AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಹಣಕಾಸಿನ ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ಅಗತ್ಯ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಹಣಕಾಸಿನ ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ಅಗತ್ಯ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 19, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 19) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಅಮಾವಾಸ್ಯಾ, ನಿತ್ಯನಕ್ಷತ್ರ: ಭರಣೀ, ಯೋಗ: ಸೌಭಾಗ್ಯ, ಕರಣ: ಚತುಷ್ಪಾತ್, ಸೂರ್ಯೋದಯ ಬೆಳಗ್ಗೆ 06 ಗಂಟೆ 05 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:53 ರಿಂದ ಮಧ್ಯಾಹ್ನ 12:29ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:41 ರಿಂದ 05:17ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:17ರ ವರೆಗೆ.

ಮೇಷ: ಮಕ್ಕಳ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಉತ್ಸಾಹವು ನಿಮ್ಮಲ್ಲಿ ಇರುವುದು. ಅಪ್ರಯೋಜಕ ಕೆಲಸಗಳನ್ನು ಮಾಡಲು ನೀವು ಹಿಂದೇಟು ಹಾಕಬಹುದು. ಸ್ನೇಹಿತರ ಸಜವಾಸದಿಂದ‌ನಿಮಗೆ ಅಪವಾದ ಬರಬಹುದು. ಪ್ರಯಾಣ ಮಾಡಬೇಕಾಗಿದ್ದರೂ ಭಯವು ನಿಮ್ಮನ್ನು ಕಾಡಬಹುದು. ನಿಮ್ಮ ಸಂಗಾತಿಯನ್ನು ಬೆಂಬಲಿಸಿ, ದುರ್ಬಲಗೊಂಡ ಬಂಧವನ್ನು ಮತ್ತೆ ಬಲಗೊಳಿಸಿಕೊಳ್ಳಿ. ಇಂದು ಶುಭದ ನಿರೀಕ್ಷೆಯಲ್ಲಿ ಇರುವಿರಿ. ಕೊಟ್ಟ ಸಾಲವು ಮರಳಿ ಬರುವ ಸಾಧ್ಯತೆ ಇದೆ. ಇದು ನಿಮ್ಮನ್ನು ಸಂತೋಷವಾಗಿ ಇಡಬಲ್ಲದು. ಕೆಲಸದ ಸ್ಥಳವನ್ನು ಶಿಸ್ತಿನಿಂದ ಇಟ್ಟುಕೊಳ್ಳುವಿರಿ.

ವೃಷಭ: ಹೊಸತನವನ್ನು ತಂದುಕೊಳ್ಳುವಲ್ಲಿ ನೀವು ಸದಾ ಪ್ರಯತ್ನಶೀಲರು. ಆದರೆ ಆಲಸ್ಯವನ್ನು ಬಿಡಬೇಕಾದೀತು. ಪ್ರೀತಿಗೋಸ್ಕರ ಹಣವನ್ನು ಖರ್ಚುಮಾಡುವಿರಿ. ಒಲ್ಲದ ಮನಸ್ಸಿಂದ ಕೆಲಸವನ್ನು ಮಾಡುವಿರಿ. ಇನ್ನೊಬ್ಬರು ಕೇಳಿದ ಸಹಾಯವನ್ನು ಪ್ರೀತಿಯಿಂದ ಮಾಡಿಕೊಡುವಿರಿ‌. ಅಪರಿಪೂರ್ಣ ಕೆಲಸದ ಯಾದಿಯನ್ನು ತಯಾರಿಸಿ ಮುಂದುವರಿಯಿರಿ. ಅಧ್ಯಾತ್ಮದಲ್ಲಿ ಆಸಕ್ತಿ ಇದ್ದರೂ ಸಮಯದ ಅಭಾವದಿಂದ ಅದು ಅಸಾಧ್ಯವಾದೀತು. ಗುರುಜನರ ಭೇಟಿಯಿಂದ ಮನಸ್ಸು ನೆಮ್ಮದಿಯಿಂದ ಇರಬಹುದು.

ಮಿಥುನ: ಉದ್ಯಮಿಗಳಿಗೆ ಕಳೆದ ಆರಂಭದ ದಿನಗಳನ್ನು ನೆನೆದು ಸಂತೋಷವಾಗಲಿದೆ. ಬಹಳಷ್ಟು ಖರ್ಚಿದ್ದು ಹಣದ ಹೊಂದಾಣಿಕೆ ಕಷ್ಟವಾದೀತು. ನಿಮ್ಮ ಜೀವನದ ಪ್ರತಿಯೊಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನೀವು ಬಯಸುವಿರಿ. ನಿಮ್ಮ ಕೋಪವನ್ನು ನಿಯಂತ್ರಿಸುವುದು ಬಹಳ ಮುಖ್ಯ. ಹಣಕಾಸಿನ ವ್ಯವಹಾರದ ಬಗ್ಗೆ ಗಂಭೀರ ನಿರ್ಧಾರ ತೆಗೆದುಕೊಳ್ಳಿ. ಕಛೇರಿಯ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವಿರಿ. ಪ್ರೀತಿಯನ್ನು ಇಷ್ಟಪಡುವುದಿಲ್ಲ. ಸ್ವಂತ್ರವಾಗಿರಲು ಇಚ್ಛಿಸುವಿರಿ. ಕುಟುಂಬದ ಜೊತೆ ಇದ್ದರೂ ಅಲ್ಲಿಂದ ದೂರವಿರಲು ಪ್ರಯತ್ನಿಸುವಿರಿ.

ಕಟಕ: ಆರಂಭದ ಉತ್ಸಾಹವು ಅಂತ್ಯದ ವರೆಗೆ ಇರಲಾರದು. ಆಹಾರವು ನಿಮ್ಮನ್ನು ಉತ್ಸಾಹದಿಂದ ಇಡುವುದು. ಇತರರಿಗೆ ಧನಸಹಾಯ ಮಾಡಿ ಕಳೆದುಕೊಳ್ಳುವಿರಿ. ಒಂದೇ ರೀತಿಯ ದಿನಚರಿಯಿಂದ ಬೇಸರಗೊಂಡು ಪ್ರಯಾಣದ ಹುರುಪು ನಿಮ್ಮಲ್ಲಿ ಕಾಣಲಿದೆ. ನಿಮ್ಮ ಮಾತುಗಳು ಇತರರಿಗೆ ಸ್ಫೂರ್ತಿಯಾದೀತು. ನಿಮ್ಮ‌ ನಿರೀಕ್ಷೆಯಲ್ಲಿ ಇದ್ದವರಿಗೆ ಬೇಸರ ಮಾಡಿಸಬೇಡಿ. ಮಕ್ಕಳಿಗೆ ಔದಾರ್ಯ ತೋರಿ, ಅವರ ದೃಷ್ಟಿಯಲ್ಲಿ ದೊಡ್ಡವರಾಗುವಿರಿ. ಶಾರೀರಿಕ ಆಯಾಸವನ್ನು ವಿಶ್ರಾಂತಿಯಿಂದ ಪರಿಹರಿಸಿಕೊಳ್ಳಿ. ಒತ್ತಡಗಳು ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದೆ.

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು