AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ

2023 ಮಾರ್ಚ್ 24 ಶುಕ್ರವಾರದ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಫಲ, ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: hindirush.com
ಗಂಗಾಧರ​ ಬ. ಸಾಬೋಜಿ
|

Updated on: Mar 24, 2023 | 5:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಮಾರ್ಚ್ 24 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಚೈತ್ರ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಅಶ್ವಿನೀ, ಯೋಗ : ವೈಧೃತಿ, ಕರಣ : ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 35 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 42 ನಿಮಿಷಕ್ಕೆ, ರಾಹು ಕಾಲ 11 :08 ರಿಂದ 12:39ರವರೆಗೆ, ಯಮಘಂಡ ಕಾಲ 03:41 ರಿಂದ 05:12ರ ವರೆಗೆ, ಗುಳಿಕ ಕಾಲ 08:06 ರಿಂದ 09: 37 ರ ವರೆಗೆ.
ಮೇಷ: ಇಂದು ನೀವು ಪ್ರಮುಖವ್ಯಕ್ತಿಗಳೊಂದಿಗೆ ಸಂಬಂಧಗಳು ಬಲಗೊಳ್ಳುವುದು. ಅದೇ ಸಮಯದಲ್ಲಿ, ಯೋಗವು ಇದ್ದಕ್ಕಿದ್ದಂತೆ ಸಂಪತ್ತಿನ ಮೂಲವಾಗುತ್ತಿದೆ. ಸೃಜನಶೀಲತೆ ಅರಳಲಿದೆ. ನಿಮ್ಮ ಪ್ರತಿಭೆಯಿಂದ ನೀವು ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಿರಿಯರ ಅನುಭವದಿಂದ ಪ್ರಯೋಜನ ಪಡೆಯುವಿರಿ. ಅನಗತ್ಯ ವಾದಗಳನ್ನು ಮಾಡಿ, ಕುಟುಂಬದ ಸದಸ್ಯರನ್ನು ನೋಯಿಸುವಿರಿ. ಸೋಮಾರಿತನದಿಂದ ಸಮಯವು ವ್ಯರ್ಥವಾಗಲಿದೆ. ಚಂಚಲವಾದ ಮನಸ್ಸನ್ನು ನಿಗ್ರಹಿಸಲು ಪ್ರಯತ್ನಿಸಿ. ಅರ್ಧನಾರೀಶ್ವರಸ್ತೋತ್ರವನ್ನು ಮಾಡಿ.

ವೃಷಭ: ಇಂದು ನೀವು ನಿಮ್ಮ ಆಸೆಗಳನ್ನು ಈಡೇರಿಸಲು ದಾರಿ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಹೊಸ ಸಾಧ್ಯತೆಗಳು ಕಾಣಿಸಿಕೊಳ್ಳುಲಿದೆ. ಮನೆಯಲ್ಲಿ ಸಂತೋಷದ ವಾತಾವರಣವು ಇರುತ್ತದೆ. ಸಹೋದರನ ನಡವಳಿಕೆಯಿಂದ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕ ಯೋಗವಿದೆ. ತರಾತುರಿಯಲ್ಲಿ ಮಾಡಿದ ಕೆಲಸವು ಹಾನಿಯನ್ನುಂಟು ಮಾಡುತ್ತದೆ. ಮಗುವಿನ ನಡವಳಿಕೆಯು ನೋವನ್ನು ಉಂಟುಮಾಡುತ್ತದೆ. ಮಕ್ಕಳಿಗೆ ವಿದ್ಯಾಭ್ಯಾಸವನ್ನು ಮಾಡಲು ಆಸಕ್ತಿ ಉಂಟಾಗಬಹುದು.

ಮಿಥುನ: ಇಂದು ಅಧಿಕ ಖರ್ಚುಗಳು ಉಂಟಾಗಲಿದೆ. ಆದರೆ ಒಳ್ಳೆಯ ಕಾರ್ಯಕ್ಕೆ ಆಗುತ್ತಿದೆ ಎಂಬ ಸಂತೋಷವಿರಲಿದೆ. ಚಿಂತನಾ ಹೆಚ್ಚಾಗುತ್ತದೆ. ಹೊಸ ಭರವಸೆಗಳು ಸಂತೋಷವನ್ನು ತರುತ್ತವೆ. ಭೂಮಿಯ ವ್ಯವಹಾರವನ್ನು ಮಾಡಲಿದ್ದೀರಿ. ಸೇವೆ ಮತ್ತು ದಾನದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹೊಸ ಸಂಪರ್ಕಗಳು ಪ್ರಯೋಜನಕಾರಿಯಾಗಲಿವೆ. ಸಂಗಾತಿಯ ಬೆಂಬಲ ಇರುತ್ತದೆ. ಆಲೋಚನೆಗಳು ನಿಧಾನಗತಿಯಲ್ಲಿ ಇರಲಿವೆ. ಉತ್ತಮ ಆರೋಗ್ಯ ಇರುತ್ತದೆ.

ಕಟಕ: ಭೋಗದ ವಸ್ತುಗಳ ಮೂಲಕ ಖುಷಿ ಪಡೆಯುವಿರಿ. ನಿಮ್ಮ ಇಂದಿನ ಲೆಕ್ಕಾಚಾರ ಸರಿಯಾಗಲಿದೆ. ಸಹನೆಯ ನಿಮ್ಮ ಗುಣದಿಂದ ಸಾಕಷ್ಟು ಅನುಕೂಲವನ್ನು‌ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹೊಸತನ್ನು ಕಲಿಯಬೇಕು ಎನದನುವ ತುಡಿತ ಇರಲಿದೆ. ಬಹುದಿನಗಳಿಂದ ಯೋಚಿಸುತ್ತಿದ್ದ ಮಹತ್ವದ ಕಾರ್ಯವೊಂದಕ್ಕೆ ಚಾಲನೆ ನೀಡುವಿರಿ. ಹಿರಿಯರ ಸಲಹೆಯಿಂದ ಪ್ರಯೋಜನವಾಗಲಿದೆ. ಅತಿಯಾದ ಭವಿಷ್ಯದ ಚಿಂತನೆಯಿಂದ ಇಂದು ಉಪಯೋಗವಾಗಲಾರದು.

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್