AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರು ಇಂದು ತಾಳ್ಮೆಯಿಂದ ವ್ಯವಹಾರ ಮಾಡಿ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಮೇ​ 29) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಈ ರಾಶಿಯವರು ಇಂದು ತಾಳ್ಮೆಯಿಂದ ವ್ಯವಹಾರ ಮಾಡಿ
ಜ್ಯೋತಿಷ್ಯ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 29, 2023 | 7:56 AM

Share

ಶುಭೋದಯ ಓದುಗರೇ. ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಮೇ​ 29) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ಮೇಷ: ನಿಮಗೆ ಇಂದು ಪರಿಚಿತ ವ್ಯಕ್ತಿಯ ಸಹಾಯದಿಂದ ಸಾಲವನ್ನು ಮಾಡುವಿರಿ. ಇಂದು ನೀವು ಸರ್ಕಾರದಿಂದ ಗೌರವಿಸಲ್ಪಡುವ ಸಾಧ್ಯತೆಯಿದೆ. ಹಳೆಯ ಸ್ನೇಹಿತರು ಬೆಂಬಲಕ್ಕೆ ನಿಲ್ಲುತ್ತಾರೆ ಮತ್ತು ಸ್ನೇಹಿತರು ಸಹ ಹೆಚ್ಚಾಗುತ್ತಾರೆ. ಇಂದು ನಿಮ್ಮ ಹೆಂಡತಿಯಿಂದ ನೀವು ಉತ್ತಮ ಬೆಂಬಲವನ್ನು ಪಡೆಯಬಹುದು. ತಂದೆಯು ನಿಮಗೆ ಏನನ್ನಾದರೂ ಮಾಡಬೇಕು ಎಂಬ ಆಸೆಯನ್ನು ಇಟ್ಟುಕೊಂಡಿರುವರು. ಸ್ವೇಚ್ಛೆಯ ನಿಮ್ಮ ವರ್ತನೆಗಳು ಕೆಲವರಿಗೆ ಅಸಮಾಧಾನವನ್ನು ಕೊಡಬಹುದು. ತಾಳ್ಮೆಯಿಂದ ಇಂದಿನ ವ್ಯವಹಾರವನ್ನು ಮಾಡಿ.

ವೃಷಭ: ಇಂದು ನೀವು ಬಹಳ ಕಾರ್ಯದಲ್ಲಿ ಮಗ್ನರಾಗುವಿರಿ. ಯಾರನ್ನಾದರೂ ಅಳೆಯುವಾಗ ನಿಮಗೆ ಸರಿಯಾದ ನಿರ್ಧಾರವನ್ನು ಮಾಡಲು ಕಷ್ಟಮವಾದೀತು. ಪ್ರಯೋಜನವಿಲ್ಲದ ಕೆಲಸದಿಂದ ನೀವು ದೂರವಾಗುವಿರಿ. ನಿಮ್ಮ ಪ್ರೀತಿಯು ಹಿತವಾದ ಅನುಭವವನ್ನು ಕೊಡುವುದು. ನಿಮ್ಮ ಹೇಳಿಕೆಗೆ ಸ್ಪಷ್ಟನೆಯನ್ನು ಕೊಡುವಿರಿ. ಕಳೆದುಕೊಂಡ ವಸ್ತುವು ನಿಮಗೆ ಸಿಗಲಿದೆ. ಆಕಸ್ಮಿಕವಾಗಿ ನೀವು ಮೋಜಿನ ಬಲೆಗೆ ಸಿಲುಕಿಕೊಳ್ಳುವ ಸಂಭವವಿದೆ. ನಿಮ್ಮ ಸಂತೋಷವನ್ನು ಕಸಿದುಕೊಳ್ಳುವ ಮಾತುಗಳನ್ನು ನಿಮ್ಮವರು ಆಡಬಹುದು. ಕೇಳಿಸಿಕೊಂಡಿಲ್ಲ ಎಂಬ ಮನೋಭಾವವಿರಲಿ.

ಮಿಥುನ: ಇಂದು ನೀವು ಮಾಡಿದ ಖರ್ಚು ಸದುಪಯೋಗವಾಗಿದೆ ಎಂದುಕೊಳ್ಳುವುದು ಬೇಡ. ಅಗತ್ಯ ಖರ್ಚನ್ನು ಪ್ರಯತ್ನಪೂರ್ವಕವಾಗಿ ನಿಲ್ಲಿಬೇಕು. ದೈಹಿಕ ಖಾಯಿಲೆಗಳು ಹೆಚ್ಚಾಗುವ ಸಾಧ್ಯತೆ ಇದೆ‌.‌ ನಿಮ್ಮ ಮೇಲಿಟ್ಟ ನಂಬುಗೆಯನ್ನು ಹುಸಿಯಾಗಿಸಬೇಡಿ. ನಿಮ್ಮ ಸಾಮಾಜಿಕ ಚಟುವಟಿಕೆಗಳಿಗೆ ಅಡ್ಡಗಾಲು ಹಾಕಬಹುದು. ಸಂಗಾತಿಯನ್ನು ಅತಿಯಾಗಿ ಇಷ್ಟಪಡುವಿರಿ. ಅತಿಯಾದ ಕೆಲಸದ ಕಾರಣ ನಿಮಗಾದ ಮಾನಸಿಕ‌ ಒತ್ತಡಕ್ಕೆ ವಿಶ್ರಾಂತಿ ಅವಶ್ಯಕವಾದೀತು. ಸರ್ಕಾರಿ ಕೆಲಸದಲ್ಲಿ ಹಿನ್ನಡೆಯಾಗಲಿದೆ. ನಿಮ್ಮದಾಗಿದ್ದ ವಸ್ತುವನ್ನು ಜೋಪಾನ ಮಾಡಿಕೊಳ್ಳಿ.

ಕಟಕ: ಇಂದು ನೀವು ಮಕ್ಕಳ ವಿಚಾರವಾಗಿ ಮಾಡಿದ ಶ್ರಮವು ಇಂದು ಫಲಿಸುವುದು. ಮಕ್ಕಳಿಂದ ನಿಮಗೆ ಅವಶ್ಯಕವಾದ ಸಹಕಾರವು ದೊರೆಯುವುದು. ನೀವು ನಿಮ್ಮ ಭೋಗಕ್ಕೆ ಹೆಚ್ಚು ಹಣವನ್ನು ಖರ್ಚು ಮಾಡುವವರಿದ್ದೀರಿ‌. ನಿಮಗೆ ಆಗದವರು ನಿಮ್ಮನ್ನು ನೋಡಿ ಅಸೂಯೆ ಪಡಬಹುದು. ನಿಮ್ಮ ವಿದ್ಯಾಭ್ಯಾಸದ ಅವಧಿ ಮುಗಿದು ನೀವು ಬಹಳ ಸಂತೋಷದಲ್ಲಿ ಇರುವಿರಿ. ಮುಂದಿನ ಉದ್ಯೋಗದ ಕನಸೂ ನಿಮ್ಮ ಮುಂದಿದೆ. ಮನೆಯಲ್ಲಿ ನಿಮ್ಮ ವಿವಾಹಕ್ಕೆ ಬೇಕಾದ ತಯಾರಿಯನ್ನು ಮಾಡುತ್ತಿರುವರು. ಬಂಧುಗಳೂ ನಿಮ್ಮನ್ನು ಪ್ರಶಂಸೆ ಮಾಡುವರು‌. ಊರಿನಲ್ಲಿ ನಿಮಗೆ ಹೆಚ್ಚು ಗೌರವ ಸಿಗಲಿದೆ.

ಲೋಹಿತಶರ್ಮಾ – 8762924271

Published On - 7:54 am, Mon, 29 May 23

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!