AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಏಪ್ರಿಲ್​ 07) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಇಂದಿನ ರಾಶಿ ಭವಿಷ್ಯImage Credit source: FILE PHOTO
Rakesh Nayak Manchi
|

Updated on: Apr 07, 2023 | 5:16 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 7 ಶುಕ್ರವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಚಿತ್ರಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 25 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 43 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:35ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:39 ರಿಂದ 05:12ರ ವರೆಗೆಮ ಗುಳಿಕ ಕಾಲ ಬೆಳಗ್ಗೆ 07:58 ರಿಂದ 09:30ರ ವರೆಗೆ.

ಮೇಷ: ಆರೋಗ್ಯದ ವ್ಯತ್ಯಾಸದಿಂದ ಹಣವು ಬೇಕಾಗಲಿದ್ದು ಸ್ನೇಹಿತರನ್ನು ಕೇಳುವಿರಿ. ನಿಮ್ಮ‌ಅನಿವಾರ್ಯತೆಯನ್ನು ಅರಿತು ನಿಮ್ಮವರು ನಿಮಗೆ ಧನಸಹಾಯವನ್ನು ಮಾಡಲಿದ್ದಾರೆ. ಪ್ರೇಮಿಯ ಜೊತೆ ಸಂತೋಷದಿಂದ ಕಾಲವನ್ನು ಕಳೆಯುವಿರಿ. ಎಂದೋ ಮಾಡಿದ ಧನಸಹಾಯವು ಇಂದು ಧನವಾಗಿಯೇ ಹಿಂದುರುಗಿದೆ ಎಂಬುದು ನಿಮ್ಮ ನಂಬಿಕೆಯಾಗಿರಲಿದೆ. ಧಾರ್ಮಿಕ ವಿಚಾರಕ್ಕೆ ಹಣವನ್ನು ನೀಡಲಿದ್ದೀರಿ. ಸುಬ್ರಹ್ಮಣ್ಯನ ಆರಾಧನೆ ಮಾಡಿ ಸಂತೋಷದಿಂದ ಇರುವಿರಿ.

ವೃಷಭ: ಪ್ರೇಮಕ್ಕೆ ಸಂಬಂಧಿಸಿದ ಹೊಸ ದಾರಿಗಳು ತೆಗೆದುಕೊಳ್ಳುವ ಸಾಧ್ಯತೆ ಇದೆ. ಯಾರನ್ನೂ ನಂಬದ ಸ್ಥಿತಿಯಲ್ಲಿ ನೀವಿರುವಿರಿ. ಅನಿರೀಕ್ಷಿತವಾಗಿ ಬಂದ ಹಣವನ್ನು ರಕ್ಷಿಸಿಡಲು ದಾರಿಯನ್ನು ಹುಡುಕುವಿರಿ. ದೇಹಾಲಸ್ಯದಿಂದ ಹೊರಬಂದು ಸಾಧಿಸುವ ಛಲವಿರಬೇಕಾಗಿಬರಬಹುದು. ಉದ್ವೇಗಕ್ಕೆ ಒಳಗಾಗದೇ ತಾಳ್ಮೆಯಿಂದ ಎಲ್ಲವನ್ನೂ ಪಡೆಯಲು ಪ್ರಯತ್ನಿಸಿ. ಸಂಗೀತವನ್ನು ಕೇಳಬೇಕಾದ ಮನಸ್ಸು ಇರಲಿದ್ದು, ಒಂಟಿಯಾಗಿ ಇರುವಿರಿ. ಸಂಪತ್ತನ್ನು ಯಾರಿಗೂ ಕೊಡಲು ಹೋಗಬೇಡಿ.

ಮಿಥುನ: ವಿದೇಶಕ್ಕೆ ಹೋಗಲು ಹುನ್ನಾರ ಮಾಡಿಕೊಂಡಿದ್ದೀರಿ. ನಿಮಗೆ ಅಲ್ಲಿನ ವಾತಾವರಣವು ಸರಿಯಾಗುವುದೇ ಎಂಬ ಮಾಹಿತಿಯನ್ನು ಒಡೆದುಕೊಳ್ಳಿ. ಮನೆಯಲ್ಲಿ ಇರುವ ವಿದ್ಯುಪಕರಣದಿಂದ ನಷ್ಟವಾಗಬಹುದು. ತಮಾಷೆಗೆ ಶುರುವಾದ ಮಾತು ಬಂಧುಗಳ ನಡುವೆ ಕಲಹವನ್ನು ಎಬ್ಬಿಸಬಹುದು‌. ದೇವಾಲಯದ ಆವರಣದಲ್ಲಿ ಅಥವಾ ಪವಿತ್ರ ಸ್ಥಳಗಳಲ್ಲಿ ಹೆಚ್ಚು ಕಾಲವನ್ನು ಕಳೆಯುವಿರಿ. ಅಧಿಕಶ್ರಮವು ಇಂದು ವ್ಯರ್ಥವಾಗುವುದು. ಪರೀಕ್ಷೆಯ ಕಾಲಕ್ಕೆ ನೀವು ಸಿದ್ಧರಾಗಬೇಕಿದೆ.

ಕಟಕ: ಎಲ್ಲವನ್ನೂ ಕ್ರಮಬದ್ಧಗೊಳಿಸುವ ನಿಮ್ಮ ಆಲೋಚನೆ ಸರಿಯೇ. ಆದರೆ ಅದನ್ನು ಕ್ರಮಬದ್ಧಬಾಗಿ ಹೇಳುವುದೂ ನಿಮ್ಮ ಕೈಯಲ್ಲಿದೆ. ಎಲ್ಲರನ್ನೂ ವಿರೋಧ ಕಟ್ಟಿಕೊಳ್ಳುವ ಕೆಲಸಕ್ಕೆ ಹೋಗುವಿರಿ. ಇಂದು ಜಗತ್ತಿನ ವೈಶಾಲ್ಯ ಅರ್ಥವಾಗಬಹುದು. ಕಾರ್ಯಗಳು ಸಫಲವಾಯಿತೆಂಬ ಸಂತೋಷವಿಂದು ಇರಲಿದೆ. ಹಿರಿಯರನ್ನು ಅಲಕ್ಷ್ಯಿಸದೇ ಪ್ರೀತ್ಯಾದರಗಳಿಂದ ನೋಡಿಕೊಳ್ಳಿ. ನಿಮ್ಮ ಉದ್ದೇಶವನ್ನು ತಪ್ಪಿಸುವ ಸಲಹೆಗಳು ಬರಬಹುದು. ದೇವಿಯ ಸ್ತೋತ್ರವನ್ನು ಮಾಡಿ.

-ಲೋಹಿತಶರ್ಮಾ ಇಡುವಾಣಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