AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದಿನ ರಾಶಿಭವಿಷ್ಯ, ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರನ್ನು ಹಾಸ್ಯ ಮಾಡಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 1) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಉದ್ಯೋಗದ ಸ್ಥಳದಲ್ಲಿ ಈ ರಾಶಿಯವರನ್ನು ಹಾಸ್ಯ ಮಾಡಬಹುದು
ಇಂದಿನ ರಾಶಿ ಭವಿಷ್ಯ
Rakesh Nayak Manchi
|

Updated on: Jun 01, 2023 | 12:15 AM

Share

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್ 1) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ಸ್ವಾತಿ, ಯೋಗ: ಶೂಲ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:07 ರಿಂದ 03:43ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:40ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:17 ರಿಂದ 10:54ರ ವರೆಗೆ.

ಮೇಷ: ಕಳೆದುದರ ಬಗ್ಗೆ ನಿಮಗೆ ಚಿಂತೆ ಇರದಿದ್ದರೂ ಅದು ನಿಮ್ಮನ್ನು ಕಾಡಬಹುದು. ಅನಿರೀಕ್ಷಿತ ವಾರ್ತೆಯು ನಿಮ್ಮ ಕೆಲಸವನ್ನು ವ್ಯತ್ಯಾಸ ಮಾಡೀತು. ಭೂಮಿಯ ವಿಚಾರದಲ್ಲಿ ನೀವು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಿ. ದುಡಿಕಿನ ನಿರ್ಧಾರವನ್ನು ಮಾಡಿ ದಿನವನ್ನು ಹಾಳು ಮಾಡಿಕೊಳ್ಳಬೇಡಿ. ವಿವಾಹ ಕಾಲವು ಬಂದಾಗ ಅದನ್ನು ನಿರಾಕರಿಸುವುದು ಒಳ್ಳೆಯದಲ್ಲ. ಸಮಸ್ಯೆಯನ್ನು ಆಪ್ತರ ಜೊತೆ ಸಮಾಲೋಚನೆ‌ ಮಾಡಿಕೊಂಡು ಮುಂದುವರಿಯಿರಿ. ನಿಮ್ಮ‌ ನಿಷ್ಪಕ್ಷಪಾತ ಧೋರಣೆಯು ಕೆಲವರಿಗೆ ಇಷ್ಟವಾದೀತು. ನಿಮ್ಮ ನಿರ್ಧರಗಳಿಗೆ ನೀವು ಬದ್ಧರಾಗಿರುವಿರಿ.

ವೃಷಭ: ಉದ್ಯೋಗದ ಸ್ಥಳದಲ್ಲಿ ನಿಮ್ಮನ್ನು ಹಾಸ್ಯ ಮಾಡಬಹುದು. ಧಾರ್ಮಿಕ ಆಚರಣೆಯಲ್ಲಿ ಹೆಚ್ಚು ತೊಡಗಿಕೊಳ್ಳುವಿರಿ. ನಿಮ್ಮ ಮೇಲೆ ಹೆಚ್ಚಿನ ಜವಾಬ್ದಾರಿಗಳು ಬರಬಹುದು. ಸರ್ಕಾರಿ ಉದ್ಯೋಗಿಗಳಿಗೆ ಸಂತೋಷದ ಸುದ್ದಿ ಬರಬಹುದು. ಅಧಿಕ ಶ್ರಮದಿಂದ ಅಲ್ಪ ಲಾಭವನ್ನು ನೀವು ಗಳಿಸುವಿರಿ. ಬುದ್ಧಿಪೂರ್ವಕವಾಗಿ ಕೆಲಸವನ್ನು ಬದಲಾಯಿಸುವಿರಿ. ನೋವನ್ನು ನುಂಗುವುದು ನಿಮಗೆ ಸಹಜವಾಗಲಿದೆ. ಹಳೆಯ ನೋವಿನಿಂದ ನೀವು ಬಳಲಬಹುದು. ಕುಟುಂಬದವರ ಜೊತೆ ಸಮಯವನ್ನು ಕಳೆಯುವಿರಿ.

ಮಿಥುನ: ಸುಂದರವಾದ ದಿನವನ್ನು ಕಳೆಯಲು ನೀವು ಯೋಜನೆಯನ್ನು ರೂಪಿಸಿಕೊಳ್ಳುವಿರಿ. ನಿದ್ರೆಯ ತೊಂದರೆಯಿಂದ ನಿಮಗೆ ಕಿರಿಕಿರಿಯಾಗಬಹುದು. ಮನಸ್ಸನ್ನು ಚಂಚಲವಾಗಿಸದೇ ಕೆಲಸದಲ್ಲಿಯೇ ಇಟ್ಟಿರಿ. ಇಲ್ಲವಾದರೆ ಇಂದಿನ ಪ್ರಮುಖ ಕೆಲಸವು ವ್ಯತ್ಯಾಸ ಆಗಬಹುದು. ಇನ್ನೊಬ್ಬರ ಮೇಲೆ‌ಕರುಣೆ ಬರಬಹುದು. ಆಪ್ತರಿಗೆ ಧನಸಹಾಯವನ್ನು ಮಾಡುವಿರಿ. ತಣ್ಣೀರಿನ್ನೂ ತಣಿಸಿ ಕುಡಿಯುವ ಸಂದರ್ಭವು ಬರಬಹುದು. ಅನಗತ್ಯ ವಿಷಯಕ್ಕೆ ತಲೆ ಹಾಕುವುದು ಬೇಡ. ನಿರಂತರ ಕೆಲಸದ ಪರಿಣಾಮ ನಿಮಗೆ ಫಲ ಸಿಗಬಹುದು.

ಕಟಕ: ಸಂತೋಷವನ್ನು ಅನುಭವಿಸಬೇಕೆಂದು ಏನನ್ನಾದರೂ ಮಾಡಲು ಹೋಗಬೇಕಾದೀತು. ನಿಮ್ಮ ನಡತೆಯ ಬಗ್ಗೆ ನಿಮಗೆ ಗೊತ್ತಿರಲಿ. ಆರ್ಥಿಕವಾಗಿ ಸಬಲರಲ್ಲದಿದ್ದರೂ ಸಮಯಕ್ಕೆ ಸರಿಯಾಗಿ ಸಿಗುವ ಸಹಾಯದಿಂದ ಬೇಕಾದುದನ್ನು ಸಾಧಿಸಿಕೊಳ್ಳುವಿರಿ. ಕುಟುಂಬದ ಬಗ್ಗೆ ನಿಮಗೆ ಒಳ್ಳೆಯ ಮನಸ್ಸು ಇರದು. ಸಹೋದರನಿಂದ ಸಹಾಯವಾಗಲಿದೆ‌. ವಿವಾಹಕ್ಕೆ ಮಾತುಕತೆಗಳು ನಡೆಯುವುದು. ಗೆಳೆತನಕ್ಕೆ ಒಳ್ಳೆಯ ವ್ಯಕ್ತಿಗಳು ಸಿಗಬಹುದು. ಆರೋಗ್ಯದ ಮೇಲೆ ಗಮನವಿರಲಿ. ಆಧಿಕ ಖರ್ಚನ್ನು ಮಾಡಿಕೊಳ್ಳುವುದು ಬೇಡ.

-ಲೋಹಿತಶರ್ಮಾ ಇಡುವಾಣಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