AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ವಾಗ್ವಾದಕ್ಕೆ ಹೋಗಿ‌ ಮನಸು ಹಾಳುಮಾಡಿಕೊಳ್ಳುವುದು ಬೇಡ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 27) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಇಂದಿನ ರಾಶಿಭವಿಷ್ಯ, ಈ ರಾಶಿಯವರು ವಾಗ್ವಾದಕ್ಕೆ ಹೋಗಿ‌ ಮನಸು ಹಾಳುಮಾಡಿಕೊಳ್ಳುವುದು ಬೇಡ
ಇಂದಿನ ರಾಶಿಭವಿಷ್ಯImage Credit source: Getty Images
Rakesh Nayak Manchi
|

Updated on: Jun 27, 2023 | 12:15 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 27 ಮಂಗಳವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಮಂಗಳ, ತಿಥಿ: ನವಮೀ, ನಿತ್ಯನಕ್ಷತ್ರ: ಚಿತ್ರಾ, ಯೋಗ: ಪರಿಘ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 07 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:49 ರಿಂದ 05:26ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 09:21 ರಿಂದ 10:58 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:35 ರಿಂದ 02:12ರ ವರೆಗೆ.

ಮೇಷ: ನೀವು‌ ಇಟ್ಟ ನಂಬಿಕೆಗೆ ಮೋಸವಾಗುವ ಸಾಧ್ಯತೆ ಇದೆ. ಹಣಕಾಸಿನ ಮೌಲ್ಯವನ್ನು ನೀವು ಇಂದು ತಿಳಿದುಕೊಳ್ಳುವಿರಿ. ಇಂದು ನಿಮ್ಮ‌ ಮನಸ್ಸು ಬಹಳ ಡೋಲಾಯಮಾನವಾಗಿ ಇರಲಿದೆ. ನಿಮಗೆ ಆಗದ ವಿಚಾರವನ್ನು ಮತ್ತೆ ಮತ್ತೆ ಸಹೋದ್ಯೋಗಿಗಳು ನೆನಪಿಸುವರು. ಉದ್ಯೋಗದಲ್ಲಿ ಬದಲಾವಣೆಯನ್ನು ನೀವು ಬಯಸುವಿರಿ. ಮನೆಯ ಹೆಚ್ಚಿನ ವಿಚಾರಗಳು ನಿಮಗೆ ಗೊತ್ತಾಗದೇ ಹೋಗಬಹುದು. ನಿಮ್ಮ‌ ಖರ್ಚಿನಿಂದ‌ ಸ್ನೇಹಿತರಿಗೆ ಭೋಜನ ಹಾಕಿಸುವಿರಿ. ಸರ್ಕಾರದಲ್ಲಿ ಆಗಬೇಕಾದ ಕೆಲಸವನ್ನು ಪ್ರಭಾವದ ಮೂಲಕ ಮಾಡಿಸಿಕೊಳ್ಳುವಿರಿ.

ವೃಷಭ: ಇಂದಿನ‌ ನಿಮ್ಮ ಆರಂಭವು ಬಹಳ ಸಂತೋಷದಿಂದ‌ ಇರಲಿದೆ. ಸ್ವಾಭಿಮಾನವನ್ನು ಬಿಟ್ಟು ಯಾವುದನ್ನೂ ಮಾಡಲಾರಿರಿ. ಕೋಪವನ್ನು ಸ್ವಲ್ಪ ಕಡಿಮೆ‌ ಮಾಡಿಕೊಳ್ಳುವುದು ಉತ್ತಮ.‌ ನಿಮ್ಮ‌ ಅಮೂಲ್ಯ ವಸ್ತುಗಳನ್ನು ಜಾಗರೂಕತೆಯಿಂದ‌ ಇಟ್ಟುಕೊಳ್ಳಿ. ಕ್ಷಣಕ್ಷಣದ ಚಿತ್ತಚಾಂಚಲ್ಯಕ್ಕೆ ಧ್ಯಾನವೊಂದೇ ಔಷಧವಾಗಲಿದೆ. ಸಂಗಾತಿಯನ್ನು ನೀವು ಕೆಲವು ವಿಚಾರಗಳಿಗೆ ಬೇಸರಿಸುವಿರಿ. ಅಸಮಯದ ಭೋಜನದಿಂದ‌ ನಿಮಗೆ ಆರೋಗ್ಯವು ಹಾಳಾಗಬಹುದು. ನೀವು ಯತ್ನಿಸಿದ ಕೆಲಸವು ಪೂರ್ಣಫಲಪ್ರದವಾಗದು. ಸಾಗಿದ ದಾರಿಯನ್ನು ನೀವು ನೆನಪಿಸಿಕೊಳ್ಳುವಿರಿ.

