AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nithya Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​23) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Nithya Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯ
ಗಂಗಾಧರ​ ಬ. ಸಾಬೋಜಿ
|

Updated on: Apr 23, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದ್ರೆ ಇಂದಿನ (2023 ಏಪ್ರಿಲ್​ 23) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೇಷ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ಸೌಭಾಗ್ಯ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ರಿಂದ 15 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 46 ನಿಮಿಷಕ್ಕೆ, ರಾಹು ಕಾಲ ಸಂಜೆ 05:12 ರಿಂದ 06:46ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:31 ರಿಂದ 02:05ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:38 ರಿಂದ 05:12ರ ವರೆಗೆ.

ಮೇಷ: ಉದ್ಯೋಗದ ನಿಮಿತ್ತ ಪ್ರಯಾಣವು ಅವಶ್ಯಕವಾದರೆ ಮಾತ್ರ ಮಾಡಿ.‌ ಇಲ್ಲವಾದರೆ ಬೇಡ. ನೀವು ಅಪರೂಪಕ್ಕೆ ಸಿಕ್ಕ ಸದನೇಹಿತನ ಜೊತೆ ಸಮಯವನ್ನು ಕಳೆಯುವಿರಿ. ದೇವರ ಸೇವೆ ಮಾಡುವ ಮನಸ್ಸಾಗಲಿದೆ. ಈಗಾಗಲೇ ಹೊಸ ಯೋಜನೆಯ ಕುರಿತು ಆಲೋಚಿಸಿದ್ದರೆ ಇಂದು ಅದನ್ನು ಪ್ರಾರಂಭಿಸಬಹುದು. ವೃತ್ತಿಜೀವನದಲ್ಲಿ ಒಳ್ಳೆಯ ಹಂತವನ್ನು ತಲುಪಲು ಇಂದಿನಿಂದ‌ ಶ್ರಮವಹಿಸುವುದು ಅಗತ್ಯ. ಮಂಡಿನೋವಿನಿಂದ ಇಂದು ಕಷ್ಟಪಡುವಿರಿ. ಯಾರನ್ನೂ ನಂಬುವ ಸ್ಥಿತಿಯಲ್ಲಿ ಇಂದು ನೀವಿರುವುದಿಲ್ಲ. ಅದಷ್ಟು ಕಡಿಮೆ ಮಾತನಾಡಿ.

ವೃಷಭ: ನೀವು ವಿವಾಹ ಸಮಾರಂಭದಲ್ಲಿ ಭಾಗವಹಿಸುವಿರಿ. ನಿಮ್ಮ ಮಕ್ಕಳ ವೃತ್ತಿಜೀವನದ ಬಗ್ಗೆ ನೀವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ವೈಯಕ್ತಿಕ ಸಂಬಂಧದಲ್ಲಿ ಅನ್ನೋನ್ಯತೆ ಹೆಚ್ಚಾಗುವ ಸಾಧ್ಯತೆ ಇದೆ‌. ಪುಣ್ಯಕ್ಷೇತ್ರಗಳಿಗೆ ಪ್ರವಾಸ ಹೋಗುವಿರಿ. ವೃತ್ತಿಯಲ್ಲಿ ಗೊಂದಲವಿರಲಿದೆ‌. ಅಲ್ಪಾವಧಿಯ ವೃತ್ತಿಗೆ ಸೇರಿಕೊಳ್ಳುವುದು ಉತ್ತಮ. ಯಾರ ಮೇಲೋ ಸಿಟ್ಟುಗೊಂಡು ಇನ್ಯಾರಮೇಲೋ ತೀರಿಸಿಕೊಳ್ಳುವುದು ಬೇಡ. ದೂರದ ಊರಿಗೆ ಹೋದಾಗ ಉತ್ತಮ ವ್ಯವಸ್ಥೆ ಆಗಲಿದೆ. ಶಿಕ್ಷಕರು ಆದಷ್ಟು ಜಾಗರೂಕರಗಿ ವರ್ತಿಸಿ. ನಿಮ್ಮನ್ನು ಮಕ್ಕಳು ನೋಡುವರು. ಆಹಾರದಲ್ಲಿ ಮಿತಿ ಇರಲಿ.

