AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ನಿಮ್ಮ ಸಂಗಾತಿಯೆಡೆಗೆ ಸ್ವಲ್ಪ ಗಮನ ಕೊಡಿ, ಮುನಿಸಿಕೊಂಡಾರು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 16) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ನಿಮ್ಮ ಸಂಗಾತಿಯೆಡೆಗೆ ಸ್ವಲ್ಪ ಗಮನ ಕೊಡಿ, ಮುನಿಸಿಕೊಂಡಾರು
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 16, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 16) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಕೃತ್ತಿಕಾ, ಮಾಸ : ವೈಶಾಖ, ಪಕ್ಷ : ಕೃಷ್ಣ, ವಾರ : ಮಂಗಳ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ವಿಷ್ಕಂಭ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 15 ನಿಮಿಷಕ್ಕೆ, ರಾಹು ಕಾಲ 03:40 ರಿಂದ 05:16ರ ವರೆಗೆ, ಯಮಘಂಡ ಕಾಲ 09:17 ರಿಂದ 10:53ರ ವರೆಗೆ, ಗುಳಿಕ ಕಾಲ 12:29 ರಿಂದ 02:04ರ ವರೆಗೆ.

ಮೇಷ: ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸರಿಯಾದ ವಿಧಾನವನ್ನು ಆಯ್ಕೆ ಮಾಡುವಿರಿ. ಕೆಲವು ತೊಂದರೆಗಳ ಹೊರತಾಗಿಯೂ, ನಿಮ್ಮ ಆರೋಗ್ಯವನ್ನು ಸುಧಾರಿಸಲು ನಿಮಗೆ ಉತ್ತಮ ಅವಕಾಶ ಸಿಗಲಿದೆ. ಉಜ್ವಲ ಭವಿಷ್ಯವನ್ನು ಖಚಿತಪಡಿಸಿಕೊಳ್ಳಲು, ನೀವು ಉಪಕ್ರಮವನ್ನು ತೆಗೆದುಕೊಳ್ಳಬಹುದು. ದಿನದ ಕೊನೆಯಲ್ಲಿ ಅನುಕೂಲಕರ ವಾತಾವರಣದಿಂದ ನೀವು ಆರ್ಥಿಕವಾಗಿ ಲಾಭ ಪಡೆಯಬಹುದು. ಶಿಕ್ಷಣದಿಂದ ನೀವು ಯಶಸ್ಸು ಗಳಿಸುವಿರಿ. ನಿಮ್ಮ ಸಂಗಾತಿಗೆ ಸ್ವಲ್ಪ ಹೆಚ್ಚಿನ ಗಮನ, ಪ್ರೀತಿ ನೀಡಿದರೆ ನಿಮ್ಮ ಪ್ರೀತಿಯ ಜೀವನವು ಉತ್ತಮವಾಗಿರುವುದು.

ವೃಷಭ: ನಿಮ್ಮ ಹಾಗೂ ಸಂಗಾತಿಯ ನಡುವೆ ಉತ್ತಮ ಸಂಬಂಧಗಳು ಇರಲಿದೆ. ನಿಮ್ಮ ಸಂವಹನಕ್ಕೆ ವಿವಿಧ ಮಾರ್ಗಗಳನ್ನು ಹುಡುಕುವಿರಿ. ಒಳ್ಳೆಯ ಸಮಯವನ್ನು ಒಟ್ಟಿಗೆ ಕಳೆಯಿರಿ ಮತ್ತು ಪರಸ್ಪರರ ಭಾವನೆಗಳನ್ನು ಗ್ರಹಿಸಲು ಪ್ರಯತ್ನಿಸಿ. ಶೈಕ್ಷಣಿಕ ಉದ್ದೇಶಗಳನ್ನು ಸಾಧಿಸಲು ವಿದ್ಯಾರ್ಥಿಗಳು ಸಾಕಷ್ಟು ಪ್ರಯತ್ನಿಸುವರು. ನೀವು ಹೊಸದನ್ನು ಕಲಿಯಲು ಮತ್ತು ನಿಮ್ಮ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಏನನ್ನಾದರೂ ಮಾಡುವಿರಿ. ಉದ್ಯಮದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿರುವ ವ್ಯಕ್ತಿಗಳು, ವ್ಯಾಪಾರದ ವಿಸ್ತರಣೆಯನ್ನು ಮಾಡುವಿರಿ. ನಿಮ್ಮ ಪ್ರಯತ್ನಗಳಿಂದ ಉತ್ತಮ ಫಲಿತಾಂಶವನ್ನು ಕಾರಣವಾಗಬಹುದು. ಆರೋಗ್ಯ ವಿಚಾರವಾಗಿ ನೀವು ಶುದ್ಧವಾದ ಆಹಾರವನ್ನು ಸೇವಿಸಬೇಕು. ನಿಯಮಿತ ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸಬೇಕು.

ಮಿಥುನ: ನಿಮ್ಮ ಕೆಲಸ ಮತ್ತು ವೈಯಕ್ತಿಕ ಜೀವನದಲ್ಲಿ ಏರಿಳಿತದ ಜೊತೆ, ಅಸ್ತವ್ಯಸ್ತವಾಗಬಹುದು. ಈ ದಿನವನ್ನು ಆನಂದಿಸಲು, ನೀವು ಮೊದಲು ಜವಾಬ್ದಾರಿಗಳನ್ನು ಪೂರೈಸುವತ್ತ ಗಮನ ಹರಿಸಬೇಕು. ಜೊತೆಗೆ, ವ್ಯಕ್ತಿಗತ ಸಂಬಂಧಗಳನ್ನು ಸರಿಯಾಗಿ ಇಟ್ಟುಕೊಳ್ಳಬೇಕು. ಆರ್ಥಿಕವಾಗಿ ಸಂಬಂಧಿಸಿದಂತೆ ನಿರೀಕ್ಷಿತ ಲಾಭ ಮತ್ತು ಉಳಿತಾಯವನ್ನು ಕಾಣಬಹುದು. ಕೆಲವು ಸವಾಲುಗಳು ಉದ್ಭವಿಸಬಹುದು. ನಿಮ್ಮ ವಿವಾಹವು ಕಾನೂನು ವಿವಾದದ ವಿಷಯವಾಗಿದ್ದರೆ, ಅದು ಕೊನೆಗೊಳ್ಳುವ ಸಾಧ್ಯತೆಯಿದೆ. ಪ್ರಾಯೋಗಿಕ ವಿಧಾನವು ಕೆಲಸದಲ್ಲಿ ನಿಮಗೆ ಸಹಾಯ ಮಾಡುತ್ತದೆ.

ಕಟಕ: ನಿಮ್ಮ ಅಜ್ಞಾನದಿಂದ ನಷ್ಟವಾಗದಂತೆ ಎಚ್ಚರ ವಹಿಸಿ. ಹಿಂದಿನ ಕೆಲವು ಹಣಕಾಸಿನ ಸಮಸ್ಯೆಗಳು ಮತ್ತೆ ಕಾಣಿಸಿಕೊಳ್ಳಬಹುದು ಮತ್ತು ನಿಮ್ಮ ಗಮನವನ್ನು ಕೋರಬಹುದು. ನಿಮ್ಮ ಸಾಧನೆಯು ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ನಿಮ್ಮ ಸಾಧನೆಗೆ ಇತರರು ಮೆಚ್ಚುಗೆ ವ್ಯಕ್ತಪಡಿಸುವರು. ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲು ವಿವೇಕದ ಅಗತ್ಯವಿದೆ. ನಿಮ್ಮ ಮನಃಸ್ಥಿತಿಯನ್ನು ಬದಲಾಯಿಸುವ ಅತ್ಯುತ್ತಮ ತಂತ್ರವೆಂದರೆ ನಿಮ್ಮ ಶಕ್ತಿಯನ್ನು ನೀವು ಗುರುತಿಸಿಕೊಳ್ಳುವುದು. ನಿಮ್ಮ ಜೀವನವನ್ನು ವಿಭಿನ್ನ ದೃಷ್ಟಿಕೋನದಿಂದ ನೋಡುವಿರಿ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್