Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 2) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರ

Updated on: Jun 02, 2023 | 12:10 AM

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್ 2) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ತ್ರಯೋದಶೀ, ನಿತ್ಯನಕ್ಷತ್ರ: ವಿಶಾಖಾ, ಯೋಗ: ಕಂಡ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 56 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 10:54 ರಿಂದ 12:30ರ ವರೆಗೆ, ಯಮಘಂಡ ಕಾಲ 03:44 ರಿಂದ 05:20ರ ವರೆಗೆ, ಗುಳಿಕ ಕಾಲ 07:20 ರಿಂದ 09:17ರ ವರೆಗೆ.

ಮೇಷ: ಅಲ್ಪ ಹಣವನ್ನೂ ನೀವು ಕೂಡಿಡುವ ಆಲೋಚನೆ ಬರಲಿದೆ. ಖರ್ಚುಗಳನ್ನು ಕಡಿಮೆ‌ ಮಾಡಲು ನೀವು ಸೋಲುವಿರಿ. ಕುಟುಂಬದ ಕುರಿತು ನಿಮ್ಮ ಅಭಿಪ್ರಾಯವು ಸರಿಯಾಗಿ ಇರಲಿ. ತಾಯಿಯು ನಿಮ್ಮ ಪರವಾಗಿ ಇರುವರು. ವಾಹನವನ್ನು ಖರೀದಿಸುವ ಯೋಚನೆ ಬರಬಹುದು. ಸಾಲ‌ ಮಾಡಲು ಸಲಹೆಯನ್ನೂ ಕೊಡಬಹುದು.‌ ನಿಮ್ಮ ಯೋಗ್ಯತೆಯನ್ನು ನೀವೇ ಅರಿತು ವ್ಯವಹರಿಸುವುದು ಸೂಕ್ತ. ನಿಮ್ನ ಯಶಸ್ಸಿನ ಮೇಲೆ ನಿಮಗೆ ನಂಬಿಕೆ ಇಲ್ಲವಾಗುವುದು. ಹೆಚ್ಚು ಚಿಂತಿಸಿದಷ್ಟು ನೀವು ಕೆಲಸದಲ್ಲಿ ಮಗ್ನರಾಗುವುದಿಲ್ಲ. ವಿವಾಹಕ್ಕೆ ನಿಮಗೆ ಸಾಮಾನ್ಯ ಸಂಬಂಧವು ದೊರೆಯಲಿದೆ.

ವೃಷಭ: ಅಸಾಮಾನ್ಯ ವಿಚಾರವನ್ನು ನೀವು ಸರಳವಾಗಿಸುವ ನೈಪುಣ್ಯತೆಯನ್ನು ಹೊಂದಿರುವಿರಿ. ಆಲಸ್ಯದಿಂದ ನಿಮಗೆ ಹೊರಬರಲು ಸಾಧ್ಯವಾಗದೇ ಹೋಗಬಹುದು. ಯಾರ ಜೊತೆಯೂ ನೀವು ಕಲಹವನ್ನು ಮಾಡಿಕೊಳ್ಳುವುದು ಬೇಡ. ಅನಂತರ ನಿಮ್ಮ ಮನಸ್ಸನು ಕ್ಷೋಭೆಗೊಳ್ಳಬಹುದು. ಸಂಗಾತಿಯ ಜೊತೆ ದೂರ ಪ್ರಯಾಣವನ್ನು ಮಾಡಿ ಬನ್ನಿ. ನಿಮ್ಮ ಅನನುಕೂಲತೆಯನ್ನು ಸ್ನೇಹಿತರಿಗೆ ಹೇಳಿ ಸಮಾಧಾನವನ್ನು ತಂದುಕೊಳ್ಳುವಿರಿ. ಹಿರಿಯರ‌ ಮಾತನನ್ನು ಅನಿಸರಿಸಲು ನೀವು ಹಿಂದೇಟು ಹಾಕಬಹುದು. ಅಪರಿಚಿತರು ನಿಮ್ಮನ್ನು ಭೇಟಿಯಾದಾರು.

ಮಿಥುನ: ಉದ್ಯೋಗವು ಸಾಕೆನಿಸುವ ಸ್ಥಿತಿಯು ಬರಬಹುದು.‌ ಅತಿಯಾದ ಒತ್ತಡದಿಂದ ಹೊರಬರಲು ಪ್ರಯತ್ನಿಸಿ.‌ ಇದು ಆರೋಗ್ಯದ ಮೇಲೆ ಹೆಚ್ಚು ಪರಿಣಾಮವನ್ನು ಬೀರಬಹುದು. ರತ್ನ ಮುಂತಾದ ವ್ಯಾಪರಿಗಳಿಗೆ ಅಧಿಕ ಲಾಭವು ಆಗಬಹುದು. ಏಕಾಗ್ರತೆಯ ಸ್ವಲ್ಪ ಓದೂ ನಿಮಗೆ ಹೆಚ್ಚು ಫಲವನ್ನು ಕೊಟ್ಟೀತು. ಅನಗತ್ಯ ತಿರುಗಾಟವು ನಿಮಗೆ ಬೇಸರವನ್ನು ಕೊಟ್ಟೀತು. ಸಂಗಾತಿಯನ್ನು ನೀವು ದೂರ ಮಾಡಿಕೊಳ್ಳುವ ಸಾಧ್ಯತೆ ಇದೆ. ಆದಾಯದ ಒಂದಂಶವನ್ನು ಉಳಿತಾಯ ಮಾಡಲು ಬಳಸಿಕೊಳ್ಳುವಿರಿ. ನಿಮ್ಮವರು ನಿಮಗೆ ಸಹಾಯ ಮಾಡುತ್ತಾರೆ ಎಂಬ ನಿರೀಕ್ಷೆಯಲ್ಲಿ ಇರುವಿರಿ.

ಕಟಕ: ನಿಮ್ಮ ವಿರುದ್ಧ ತಂತ್ರಗಾರಿಕೆಯನ್ನು ಮಾಡಿ ಉದ್ಯೋಗದಿಂದ ಕೈಬಿಡುವಂತೆ ಮಾಡುವರು. ಸಿಕ್ಕುದ್ದನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಒಳ್ಳೆಯದು. ನಿಮ್ಮ ಕೈಮೀರಿದ ವಿಚಾರಕ್ಕೆ ಹೆಚ್ಚಿನ ಒತ್ತು ಬೇಡ. ವಿದ್ಯೆಯನ್ನು ಹೇಳಿಕೊಟ್ಟ ಗುರುವಿನ ಭೇಟಿಯಾದೀತು. ನೀವಿಂದು ನಾಜೂಕಾದ ಮಾತಿನಿಂದ ಕೆಲಸವನ್ನು ಮಾಡಿಕೊಳ್ಳುವಿರಿ. ಆಡಂಬರವನ್ನು ನೀವು ಹೆಚ್ಚು ಇಷ್ಟಪಡುವಿರಿ. ಭೋಗವಸ್ತುಗಳನ್ನು ಅಧಿಕವಾಗಿ ಖರೀದಿಸಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ನಿಮಗೆ ಚಿಂತೆಯಾಗಬಹುದು. ನೀವೇ ಅವರಿಗೆ ಸಮಯವನ್ನು ಕೊಟ್ಟಿ ಕಲಿಸಬೇಕಾಗುವುದು.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us