋಹಿತಶರ್ಮಾ ಇಡುವಾಣಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು