AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರಿಗೆ ಹೊಸ ನಿರೀಕ್ಷೆಗಳು ಸಂತೋಷ ತರಲಿವೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 13) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಈ ರಾಶಿಯವರಿಗೆ ಹೊಸ ನಿರೀಕ್ಷೆಗಳು ಸಂತೋಷ ತರಲಿವೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jun 13, 2023 | 12:10 AM

Share

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 13) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರಮ ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಮೃಗಶಿರಾ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ದಶಮೀ, ನಿತ್ಯನಕ್ಷತ್ರ: ರೇವತೀ, ಯೋಗ: ಸೌಭಾಗ್ಯ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆಗೆ, ರಾಹು ಕಾಲ ಮಧ್ಯಾಹ್ನ 03:46 ರಿಂದ 05:23ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:18 ರಿಂದ 10:55ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:32 ರಿಂದ 02:09ರ ವರೆಗೆ.

ಮೇಷ: ನೀವು ಇಂದು ವೃತ್ತಿಯನ್ನು ಬದಲಿಸುವ ನಿರ್ಧಾರ ಮಾಡಲಿದ್ದೀರಿ. ನಿಮ್ಮ ವೃತ್ತಿಕ್ಷೇತ್ರದಲ್ಲಿ ಸ್ಥಾನಮಾನ, ಪ್ರತಿಷ್ಠೆ ಹೆಚ್ಚಾಗಲಿದೆ. ಅಧಿಕಾರದಲ್ಲಿರುವ ಜನರಿಗೆ ಸಾಮಾಜಿಕ ಗೌರವವು ಸಿಗುವುದು. ಯಾವುದೇ ಚರ್ಚೆಯನ್ನು ಮಾಡಲು ಇಂದು ನಿರಾಸಕ್ತಿಯನ್ನು ತೋರಿಸುವಿರಿ. ಸ್ನೇಹಿತರ ಜೊತೆ ಭಿನ್ನಾಭಿಪ್ರಾಯ ಉಂಟಾಗಬಹುದು. ಹಳೆಯ ಹೂಡಿಕೆಯಿಂದ ನಿಮಗೆ ಲಾಭವಾಗಲಿದೆ. ಕಷ್ಟಕ್ಕೆ ಇಂದು ಫಲವು ಸಿಗಲಿದೆ. ನಿಮ್ಮ ಆತಂಕವೂ ದೂರವಾಗಬಹುದು. ತಂದೆಯ ಪ್ರೀತಿಯು ನಿಮಗೆ ಸಿಗಲಿದೆ.

ವೃಷಭ: ನಿಮ್ಮ ನಿರ್ಧಾರಗಳು ಇಂದು ಈಡೇರಬಹುದು. ನಿಮಗೆ ಪರಿಚಯವಿರುವವರಿಂದ ಅಧಿಕ ಪ್ರಯೋಜನವನ್ನು ಪಡೆಯುವಿರಿ. ನಿಮ್ಮ ಶತ್ರುಗಳು ನಿಮ್ಮಿಂದ ಇಂದು ಅಪ್ರತ್ಯಕ್ಷವಾಗಿ ಪ್ರಯೋಜನ ಪಡೆಯುವರು. ವೃತ್ತಿಜೀವನದಲ್ಲಿ ಅಧಿಕಾರಿಗಳಿಂದ ಕಿರಿಕಿರಿ ಉಂಟಾಗಬಹುದು. ಅಧಿಕ ಲಾಭವನ್ನು ಗಳಿಸಲು ಹೋಗಿ ಇರುವುದನ್ನು ಕಳೆದುಕೊಳ್ಳಬಹುದು. ನಿಮ್ಮ ಅಹಂಕಾರದಿಂದ ಇತರರಿಗೆ ಅಗೌರವವನ್ನು ಕೊಡುವುದು ಬೇಡ. ಸಂಗಾತಿಯ ಮಾತನ್ನು ವಿರೋಧಿಸುವಿರಿ. ನಿರೀಕ್ಷಿತ ಕೆಲಸವು ಆಗಿಲ್ಲವೆಂದು ನಿಮಗೆ ಕೋಪ ಬರಬಹುದು. ನೂತನ ಅಧಿಕಾರಿಯ ಜೊತೆ ಕಲಹವಾಗಬಹುದು.

ಮಿಥುನ: ಇಂದು ನಿಮ್ಮ ಕುಟುಂಬದಲ್ಲಿ ನೆಮ್ಮದಿ ಇರಲಿದೆ. ವೆಚ್ಚವನ್ನು ನಿಯಂತ್ರಿಸಿ, ಆರ್ಥಿಕ ಲಾಭವನ್ನು ಪಡೆಯುವಿರಿ. ನಿಮ್ಮ ಒಂದು ತಪ್ಪು ನಿರ್ಧಾರವು ನಿಮ್ಮ ಆರ್ಥಿಕತೆಯನ್ನು ಸಡಿಲಿಸಬಹುದು. ಸಹೋದ್ಯೋಗಿಗಳು ನಿಮ್ಮ ಬೆಂಬಲಕ್ಕೆ ಇಂದು ನಿಲ್ಲುವರು. ಸರ್ಕಾರಿ ಉದ್ಯೋಗದಲ್ಲಿ ನೀವು ಇಂದು ಉನ್ನತ ಅಧಿಕಾರಿಗಳ ಸಹಕಾರವನ್ನು ಕೇಳುವಿರಿ. ನಿಮಗೆ ಸಿಗಬೇಕಾದುದನ್ನು ಧೈರ್ಯದಿಂದ ಕೇಳಿ ಪಡೆದುಕೊಳ್ಳುವಿರಿ. ನಿಮ್ಮ ಉದ್ವೇಗದ ಮಾತು ಅಪಹಾಸ್ಯಕ್ಕೆ ತುತ್ತಾಗಬಹುದು. ಅನ್ನಿಸಿದ್ದನ್ನು ಅರೆಕ್ಷಣದಲ್ಲಿ ಹೇಳುವಿರಿ.

ಕಟಕ: ವಿದ್ಯಾರ್ಥಿಗಳು ತಮ್ಮ ಓದಿನ ಉತ್ಸಾಹವನ್ನು ಕಳೆದುಕೊಳ್ಳುವರು. ಸಾಮಾಜಿಕ ಗೌರವವು ಸಿಗುವಂತಹ ಕೆಲಸವನ್ನು ನೀವು ಮಾಡುವಿರಿ. ಉದ್ಯೋಗವು ವಿದೇಶವನ್ನೂ ವ್ಯಾಪಿಸಬಹುದು. ಬುದ್ಧಿಯ ಕಸರತ್ತಿನಿಂದ ಇಂದು ಕಛೇರಿಯಲ್ಲಿ ಎದುರಾದ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಿರಿ. ಹೊಸ ನಿರೀಕ್ಷೆಗಳು ನಿಮಗೆ ಸಂತೋಷವನ್ನು ತರುತ್ತವೆ. ಎದುರಾಳಿಯನ್ನು ಸೋಲಿಸಲು ನೀವು ಯೋಜನೆಗಳನ್ನು ಮಾಡುವಿರಿ. ಸಂತೋಷವನ್ನು ಹಂಚಿಕೊಳ್ಳಲು ಹೋಗಿ ದುಃಖಿಸಬೇಕಾಗುತ್ತದೆ. ಇಂದು ನೀವು ಅನಾದರಕ್ಕೆ ಒಳಗಾಗಬಹುದು. ಇದು ನಿಮ್ಮನ್ನೆ ಚಿಂತೆಗೆ ತಳ್ಳುವುದು.

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?