AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ತಮ್ಮ ಸಂಗಾತಿಯನ್ನು ಸಂತೋಷಗೊಳಿಸಲು ಬಹಳ ಕಷ್ಟಪಡಬೇಕಾದೀತು

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ತಮ್ಮ ಸಂಗಾತಿಯನ್ನು ಸಂತೋಷಗೊಳಿಸಲು ಬಹಳ ಕಷ್ಟಪಡಬೇಕಾದೀತು
ಇಂದಿನ ರಾಶಿಭವಿಷ್ಯ
Rakesh Nayak Manchi
|

Updated on: May 20, 2023 | 5:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮೇ 20 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪ್ರತಿಪತ್, ನಿತ್ಯನಕ್ಷತ್ರ: ಕೃತ್ತಿಕಾ, ಯೋಗ: ಶೋಭನ, ಕರಣ: ಕಿಂಸ್ತುಘ್ನ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 52 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:17 ರಿಂದ 10:53ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:05 ರಿಂದ 05:41ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:05 ರಿಂದ 07:41ರ ವರೆಗೆ.

ಮೇಷ: ನಿಮ್ಮ ದುರಭ್ಯಾಸಗಳಿಂದ ನಿಮ್ಮವರಿಗೆ ಅಪಮಾವಾದೀತು. ಆಯಾಸವಾಗಿದ್ದರೆ ವಿಶ್ರಾಂತಿಯನ್ನು ಸ್ವಲ್ಪ ಪಡೆಯಿರಿ. ಪ್ರಾಪಂಚಿಕ ವಿಷಯದಲ್ಲಿ ಆಸಕ್ತಿ ಕಡಿಮೆ ಇರಲಿದೆ. ಯೋಗ್ಯ ಜನರನ್ನು ಭೇಟಿಯಾಗಿ ನಿಮ್ಮ ಬಗ್ಗೆ ತಿಳಿಸಿ. ಒತ್ತಾಯಕ್ಕೆ ಮಣಿದು ಏನನ್ನಾದರೂ ಮಾಡಲು ಹೋಗಬೇಕಾದೀತು. ಸಂದರ್ಭೋಚಿತ ಮಾತುಗಳಿಗೆ ತಲೆ ಕೆಡಿಸಿಕೊಳ್ಳುವ ಅಗತ್ಯವಿರದು. ಮಕ್ಕಳನ್ನು ಬಹಳ ಪ್ರೀತಿಸುವಿರಿ. ಬಂದಿದ್ದನ್ನು ಸ್ವೀಕರಿಸುವ ಮನಃಸ್ಥಿತಿ ಇಂದು ಇರಲಿದೆ.

ವೃಷಭ: ಆಹಾರವನ್ನು ಕಡಿಮೆ ಮಾಡಲು ವೈದ್ಯರ ಸಲಹೆಯನ್ನು ಪಡೆಯುವಿರಿ. ಕುಟುಂಬದ ಒತ್ತಡವನ್ನು ಕಛೇರಿಗೆ ಒಯ್ಯವುದು ಬೇಡ. ಬಹು ಮುಖ್ಯ ಕೆಲಸಕ್ಕಾಗಿ ಕಾದು ಸಮಯವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಇಂದು ಮಾಡಬೇಕಾದುದನ್ನು ಮಾಡಿ ಮುಗಿಸಿ.‌ ಇನ್ನೊಂದು ದಿನಕ್ಕೆಂದು ಕಾಯುವುದು ಬೇಡ. ಸಮಯವನ್ನು ಪಡೆದು ಒಂದು ಸರಿಯಾದ ನಿರ್ಧಾರವನ್ನು ಮಾಡಿಕೊಳ್ಳುವುದು ಉತ್ತಮ. ಅಸಡ್ಡೆಯಿಂದ ಸಿಗುವ ಅವಕಾಶಗಳನ್ನು ಕಳೆದುಕೊಳ್ಳಲಿದ್ದೀರಿ. ಹೊಸ ವಿಷಯವನ್ನು ತಿಳಿದುಕೊಳ್ಳಲು ನಿರ್ಧಾರವನ್ನು ಮಾಡುವಿರಿ. ಕುಟುಂಬದ ಪ್ರೀತಿಯನ್ನು ಇಂದು ಕಳೆದುಕೊಳ್ಳುವ ಸಾಧ್ಯತೆ ಇದೆ.

ಮಿಥುನ: ನಿಮ್ಮ ಆಹಾರದ ಕ್ರಮವನ್ನು ಬದಲಿಸಿಕೊಳ್ಳಲು ವೈದ್ಯರ ಸಲಹೆಯನ್ನು ಪಡೆಯಬೇಕಾಗಬಹುದು. ಹಣಕಾಸಿನ ತೊಂದರೆ ಬಂದರೂ ಅದನ್ನು ನಿಭಾಯಿಸುವ ಚಾಣಕ್ಷತನ ನಿಮಗೆ ಗೊತ್ತಿದೆ. ತಂದೆಯ ಮಾತನ್ನು ಶ್ರದ್ಧೆಯಿಂದ ಪಾಲಿಸುವಿರಿ. ನಿರುದ್ಯೋಗ ಎಂಬ ಕೊರಗು ನಿಮ್ಮನ್ನು ಕಾಡಬಹುದು. ಕಫಕ್ಕೆ ಸಂಬಂಧಿಸಿದ ಖಾಯಿಲೆಯು ಆರಂಭವಾಗಬಹುದು. ಸಿಕ್ಕ ಉದ್ಯೋಗವನ್ನು ಬಹಳ ಪ್ರೀತಿಸುವಿರಿ. ಸಂಸಾರದ ಬಿಕ್ಕಟ್ಟನ್ನು ಬಿಡಿಸುವ ಪ್ರಯತ್ನ ಮಾಡುವರಿದ್ದೀರಿ. ಸಾಮರಸ್ಯವನ್ನು ಕಾಪಾಡಿಕೊಳ್ಳಲು ನೀವು ಬಯಸಬಹುದು.

ಕಟಕ: ಆಪ್ತರ ಆಲೋಚನೆಗಳನ್ನು ಸ್ವೀಕರಿಸುವಿರಿ. ನಿಮ್ಮ ವ್ಯಕ್ತಿತ್ವವನ್ನು ಬದಲಿಸಿಕೊಳ್ಳಲು ಬಯಸುವಿರಿ. ಸಂಗಾತಿಯ ಜೊತೆ ಅಪರೂಪಕ್ಕೆ ದೂರಪ್ರಯಾಣವನ್ನು ಮಾಡಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಬೇರೆ ಜವಾಬ್ದಾರಿಗಳು ಬರುವಂತಿದ್ದರೂ ಅದನ್ನು ನಿರಾಕರಿಸುವಿರಿ. ಕಛೇರಿಯಲ್ಲಿ ನಿಮ್ಮ ಕೆಲಸಗಳನ್ನು ನೋದಿ ಆಡಿಕೊಳ್ಳಬಹುದು.‌ ಇನ್ನೊಬ್ಬರನ್ನು ಅನುಕರಿಸಲಿದ್ದೀರಿ. ಸಂಗಾತಿಯನ್ನು ಸಂತೋಷಗೊಳಿಸಲು ಬಹಳ ಕಷ್ಟಪಡಬೇಕಾದೀತು. ಅತಿಯಾದ ಉತ್ಸಾಹದಲ್ಲಿ ಏನನ್ನಾದರೂ ಹೇಳುವ ಸಾಧ್ಯತೆ ಇದೆ.

-ಲೋಹಿತಶರ್ಮಾ ಇಡುವಾಣಿ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್