ಮಿಥುನ: ಹೊಸ ಆದಾಯ ಮೂಲವನ್ನು ಸೃಷ್ಟಿಮಾಡಿಕೊಳ್ಳುವಿರಿ. ನಿಮ್ಮ ಸೌಮ್ಯಸ್ವಭಾವ ಮತ್ತು ಅತ್ಯುತ್ತಮ ಸಂವಹನ ಕೌಶಲ್ಯಕ್ಕಾಗಿ ನೀಮ್ಮನ್ನು ಪ್ರಶಂಸೆ ಸಿಗಬಹುದು. ಸಾಲಗಾರರಿಂದ ನೀವು ಬಾಕಿ ಹಣವನ್ನು ಮರಳಿ ಬರಲಿದೆ. ಮಾತನ್ನು ಸ್ವಲ್ಪ ಕಡಿತಗೊಳಿಸಿದರೆ ಸುಖ. ಕೆಲಸದ ಸ್ಥಳದಲ್ಲಿ ನಿಮ್ಮ ಕಾರ್ಯಕ್ಷಮತೆಯನ್ನು ಪ್ರಶಂಸಿಸಲಾಗುತ್ತದೆ. ನಿಮ್ಮದಲ್ಲದ ವಿಚಾರಕ್ಕೆ ನೀವು ಮೂಗು ತೂರಿಸಬೇಡಿ. ಪ್ರೇಮದ ವಿಚಾರದಲ್ಲಿ ಅನುಮಾನ ಬರಬಹುದು.‌ ಗುಟ್ಟಾಗಿ ವಿಚಾರವನ್ನು ತಿಳಿದುಕೊಳ್ಳುವಿರಿ. ಆಡಿದ ಮಾತಿನ ತಪ್ಪಿಗೆ ಕ್ಷಮೆ ಕೇಳುವರು.

ಕರ್ಕ: ನಿವೃತ್ತಿಯ ಜೀವನ ಬೇಸರ ತರಿಸುವುದು.‌ ಕುಳಿತಲ್ಲೇ ಕುಳಿತ ನಿಮಗೆ ಕೆಲಸವನ್ನು ಮಾಡುವ ಅಪೇಕ್ಷೆ ಉಂಟಾಗುವುದು. ನಿಮ್ಮ ಗುರಿಯ ಮೇಲೆ ನಿಮ್ಮ ಗಮನವಿರಲಿ. ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಹೋಗುವ ಆಸಕ್ತಿಯನ್ನು ಹೊಂದುವರಿ. ಅನಾರೋಗ್ಯ ಕಾಣಿಸಿಕೊಳ್ಳಬಹುದು. ಶೀಘ್ರವಾಗಿ ಮದ್ದು ಮಾಡಿ. ಕೆಲಸದಲ್ಲಿ ನೀವು ಕಡಿಮೆ ಪ್ರಯತ್ನದಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದಾಗಿದೆ. ಆದರೆ ನಿಮ್ಮ ಬುದ್ಧಿಯನ್ನು ಬಳಸಿಕೊಳ್ಳಬೇಕಿದೆ. ವೈವಾಹಿಕ ಜೀವನವು ತುಂಬಾ ಸರಸಮಯವಾಗಿರುವಿದು. ಕಾರ್ಯ ಸ್ಥಳದಲ್ಲಿ ನಿಮ್ಮ ವ್ಯವಸ್ಥಾಪಕರೊಂದಿಗೆ ನೀವು ಉತ್ತಮ ಬಾಂಧವ್ಯವನ್ನು ಹೊಂದುವಿರಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು