AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ಇಂದಿನ (2023 ಏಪ್ರಿಲ್​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

Nithya bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: nicepng.com
ಗಂಗಾಧರ​ ಬ. ಸಾಬೋಜಿ
|

Updated on: Apr 18, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 18) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ: ಅಶ್ವನೀ ಮಾಸ: ಚೈತ್ರ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ: ಬ್ರಹ್ಮ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06-18 ಕ್ಕೆ, ಸೂರ್ಯಾಸ್ತ ಸಂಜೆ 06-45 ಕ್ಕೆ, ರಾಹು ಕಾಲ 03:39 – 05:12ರ ವರೆಗೆ, ಯಮಘಂಡ ಕಾಲ 09:25 – 10:58ರ ವರೆಗೆ, ಗುಳಿಕ ಕಾಲ 12:32 – 02:05 ರವರೆಗೆ.

ಮೇಷ: ಕುಟುಂಬದ ಹಿರಿಯರಿಗೆ ನೀಡಬೇಕಾದ ಗೌರವವನ್ನು ನೀಡಿ. ನಿರಂತರವಾಗಿ ನಡೆಸಿಕೊಂಡುಬಂದ ಉದ್ಯಮದಿಂದ ಲಾಭವಾಗುವುದು. ಹಲವು ದಿನಗಳಿಂದ ಚಿಕ್ಕ ಚಿಕ್ಕ ಆರೋಗ್ಯದ ಸಮಸ್ಯೆ ಇದ್ದು ಅನಾರೋಗ್ಯದಿಂದ ಮುಕ್ತರಾಗಿ ಸ್ವಸ್ಥರಾಗುವಿರಿ. ಯೋಗ್ಯವಾದ ಔಷಧೋಪಚಾರವು ಸಿಗುವುದು. ನಿದ್ರಾಹೀನತೆಯಿಂದ ಬಳಲುತ್ತಿದ್ದು ವಾತಾವರಣವು ನಿಮ್ಮ ನಿದ್ರೆಗೆ ಪೂರಕವಾಗಿರದೇ ಇರುವುದು ಕಾರಣವಾಗಿದೆ. ಕುಟುಂಬದಿಂದ ನಿರೀಕ್ಷಿಸುವ ವಸ್ತುವು ನಿಮಗೆ ಸಿಗಲಿದೆ. ನಿಮ್ಮ ಯಶಸ್ಸನ್ನು ಕಂಡು ಅಸೂಯೆ ಪಡುವರು. ದೇವರಲ್ಲಿ ಭಕ್ತಿಯು ಕಡಿಮೆ ಆಗುವುದು.

ವೃಷಭ: ಮೇಲಧಿಕಾರಿಗಳ ವರ್ತನೆಯಿಂದ ಉದ್ಯೋಗವನ್ನು ಬಿಡುವ ಯೋಚನೆ ಮಾಡುವಿರಿ ಮತ್ತು ಮುಂದಿನ ವೃತ್ತಿಜೀವನದ ಬಗ್ಗೆ ಗೊಂದಲ ಇರಬಹುದು. ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸದ ಬಗ್ಗೆ ಅಸ್ಪಷ್ಟತೆ ಇರವುದು. ಹಿತಶತ್ರುವೆಂದು ಗೊತ್ತಿದ್ದೂ ಅವರನ್ನು ಇಟ್ಟುಕೊಳ್ಳುವುದು ಮೂರ್ಖತನವೇ. ಮಿತ್ರರ ಸಹಾಯದಿಂದ ಬಂದೊದಗಿದ ಅಪಾಯವನ್ನು ದೂರಮಾಡಿಕೊಳ್ಳುವಿರಿ. ಅವಿಶ್ರಾಂತ ಕೆಲಸವು ನಿಮಗೆ ಆಯಾಸವನ್ನು ನೀಡುವುದು. ಆರೋಗ್ಯದಲ್ಲಿ ವ್ಯತ್ಯವಾಗಬಹುದು. ಬಂಧುಗಳು ನಿಮ್ಮನ್ನು ಆಡಿಕೊಳ್ಳುವರು. ಆಲಸ್ಯದಿಂದ ಕೆಲಸವು ಹಿಂದೆ ಬೀಳುವುದು.

