AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

2023 ಮಾರ್ಚ್ 17 ಶುಕ್ರವಾರದ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: aajtak.in
ಗಂಗಾಧರ​ ಬ. ಸಾಬೋಜಿ
|

Updated on: Mar 17, 2023 | 6:00 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 17 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ :ಶುಕ್ರ, ತಿಥಿ : ದಶಮೀ, ನಿತ್ಯನಕ್ಷತ್ರ : ಉತ್ತರಾಷಾಢ, ಯೋಗ : ವರಿಯಾನ್, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 40 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 11:11 – 12:41ರ ವರೆಗೆ, ಯಮಘಂಡ ಕಾಲ 03:42 – 05:12ರವರೆಗೆ, ಗುಳಿಕ ಕಾಲ ಬೆಳಗ್ಗೆ08:11 – 09:41ರ ವರೆಗೆ.

ಮೇಷ: ವಿದ್ಯಾರ್ಥಿಗಳಾಗಿದ್ದಾರೆ ವಿದ್ಯಾಭ್ಯಾಸದಲ್ಲಿ ಅಭಿವೃದ್ಧಿಯನ್ನು ಕಾಣುವಿರಿ. ನಿಮ್ಮ ಪ್ರಯತ್ನಕ್ಕೆ ದೃಷ್ಟವು ಜೊತೆಗಿತಲಿದೆ. ನೀವಿಂದು ಅಲ್ಪ ಪ್ರಯತ್ನದಿಂದ ಕೆಲಸವನ್ನು ಸಾಧಿಸಿಕೊಳ್ಳಬಹುದು. ಇಂದು ಬಂದಿರುವ ಕೆಲಸಗಳನ್ನು ಒಂದೊಂದಾಗಿಯೇ ಮುಗಿಸುತ್ತ ಬನ್ನಿ. ಒತ್ತಡದ ಕೆಲಸಗಳನ್ನು ನಿರ್ವಹಿಸಬೇಕಾಗಬಹುದು. ಮೆಚ್ಚುಗೆಯು ನಿಮ್ಮ ಕೆಲಸಕ್ಕೆ ಸಿಗಲಿದೆ. ಮೇಲಧಿಕಾರಿಗಳಿಂದ ಪ್ರೋತ್ಸಾಹ ಮತ್ತು ಪ್ರಶಂಸೆಯು ಸಿಗಲಿದೆ. ಉದ್ವಿಗ್ನತೆಗೆ ಒಳಗಾಗದೇ ಎಚ್ಚರಿಕೆಯಿಂದ ಕೆಲಸವನ್ನು ಮಾಡಿ ಮುಗಿಸಿ. ದಾಂಪತ್ಯದಲ್ಲಿ ಸುಖವಿರಲಿದೆ. ಗುರುರಾಘವೇಂದ್ರ ಸ್ಮರಣೆ ಮಾಡಿ. ಇಂದಿನ ಕಾರ್ಯವು ಶೀಘ್ರವಾಗಿ ಮುಕ್ತಾಯಗೊಳ್ಳುವುದು.

ವೃಷಭ: ಇಂದು ನಿಮಗೆ ಕೆಲವು ಗೊಂದಲಗಳು ಇರಲಿವೆ. ಮನಸ್ಸು ಬಹಳ ಚಂಚಲವಾಗಿರಲಿದೆ. ಅನಗತ್ಯ ಖರ್ಚುಗಳು ಆಗಬಹುದಾಗಿದೆ. ಸಿಕ್ಕ ಸೌಕರ್ಯಗಳಿಂದ ಕೆಲವು ತೊಂದರೆಗಳನ್ನು ಅನುಭವಿಸಬೇಕಾಗಬಹುದು. ನಿಮ್ಮ ರಹಸ್ಯವು ಇಂದು ಬಯಲಾಗುವ ಸಾಧ್ಯತೆ ಇದೆ. ವೈವಾಹಿಕ ಜೀವನದಲ್ಲಿ ಕಲಹವಿದ್ದರೂ ದಿನಾಂತ್ಯದಲ್ಲಿ ಎಲ್ಲವೂ ಮರೆಯಾಗಿ ಸುಂದರವಾಗಿರಲಿದೆ. ಸಂಗಾತಿಗಳು ಪರಸ್ಪರ ಅನ್ಯೋನ್ಯವಾಗಿ ಇರಲಿದ್ದೀರಿ. ಹೊಂದಾಣಿಕೆಯ ಬದುಕು ನಿಮ್ಮದಾಗಲಿದೆ. ಸಹೋದರರ ಜೊತೆ ವಿವಾದಗಳು ಆಗಬಹುದು. ತಾಳ್ಮೆಯಿಂದ ವಾದವನ್ನು ತಣ್ಣಗಾಗಿಸಿಕೊಳ್ಳಿ. ದೂರದ ಪ್ರಯಾಣವು ಸುಖದಾಯಕವಲ್ಲ. ಮಹಾಮೃತ್ಯುಂಜ‌ಮಂತ್ರವನ್ನು ಪಠಿಸಿ.

ಮಿಥುನ: ನಿಮ್ಮ ಆಸ್ತಿಯನ್ನು ಮಾರಾಟ ಮಾಡುವ ಮನಸ್ಸು ಮಾಡುವಿರಿ. ಮಾನಸಿಕ ಒತ್ತಡದಿಂದ ಹೊರಬರಲು ಪ್ರಯತ್ನಿಸಿ. ನಿಮ್ಮ ಉದ್ಯೋಗದ ಕಡೆಗೆ ಹೆಚ್ಚು ಗಮನವಿರಲಿ, ಲಾಭವಾದೀತು. ನಿಮ್ಮ ವರದತೆಯಿಂದ ನಿಮ್ಮ ಸ್ನೇಹಿತರು ಬೇಸರಗೊಂಡಾರು. ಶರೀರಕ್ಕೆ ಅತಿಯಾಗಿ ಆಯಾಸವಾಗುವ ಕೆಲಸಗಳನ್ನು ಮಾಡಬೇಡಿ, ಅಶಕ್ತತೆಯು ಉಂಟಾಗಬಹುದು. ಕಛೇರಿಯಲ್ಲಿ ಕೆಲಸವು ನಿಧಾನವಾಗಿ ಸಾಗಬಹುದು. ಆಲಸ್ಯವನ್ನು ಬಿಟ್ಟು ಕೆಲಸ ಮಾಡಿ‌. ಖರ್ಚನ್ನು ಕಡಿಮೆ‌ ಮಾಡಲು ಹೊರಟರೂ ಅನಿವಾರ್ಯವಾಗಿ ಖರತಚಾಗುವುದು. ಹೊಸ ಪ್ರೇಮವು ಅಂಕುರಿಸು ಸಾಧ್ಯತೆ. ಪ್ರೇಮಿಸುವ ವ್ಯಕ್ತಿಗಳ ಬಗ್ಗೆ ಮಾಹಿತಿ ಇರಲಿ. ಪ್ರಸನ್ನಾಂಜನೇಯನನನ್ನು ಭಜಿಸಿ. ಧೈರ್ಯದಿಂದ ಇಂದಿನ ದಿನವನ್ನು ಎದುರಿಸಿ.

ಕಟಕ: ನೀವಿಂದು ಭಯದ ವಾತಾವರಣದಲ್ಲಿ ಇರುವಿರಿ. ನಿಮ್ಮ ಕೆಲಸವನ್ನು ಬದಿಗಿರಿಸಿ ನಿಮಗೆ ಸಿಕ್ಕ ಕೀರ್ತಿಯನ್ನು ಅನುಭವಿಸಿ. ಹಣದ ವಿಷಯದಲ್ಲಿ ಏರಿಳಿತಗಳು ಆಗಬಹುದು. ನಿಮ್ಮ ಮತ್ತು ಪ್ರೇಮಿಯ ನಡುವೆ ಇಗೋ ಉಂಟಾಗಿ ಘರ್ಷಣೆಯಾಗಲಿದೆ. ನಿಮ್ಮ ಹೆತ್ತವರ ಆಲೋಚನೆಗಳು ನಿಮ್ಮ ಪ್ರೀತಿಯ ಜೀವನದಲ್ಲಿ ಪ್ರಾಬಲ್ಯ ಸಾಧಿಸುತ್ತವೆ. ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ಪ್ರಪಂಚದಿಂದ ಮರೆ ಮಾಡುವ ಅಗತ್ಯವಿಲ್ಲ. ನೀವು ವಿದ್ಯಾರ್ಥಿಯಾಗಿದ್ದರೆ ಮತ್ತು ನಿಮ್ಮ ಅಧ್ಯಯನದಲ್ಲಿ ನಿಮಗೆ ಯಾವುದೇ ಸಮಸ್ಯೆ ಇದ್ದರೆ ನಿಮ್ಮ ಶಿಕ್ಷಕರೊಂದಿಗೆ ಮಾತನಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​