AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಮಾಡಲು ಹೊರಟ ಕೆಲಸವು ಅರ್ಧಕ್ಕೆ ನಿಲ್ಲಬಹುದು ಎಚ್ಚರ!

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 30) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಮಾಡಲು ಹೊರಟ ಕೆಲಸವು ಅರ್ಧಕ್ಕೆ ನಿಲ್ಲಬಹುದು ಎಚ್ಚರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 30, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜೂನ್ 30 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಆರ್ದ್ರಾ, ಮಾಸ: ಆಷಾಢ, ಪಕ್ಷ: ಶುಕ್ಲ, ವಾರ: ಶುಕ್ರ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಅನುರಾಧಾ, ಯೋಗ: ಸಾಧ್ಯ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 08 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:59 ರಿಂದ 12:36ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:50 ರಿಂದ 05:27ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:42 ರಿಂದ 09:22ರ ವರೆಗೆ.

ಮೇಷ: ಸಮಯಕ್ಕೆ ಸಿಕ್ಕ ಸ್ಫೂರ್ತಿಯು ನಿಮ್ಮ‌ ಇಂದಿನ ಕೆಲಸವನ್ನು ಚೆನ್ನಾಗಿಸುವುದು. ಯಾರದೋ ಮಾತಿನ ಆಧಾರದ ಮೇಲೆ ನಿಮಗೆ ನಂಬಿಕೆ ಬಾರದು. ಮಾಡಲು ಹೊರಟ ಕೆಲಸವು ಅರ್ಧಕ್ಕೆ ನಿಲ್ಲಬಹುದು. ನೀವು ಇಂದು ನಿಮ್ಮ ಕೆಲಸವನ್ನು ಸುಲಭ ಮಾಡಿಕೊಳ್ಳಲು ಬಯಸುವಿರಿ. ಮುಖ್ಯವಾದ ಕೆಲಸದ ನಡುವೆ ನಿಮ್ಮ ವೈಯಕ್ತಿಕ ಕೆಲಸವು ಮರೆಯಾಗಬಹುದು. ಮಾತನ್ನು ಹದವರಿತು ಮಾತನಾಡಿ. ಹೆಚ್ಚು ಮಾತನಾಡಿ ಇನ್ನೊಬ್ಬರಿಗೆ ನೋವನ್ನು ಕೊಡುವುದು ಬೇಡ. ಸಾಮಾಜಿಕವಾಗಿ ಗುರುತಿಸಿಕೊಳ್ಳಲು ಬಯಸುವಿರಿ. ಮನೋಗತವನ್ನು ಹೇಳಿಕೊಳ್ಳಿ.

ವೃಷಭ: ಕಾರಣಾಂತರಗಳಿಂದ ನಿಮ್ಮ ಉದ್ಯೋಗದಲ್ಲಿ ತೊಂದರೆಯಾಗಲಿದೆ. ನಿಮ್ಮ ಮೇಲೆ‌ ಕೆಟ್ಟ ದೃಷ್ಟಿಯು ಬೀಳುವ ಸಾಧ್ಯತೆ ಇದೆ. ಮನೆಯ ಕಾರ್ಯದಲ್ಲಿ ನೀವು ಭಾಗಿಯಾಗುವಿರಿ. ನಿಮ್ಮ ಮಾತನ್ನು ಕೇಳದೇ ಇರುವುದು ನಿಮಗೆ ಬೇಸರವಾಗುವುದು. ಆಸ್ತಿಯ ವಿಚಾರವಾಗಿ ಮನೆಯಲ್ಲಿ ಕಲಹವಾಗಬಹುದು. ಆಲಸ್ಯದಿಂದ ಚಟುವಟಿಕೆಯತ್ತ ಮುಖ ಮಾಡುವಿರಿ. ಆಹಾರದ ಅಭಾವವು ನಿಮಗೆ ಆಗಲಿದೆ. ಮನಸ್ಸಿನ‌ ಏಕಾಗ್ರತೆ ಕೆಡಬಹುದು. ಸರಳವಾದುದನ್ನು ಕ್ಲಿಷ್ಟ ಮಾಡಿಕೊಳ್ಳುವಿರಿ.

ಮಿಥುನ: ಒತ್ತಡವನ್ನು ಪರಿಹರಿಸಿಕೊಳ್ಳಲು ದೂರದ ಊರಿಗೆ ಹೋಗುವಿರಿ. ವಿವಾಹಕ್ಕೆ ಬೇಕಾದ ತಯಾರಿಯಲ್ಲಿ ನೀವಿರುವಿರಿ. ಸಂಗಾತಿಯ‌ ಜೊತೆ ಪ್ರಯಾಣವನ್ನು ಇಚ್ಛಿಸುವಿರಿ. ಸರ್ಕಾರಿ ಕೆಲಸಕ್ಕಾಗಿ ನೀವು ಅರ್ಜಿಯನ್ನು ಸಲ್ಲಿಸುವಿರಿ. ಪ್ರಭಾವಿ ವ್ಯಕ್ತಿಗಳ ಸಹಾಯದಿಂದ ಕೆಲಸವು ಸಿಗಬಹುದು. ಭೂಮಿಯ ವ್ಯವಹಾರದಿಂದ ಸ್ವಲ್ಪ ಲಾಭವನ್ನು ಗಳಿಸುವಿರಿ. ನಿಮ್ಮನ್ನು ಉನ್ನತ ಸ್ಥಾನಕ್ಕೆ ಏರಿಸುವ ಸಾಧ್ಯತೆ ಇದೆ. ಹಳೆಯ ದ್ವೇಷವನ್ನು ಮುಂದುವರಿಸುವುದು ಬೇಡ. ಸಾಮರಸ್ಯದಿಂದ ಬದುಕುವುದನ್ನು ಇಷ್ಟಪರುವಿರಿ. ತಂದೆಯ ಪ್ರೀತಿ ಸಿಗಲಿದೆ.

ಕಟಕ: ಇಂದು ನಿಮಗೆ ಶ್ರೇಷ್ಠವ್ಯಕ್ತಿಗಳ ಸಹವಾಸ ಸಿಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಇಂದು ಬಂಧುಗಳು ನಿಮ್ಮ ಮನೆಯಲ್ಲಿ‌ ಇರುವರು. ದುರಭ್ಯಾಸದಿಂದ ದೂರವಿರುವುದು ಉತ್ತಮ. ನಿಮ್ಮ ಚಟುವಟಿಕೆಗಳನ್ನು ಬೇರೆಯವರು ಗಮನಿಸುವರು. ಉದ್ಯೋಗವನ್ನು ಬದಲಾಯಿಸಲು ಆಲೋಚಿಸುವಿರಿ. ಬಿಡುವಿನ ಸಮಯವನ್ನು ಸದುಪಯೋಗ ಮಾಡಿಕೊಳ್ಳುವುದು ಉತ್ತಮ. ಚಂಚಲವಾದ ಮನಸ್ಸನ್ನು ಹಂತಹಂತವಾಗಿ ಪಳಗಿಸಿ. ನಿಮ್ಮ ವಿದ್ಯೆಯನ್ನು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಬಂಧುಗಳಿಂದ ಯಥೋಚಿತ ಸತ್ಕಾರವು ದೊರೆಯುವುದು. ಕುಲದೇವತಾರಾಧನಯಿಂದ ಅನುಕೂಲವು ಆಗಬಹುದು.

Follow Us
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