ಮಿಥುನ: ಭೂಮಿಯ ವ್ಯವಹಾರವನ್ನು ಸದ್ಯ ಮುಂದುವರಿಸಬೇಡಿ. ಕೈ ತಪ್ಪಿ ಹೋದೀತು. ನ್ಯಾಯಾಲಯದ ಮೆಟ್ಟಿಲೇರಿದ ದೂರು ಇಂದು ಇತ್ಯರ್ಥವಾದೀತು. ಪ್ರಯಾಣದಲ್ಲಿ ಕೊನೆಯ ಕ್ಷಣವನ್ನು ಬದಲಿಸಿದ ಕಾರಣ ಸಿಟ್ಟಾಗುವಿರಿ. ಲಲಿತಕಲೆಗಳಲ್ಲಿ ಆಸಕ್ತಿ ಇಲ್ಲದೇ ನೀರಸವಾಗಿ ಇರುವಿರಿ. ಉದ್ಯೋಗದ ನಿಮಿತ್ತ ಅನ್ಯಸ್ಥಳಕ್ಕೆ ಹೋಗಬೇಕಾಗಬಹುದು. ದಾಂಪತ್ಯದ ಉತ್ತಮ ಹಾಗೂ ಖುಷಿಯ ದಿನವನ್ನು ಅನುಭವಿಸುವಿರಿ. ಅಪರಿತರು ನಿಮಗೆ ಸಹಾಯವನ್ನು ಮಾಡಲು ಬಂದರೆ ನೀವು ಅದನ್ನು ಸ್ವೀಕರಿಸುವುದಿಲ್ಲ. ಕೆಲಸಗಳು ಕೈಗೂಡುವುದು ಎಂಬ ಆಸೆ ಇರಲಿದೆ. ಕಛೇರಿಯಲ್ಲಿ ಗೌರವ ಸಿಗಲಿದೆ.

ಕರ್ಕ: ಒಳ್ಳೆಯ ಕಾಲ ಬರುವುದೆಂದು ಕಾದು ಕುಳಿತರೆ ಪ್ರಯೋಜನವಿಲ್ಲ. ನಿಮ್ಮ ಕೆಲಸವನ್ನು ನೀವು ಮಾಡಿ. ಕಾಲ ಬಂದಾಗ ಅದು ಮಾಡಬೇಕಾದುದನ್ನು ಮಾಡುತ್ತದೆ. ಮಕ್ಕಳ ಭವಿಷ್ಯವು ಚನ್ನಾಗಿರಲು ಅವರ ಹೆಸರಿನಲ್ಲಿ ಹೂಡಿಕೆ ಮಾಡುವಿರಿ. ಮಕ್ಕಳ ವಿಚಾರದಲ್ಲಿ ತಾರತಮ್ಯವನ್ನು ತೋರಿಸಿ ಅವರ ಬಾಯಿಗೆ ಸಿಗುವಿರಿ. ನಿಮ್ಮ ಯೋಜನೆಗೆ ಕುಟುಂಬ ಹಾಗೂ ಸ್ನೇಹಿತ ಬಳಗ ಸಹಾಯ ಮಾಡುವುದು. ಭೂಮಿಗೆ ಸಂಬಂಧಿಸಿದ ಉದ್ಯೋಗವನ್ನು ಆರಂಭ ಮಾಡಬೇಡಿ ಮತ್ತು ಇರುವ ಉದ್ಯೋಗವು ಯಥಾಸ್ಥಿತಿಯಲ್ಲಿ ಇರಲಿ. ಹತ್ತಾರು ಊರು ಸುತ್ತಿದರೂ ನಿಮಗೆ ಮನಯೇ ಶ್ರೇಷ್ಠ ಎನ್ನಿಸಬಹುದು. ಸುಬ್ರಹ್ಮಣ್ಯನ ಸ್ತೋತ್ರ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More