AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 26) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: May 26, 2023 | 12:10 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 26) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ಸಪ್ತಮೀ, ನಿತ್ಯನಕ್ಷತ್ರ: ಪುಷ್ಯ, ಯೋಗ: ಸುಕರ್ಮ, ಕರಣ: ಗರಜ , ಸೂರ್ಯೋದಯ ಬೆಳಗ್ಗೆ 06 ಗಂಟೆ 04 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 54 ನಿಮಿಷಕ್ಕೆ, ರಾಹು ಕಾಲ 10:53 ರಿಂದ 12:29ರ ವರೆಗೆ, ಯಮಘಂಡ ಕಾಲ 03:42 ರಿಂದ 05:17ರ ವರೆಗೆ, ಗುಳಿಕ ಕಾಲ 07:40 ರಿಂದ 09:17ರ ವರೆಗೆ.

ಮೇಷ: ನಿಮ್ಮದೇ ಮನಸ್ಸಾದರೂ ನಿಮ್ಮ ಮಾತನ್ನು ಕೇಳದೇ ಇದ್ದೀತು. ಧಾರ್ಮಿಕ ವಿಚಾರದ ಬಗ್ಗೆ ಹೆಚ್ಚು ಲಕ್ಷ್ಯವನ್ನು ವಹಿಸುವಿರಿ. ನೀವು ಅಂದು ಕೊಂಡ ವಿಚಾರಗಳು ನಿಮ್ಮಿಂದ ಆಗಿಲ್ಲ ಎಂಬ ಬೇಸರವು ಉಂಟಾದೀತು. ‌ಹಣಕಾಸಿನ ವಿಚಾರದಲ್ಲಿ ಸ್ವಲ್ಪಮಟ್ಟಿನ ಸುಧಾರಣೆ ಇದ್ದು ಸಂತಸವಿರಲಿದೆ. ಯಂತ್ರಾಗಾರದಲ್ಲಿ ಕೆಲಸವು ಇಂದು ಅತಿಯಾಗಬಹುದು. ಲಲಿತಕಲೆಯಲ್ಲಿ ಆಸಕ್ತಿಯನ್ನು ಹೆಚ್ಚು ಬೆಳೆಸಿಕೊಂಡಿದ್ದರೆ ಸರಿಯಾದ ಮಾರ್ಗವು ಇಂದು ಸಿಗಬಹುದು. ಸಂಗಾತಿಯ ಜೊತೆ ಹೆಚ್ಚಿನ ಸಮಯವನ್ನು ಕಳೆಯಬಹುದು. ಅನೇಕ ದಿನಗಳ ಅನಂತರ ಸಂತೋಷದಿಂದ ಇರುವ ದಿನವಾಗಿದೆ.

ವೃಷಭ: ಬಯಕೆಯನ್ನು ಬಹಳ ಬಲವಾಗಿ ಹಿಡಿದಿಟ್ಟುಕೊಳ್ಳುವಿರಿ. ತೊಂದರೆಯನ್ನು ತೆಗೆದುಕೊಳ್ಳದೇ ಕೆಲಸವನ್ನು ಮುಗಿಸುವ ಮಾನಸಿಕ ಸ್ಥಿತಿಯನ್ನು ಹೊಂದಿದ್ದೀರಿ ಇಂದು. ಇಂದು ನಿಮ್ಮ ಪರೀಕ್ಷೆಯ ಕಾಲವಾಗಿದ್ದು ಬಹಳ ಅಸ್ಥೈರ್ಯವು ಕಾಡುವುದು. ಮನೆಯ ಬಗ್ಗೆ ಚಿಂತೆಯೂ ಕಾಡಬಹುದು. ನಿಮ್ಮ ಜೀವನದ ಬಗ್ಗೆ ನಿಮಗೆ ವಿಧವಾದ ಕನಸುಗಳು ಇರಬಹುದು. ಒಂಟಿಯಾಗಿದ್ದಷ್ಟೂ ಬೇರೆ ಬೇರೆ ಯೋಚನೆಗಳು ಬರಬಹುದು. ಯಾರನ್ನಾದರೂ ಜೊತೆ ಮಾಡಿಕೊಳ್ಳುವುದು ಉತ್ತಮ. ಸೌಂದರ್ಯಕ್ಕೆ ಹೆಚ್ಚು ಒತ್ತು ಕೊಡಬಹುದು.

