AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 25) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 5:30 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 25) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಗಂಡ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:06 ರಿಂದ 03:42ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:04 ರಿಂದ 07:40ರ ವರೆಗೆ, ಗುಳಿಕ ಕಾಲ 09:17 ರಿಂದ 10:53ರ ವರೆಗೆ.

ಮೇಷ: ನಿಮಗೆ ಸೌಕರ್ಯಗಳು ಹೆಚ್ಚಾಯಿತು ಅನ್ನಿಸಬಹುದು. ಅತಿಯಾದ ತಂತ್ರಜ್ಞಾನದ ಬಳಕೆಯಿಂದ ದೂರವಿರಲು ಬಯಸಬಹುದು. ಪ್ರೇಮ‌ಜೀವನದಲ್ಲಿ ಪ್ರೀತಿಯು ಅತಿಯಾದೀತು. ಇಷ್ಟಪಟ್ಟವರನ್ನು ಪಡೆಯುವ ತಂತ್ರವನ್ನು ಹೂಡಬಹುದು. ಭೋಜನವು ಇಂದು ಸಮೃದ್ಧವಾಗಿ ಸಿಗಲಿದೆ. ಆಪ್ತರಿಗೆಂದು ಉಡುಗೊರೆಯನ್ನು ಸಿದ್ಧಮಾಡಿಕೊಳ್ಳುವಿರಿ. ಅನಗತ್ಯ ಮಾತಿನಿಂದ ನಿಮಗೆ ಸುಸ್ತಾದೀತು.‌ ಮಾತು ಸಾಕೆನಿಸಬಹುದು. ತಾಯಿಯ ಆರೈಕೆಯಲ್ಲಿ ಸಮಯವನ್ನು ಕಳೆಯುವಿರಿ. ಆಕಸ್ಮಿಕವಾಗಿ ದೇವಾಲಯಕ್ಕೆ ಹೋಗಬೇಕಾದೀತು. ಇದು ನಿಮ್ಮ ಶುಭವನ್ನು ಹೇಳುತ್ತದೆ.‌ ಒಳ್ಳೆಯದನ್ನು ಆರಂಭಿಸಿ.

ವೃಷಭ: ನಿಮ್ಮ ಮನಸ್ಸಿಗೆ ವಿರುದ್ಧವಾದ ವಾತಾವರಣವಿದ್ದರೂ ಅದನ್ನು ಮನಸ್ಸಿಗೆ ತೆಗೆದುಕೊಳ್ಳದೇ ಮುನ್ನಡೆಯುವಿರಿ. ಮಕ್ಕಳಿಗೆ ನೀವು ತೋರಿಸುವ ಪ್ರೀತಿಯು ಖುಷಿ ಕೊಡುವುದು. ಹೊಸ ಬಟ್ಟೆಯನ್ನು ಧರಿಸುವಿರಿ. ಆರೋಗ್ಯವು ಸ್ಥಿರವಾಗಿರಲಿದೆ‌. ಸಂಗಾತಿಯ ಜೊತೆ ಮಾತನಾಡದೇ ಕಿರಿಕಿರಿಯಾದೀತು. ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕಲಿದ್ದೀರಿ. ಆಲಸ್ಯದಿಂದ ಮನೆಯಲ್ಲಿಯೇ ಇರುವಿರಿ. ಅಸಂಬದ್ಧ ಆಲೋಚನೆಗಳು ನಿಮ್ಮನ್ನು ವಿಚಲಿತ ಗೊಳಿಸೀತು. ಖರ್ಚಿಗಾಗಿ ತಂದೆಯಿಂದ ಹಣವನ್ನು ಪಡೆಯುವಿರಿ. ಅಲಂಕಾರಕ್ಕೆ ಹೆಚ್ಚಿನ ಸಮಯವನ್ನು ನೀಡುವಿರಿ.

ಮಿಥುನ: ನಿಮ್ಮನ್ನು ಹಳಿದವರೇ ನಿಮ್ಮ ಸಹವಾಸ ಬಯಸಿ ಬರಬಹುದು. ಗುಣಮಟ್ಟದ ಜೀವನಕ್ಕೆ ಹೋಗಲು ಸತತವಾಗಿ ಮಾಡಿದ ಪ್ರಯತ್ನವು ಇಂದು ಫಲ ಕೊಡಬಹುದು. ಅಜಾಗರೂಕತೆಯಿಂದ ಮಾಡಿಕೊಂಡ ಎಡವಟ್ಟಿಗೆ ಸಂಕಟಪಡಬೇಕಾದೀತು. ಕಛೇರಿಯಲ್ಲಿ ಕೆಲಸದಲ್ಲಿ ಖುಷಿಯಿದ್ದು ಬಹಳ ಉತ್ಸಾಹದಿಂದ ಮಾಡುವಿರಿ. ನಿಮ್ಮನ್ನು ಕಂಡು ಇತರರೂ ಖುಷಿಪಟ್ಟಾರು. ಮೇಲಧಿಕಾರಿಗಳ ಹೊಗಳಿಕೆಯು ನಿಮಗೆ ಸಿಕ್ಕೀತು. ಇದು ನಿಮ್ಮ ಎಲ್ಲ ನೋವನ್ನು ಮರೆಸಬಹುದು. ಮಾಡಬೇಕಾದುದನ್ನು ಮಾಡಿಯೇ ತೀರುವಿರಿ.

ಕಟಕ: ಮನೆಯಲ್ಲಿ ನಡೆಯುವ ಸಮಾರಂಭದಲ್ಲಿ ಭಾಗವಹಿಸಲು ದೂರದಿಂದ ಹೋಗುವಿರಿ. ಜನರು ನಿಮ್ಮನ್ನು ಬಹಳ ಪ್ರೀತಿಯಿಂದ ನೋಡುವರು.‌ ನಿಮ್ಮದೇ ವಸ್ತುವಾದರೂ ನಿಮಗೆ ಗೊತ್ತಾಗದೇ ಹೋಗುವ ಸಾಧ್ಯತೆ ಇದೆ. ಕುಟುಂಬದ ಜೊತೆ ಸಂತೋಷವನ್ನು ಹಂಚಿಕೊಳ್ಳಲು ಬಯಸುವಿರಿ. ನಿಮ್ಮ ಪ್ರೇಮವು ಬಹಳ ಅಚ್ಚುಕಟ್ಟಾಗಿ ಇರುವುದು. ಯಾರದೋ ಮಾತಿನ‌ ಮೇಲೆ ನಂಬಿಕೆ ಇಟ್ಟುಕೊಳ್ಳುವುದು ಪೂರ್ಣ ಸರಿಯಲ್ಲ.‌ ನಿಮ್ಮ‌ ಪರೀಕ್ಷೆಯೂ ಬೇಕಾದೀತು. ಕೃಷಿಯಲ್ಲಿ ಸಾಧಿಸುವ ಛಲವು ಬಂದೀತು.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!