AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಧೃತಿಗೆಡದೇ ನಿಮ್ಮ ಕೆಲಸ ಮುಂದುವರೆಸಿ, ದೇವರ ಅನುಗ್ರಹವಾಗಲಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 12) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಧೃತಿಗೆಡದೇ ನಿಮ್ಮ ಕೆಲಸ ಮುಂದುವರೆಸಿ, ದೇವರ ಅನುಗ್ರಹವಾಗಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 12, 2023 | 12:10 AM

Share

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 12) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಉತ್ತರಾಭಾದ್ರ, ಯೋಗ: ಆಯುಷ್ಮಾನ್, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:09 ರಿಂದ 03:46ರ ವರೆಗೆ.

ಮೇಷ: ನಿಮ್ಮದಲ್ಲದ ವಸ್ತುವನ್ನು ನಿಮ್ಮದಾಗಿಸಿಕೊಳ್ಳಲು ಪ್ರಯತ್ನಿಸುವಿರಿ. ನಿಮಗೆದುರಾದ ಸನ್ನಿವೇಶಗಳನ್ನು ಬುದ್ಧಿವಂತಿಕೆಯಿಂದ ಎದುರಿಸಿ. ನಿಮ್ಮ ಚಿಂತನೆಯನ್ನು ಹೇಳಲು ಸಮಯವನ್ನು ತೆಗೆದುಕೊಳ್ಳುವುದು ಬೇಡ. ಸರ್ಕಾರಿ ನೌಕರರಿಗೆ ಅನೇಕ ಕಡೆಗಳಿಂದ‌ ಒತ್ತಡ ಬರಲಿದೆ. ಕೆಲವು ಕೆಲಸಕ್ಕೆ ಕಠಿಣಶ್ರಮದ ಅವಶ್ಯಕತೆ ಇರುತ್ತದೆ. ಉದ್ಯೋಗದಲ್ಲಿ ನಿಮ್ಮ ಪ್ರತಿಭೆಗೆ ಹೆಚ್ಚಿನ ಸ್ಥಾನ ಸಿಗಬಹುದು. ಪ್ರಯತ್ನಿಸಿದ ಕ್ಷೇತ್ರಗಳಲ್ಲಿ ಅಪೇಕ್ಷಿತ ಯಶಸ್ಸನ್ನು ಪಡೆಯದ ಕಾರಣ ಅಸಮಾಧಾನ ಇರಲಿದೆ.

ವೃಷಭ: ಇಂದಿನ ದಿನಗಳು ಸಂಘರ್ಷಗಳು ಮತ್ತು ಚಿಂತೆಗಳಿಂದ ತುಂಬಿವೆ. ಹಳೆಯ ವಿಷಯಗಳನ್ನು ಮರೆತು ಜೀವನವನ್ನು ಹೊಸದಾಗಿ ಆರಂಭಿಸಿ. ಸುಖ-ದುಃಖಗಳೆರಡೂ ಒಂದಾದಮೇಲೊಂದು ಬರುತ್ತಲೇ ಇರುತ್ತವೆ ಎಂಬ ಸತ್ಯವು ಮನವರಿಕೆ ಆಗಲಿದೆ. ಸಂಬಂಧಗಳಲ್ಲಿ ಅಹಂಕಾರ ಸರಿಯಲ್ಲ. ಕೆಲಸದ ಸ್ಥಳದಲ್ಲಿ ನಿಷ್ಠೆಯಿಂದ ಕೆಲಸ ಮಾಡುವಿರಿ. ಕುಟುಂಬದ ಜವಾಬ್ದಾರಿಗಳನ್ನು ಸಮಯಕ್ಕೆ ಪೂರೈಸಲು ಗಮನ ಕೊಡಿ. ಕುಟುಂಬದಲ್ಲಿ ಸಂತೋಷದ ವಾತಾವರಣವು ಇರಲಿದೆ. ಹೊಸ ಸೌಲಭ್ಯಗಳನ್ನು ಪಡೆಯಲು ಖರ್ಚು ಮಾಡುವಿರಿ.

ಮಿಥುನ: ಪ್ರತಿಕೂಲ ಸ್ಥಿತಿಯಲ್ಲಿ ದೈವವು ಸಹಾಯ ಮಾಡಲಿದೆ. ಧೃತಿಗೆಡದೇ ನೀವು ನಿಮ್ಮ ಕೆಲಸವನ್ನು ಮುಂದುವರಿಸಿ. ವ್ಯಾಪಾರದಲ್ಲಿ ನೀವು ಹೆಚ್ವು ಲಾಭವನ್ನು ಗಳಿಸಿಸುವಿರಿ. ನಿಮ್ಮ ಮತ್ತು ಸಹೋದರರ ನಡುವೆ ಸಣ್ಣ ವಿರಸು ಏರ್ಪಡಬಹುದು. ಆರ್ಥಿಕತೆಯನ್ನು ಸುಧಾರಿಸಿಕೊಳ್ಳಲು ಪ್ರಯತ್ನಶೀಲರಾಗುವಿರಿ. ಖಾಸಗಿ ಉದ್ಯೋಗಿಗಳನ್ನು ಕೈ ಬಿಡಲು ಸಂಸ್ಥೆ ನಿರ್ಧರಿಸಬಹುದು. ಕಳೆದ ದಿನಗಳನ್ನು ನೀವು ಮೆಲುಕು ಹಾಕಿ ಸಂತೋಷಗೊಳ್ಳುವಿರಿ. ಮಕ್ಕಳಿಂದ‌ ಶುಭವಾರ್ತೆ ಇರಲಿದೆ.

ಕಟಕ: ಹೆಚ್ಚಿನ‌ ಅಧ್ಯಯನವನ್ನು ನೀವು ಕೈಗೊಳ್ಳುವಿರಿ. ಅಧಿಕಾರಿ ವರ್ಗದವರ ಜೊತೆ ಇಂದು ಹೆಚ್ಚು ಮಾತುಕತೆ ನಡೆಸುವಿರಿ. ವಿವಾಹದ ಚಿಂತೆಯು ನಿಮ್ಮನ್ನು ಕಾಡಬಹುದು. ಆಪ್ತರನ್ನು ನೀವು ಕಳೆದುಕೊಳ್ಳುವಿರಿ. ಆಸ್ತಿಯನ್ನು ಭಾಗ ಮಾಡಿಕೊಳ್ಳಲು ನೀವು ಇಂದು ಮುಂದಾಗುವಿರಿ. ಮನೆಯರ ಸಣ್ಣ ಮಾತಿಗೆ ಬೇಸರಿಸಬೇಡಿ. ಕುಟುಂಬದ ಜವಾಬ್ದಾರಿಗಳನ್ನು ಪೂರೈಸುವಲ್ಲಿ ಖರ್ಚು ಸಾಧ್ಯ. ನೀವು ಭೌತಿಕ ಸೌಕರ್ಯಗಳನ್ನು ಸಂಗ್ರಹಿಸುವ ಬಗ್ಗೆ ಚಿಂತಿಸುತ್ತೀರಿ. ಸರ್ಕಾರಿ ನೌಕರರು ಇಂದು ಹೆಚ್ಚಿನ ಕೆಲಸದಲ್ಲಿ ತೊಡಗುವರು. ಮನೆಯಲ್ಲಿ ಹಿರಿಯರ ಅನಾರೋಗ್ಯದಿಂದ ಮನಸ್ಸು ವಿಚಲಿತಗೊಳ್ಳುವುದು.

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?