ಮಿಥುನ: ಮಕ್ಕಳ ಜೊತೆ ಸಂತೋಷವನ್ನು ಅನುಭವಿಸುವಿರಿ. ಅರ್ಥವಿಲ್ಲದ ವ್ಯರ್ಥ ಮಾತುಗಳನ್ನು ನಿಲ್ಲಿಸುವುದು ಉತ್ತಮ‌. ನೀವು ಬಯಸಿದ ವಸ್ತುವು ಅನಾಯಾಸವಾಗಿ ದೊರೆಯುವುದು. ಸಂಗಾತಿಯ ವಿಚಾರದಲ್ಲಿ ಪ್ರೀತಿಯು ಕಡಿಮೆ‌ ಆದೀತು. ವಿದ್ಯಾರ್ಥಿಗಳು ಆಗಿ ಹೋದರ ಬಗ್ಗೆ ಹೆಮ್ಮೆಯಿಂದ‌ ಬೀಗುವ ಅವಶ್ಯಕತೆಯಿಲ್ಲ. ಮುಂದಿನ ವಿದ್ಯಾಭ್ಯಾಸಕ್ಕೆ ಹೆಚ್ಚು ಮಹತ್ತ್ವವನ್ನು ಕೊಡಿ. ಒಬ್ಬರೇ ಎಲ್ಲಿಯಾದರೂ ಸುತ್ತಾಟ ಮಾಡಬಹುದು. ಎಲ್ಲವನ್ನೂ ಪರೀಕ್ಷಿಸಿ ಪಡೆದುಕೊಳ್ಳುವಿರಿ. ಸಾಧರಣಕ್ಕೆ ಒಪ್ಪುದಿಲ್ಲ. ನೀವು ಮಾಡುವ ತಮಾಷೆಯಿಂದ ನಿಮ್ಮನ್ನೇ ನೋಡಿ ನಕ್ಕಾರು. ಅಪಮಾನದಂತೆ ಅನ್ನಿಸೀತು ನಿಮಗೆ.

ಕಟಕ: ಸಂಗಾತಿಯ ಜೊತೆ ಸಂತೋಷ ಕೂಟದಲ್ಲಿ ಭಾಗವಹಿಸುವಿರಿ. ಸ್ನೇಹಿತರಿಂದ ಹಣವನ್ನು ಸಾಲವಾಗಿಯೂ ಒಡೆಯಬಹುದು. ಸುವ್ಯವಸ್ಥಿತ ಭವಿಷ್ಯದ ಕನಸು ಕಾಣುವಿರಿ. ಮಕ್ಕಳಿಲ್ಲ ಎಂಬ ಕೊರಗು ಅತಿಯಾಗಬಹುದು. ನಿಮ್ಮನ್ನು ಸಮ್ಮಾನಿಸಲು ಆಹ್ವಾನ ಬರಬಹುದು. ಅಸ್ಥಿರವಾದ ವ್ಯವಸ್ಥೆಯು ಕಿರಿಕಿರಿಯನ್ನು ಉಂಟುಮಾಡಬಹುದು. ಕೋಪಗೊಳ್ಳಬೇಕಾದ ಪರಿಸ್ಥಿತಿ ಇದ್ದರೂ ಅದನ್ನು ನಿಯಂತ್ರಿಸಿಕೊಳ್ಳಬೇಕಾಗಿದೆ. ಸಹೋದರನ ಬಗ್ಗೆ ಪ್ರೀತಿ ಅತಿಯಾದೀತು. ನೀವು ಭರವಸೆ ಕೊಡಲು ಪ್ರಸಿದ್ಧರು ಎಂಬ ಬಿರುದು ಬರದಂತೆ ನೋಡಿಕೊಳ್ಳಿ.

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