ಮಿಥುನ: ನಿಮ್ಮ ಆಸ್ತಿಯ ಬಗ್ಗೆ ನಿಮಗೇ ಸಂಪೂರ್ಣವಾದ ಮಾಹಿತಿ ಕೊರತೆಯಾಗುವುದು.‌ ಮನಸ್ಸಿನಲ್ಲಿ ಇರುವುದನ್ನು ಯಾರ ಜೊತೆಗಾದರೂ ಹೇಳಿಕೊಳ್ಳುವಿರಿ. ನಿಮ್ಮ‌ ನೋವಿಗೆ‌ ಸ್ಪಂದಿಸಲು ಯಾರಾದರೂ ಸಿಕ್ಕಾರು. ನಿಮ್ಮ‌ ಒಳ್ಳೆಯ ಚಿಂತನೆಗೆ ಪ್ರಶಂಸೆ ಸಿಗಲಿದೆ. ಎಷ್ಟೋ ವಿಚಾರಗಳನ್ನು ನೀವು ನಿಮ್ಮಲ್ಲಿಯೇ ಇಟ್ಟಕೊಂಡು ಅನುಭವಿಸುವಿರಿ. ನಿಮಗೆ ಇಷ್ಟವಾದುದನ್ನು ನೀವು ಪಡೆಯುವಿರಿ. ಅಧಿಕ‌ಖರ್ಚನ್ನು ನಿಮಗೆ ತಡೆಯುವುದು ಕಷ್ಟವಾದೀತು. ಮಕ್ಕಳಿಂದ‌ ಸಂಕಟವು ಕಡಿಮೆ‌ ಆದೀತು.‌ ಸಂಜೆಯ ವಿಹಾರವು ನಿಮಗೆ ಹಿತವೆನಿಸುವುದು.

ಕಟಕ: ಇಂದು ನಿಮಗೆ ಸ್ಥಿರವಾದ ಬುದ್ಧಿಯನ್ನು ಇಟ್ಟುಕೊಳ್ಳಲು ಕಷ್ಡವಾದೀತು.‌ ಏನೇನೋ ಯೋಚನೆಗಳು ಬರಬಹುದು. ಇಂದಿನ‌ ಕೆಲಸವನ್ನು ಸರಿಯಾಗಿ ಮಾಡಲು ಕಷ್ಟಪಡುವಿರಿ. ತಾಯಿಯ ಮಾತನ್ನೂ ನೀವು ಕೇಳದೇ ನಿಮ್ಮದೇ ದಾರಿಯಲ್ಲಿ ಸಾಗುವಿರಿ. ಸಾಹಸ ಕೆಲಸಕ್ಕೆ ಹೋಗುವ ಸಾಧ್ಯತೆ ಇದೆ. ದೇಹಕ್ಕೆ ಪೆಟ್ಟುಮಾಡಿಕೊಳ್ಳಲು ನೀವು ಹೋಗುವುದು ಬೇಡ. ನಿಮಗೆ ಸಿಗಬೇಕಾದ ಹಣವು ವಿಳಂಬವಾಗಿದ್ದಕ್ಕೆ ಬೇಸರಗೊಳ್ಳಬಹುದು. ನಿಮ್ಮ‌ ನೈಪುಣ್ಯತೆಯನ್ನು ಕೆಲಸದಲ್ಲಿ ತೋರಿಸಿ. ವಾಗ್ವಾದಕ್ಕೆ ಹೋಗಿ‌ ಮನಸ್ಸನ್ನು ಹಾಳುಮಾಡಿಕೊಳ್ಳುವುದು ಬೇಡ.

-ಲೋಹಿತಶರ್ಮಾ ಇಡುವಾಣಿ