AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ

2023 ಏಪ್ರಿಲ್​ 9 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Horoscope Today: ಮೇಷ, ವೃಷಭ, ಮಿಥುನ, ಕಟಕ ರಾಶಿಗಳ ಇಂದಿನ ಭವಿಷ್ಯ ಹೀಗಿದೆ
ಪ್ರಾತಿನಿಧಿಕ ಚಿತ್ರImage Credit source: zeenews.india.com
ಗಂಗಾಧರ​ ಬ. ಸಾಬೋಜಿ
|

Updated on: Apr 09, 2023 | 5:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಏಪ್ರಿಲ್​ 9 ಭಾನುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ಮೀನ ಮಾಸ, ಮಹಾನಕ್ಷತ್ರ : ಅಶ್ವಿನೀ, ಮಾಸ : ಚೈತ್ರ, ಪಕ್ಷ : ಕೃಷ್ಣ, ವಾರ : ಭಾನು, ತಿಥಿ : ತೃತೀಯಾ, ನಿತ್ಯನಕ್ಷತ್ರ : ವಿಶಾಖಾ, ಯೋಗ : ಸಿದ್ಧಿ, ಕರಣ : ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 44 ನಿಮಿಷಕ್ಕೆ, ರಾಹು ಕಾಲ 05:12 ರಿಂದ 06:44ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:34 ರಿಂದ 02:07ರ ವರೆಗೆಮ ಗುಳಿಕ ಕಾಲ 03:39 ರಿಂದ 05:12ರ ವರೆಗೆ.

ಮೇಷ: ಅಪ್ರಬುದ್ಧರ ಎದುರು ನಿಮ್ಮ ಮನೆಯ ವ್ಯವಹಾರಗಳನ್ನು ಹೇಳಬೇಡಿ. ಅದು ಮತ್ತೇನೋ ಆಗಿ ನಿಮ್ಮ ಮರ್ಯಾದೆಗೆ ಕುತ್ತು ಬರಬಹುದು. ಸ್ವಲ್ಪ ದೇಹಕ್ಕೂ ಮನಸ್ಸಿಗೂ ವಿಶ್ರಾಂತಿಯನ್ನು ಕೊಟ್ಟರೆ ಒಳ್ಳೆಯದು. ಇದರಿಂದ ಅತ್ಯಂತ ಮಹತ್ತ್ವದ ಯೋಜನೆಯು ಪ್ರಾರಂಭವಾಗುತ್ತದೆ. ಸಂಬಂಧಗಳನ್ನು ಸರಿಯಾಗಿ ಇಟ್ಟುಕೊಳ್ಳಲು ಪ್ರಯತ್ನಿಸಿ‌. ಇಂದು ನೀವು ನಿಮ್ಮ ತಾಯಿಯೊಂದಿಗೆ ಸಣ್ಣ ಕಾರಣಕ್ಕೆ ಜಗಳವಾಡಬಹುದು. ಈ ದಿನ ನಿಮ್ಮ ಆರ್ಥಿಕ ಸ್ಥಿತಿಯನ್ನು ನೋಡಿಕೊಳ್ಳಿ ಮತ್ತುಅಲ ಅಪರಿಚಿತರ ಜೊತೆ ಹಣದ ವ್ಯವಹಾರ ಮಾಡಬೇಡಿ.

ವೃಷಭ: ತಂದೆಗೆ ಸಮಾನವಾದವರ ಬಳಿ ಹಿತೋಪದೇಶವನ್ನು ಕೇಳುವಿರಿ. ನೀವು ಉತ್ತಮ ವ್ಯಕ್ತಿಯನ್ನು ಭೇಟಿಯಾಗಿ, ಅವರ ಜೊತ ಕಾಲವನ್ನು ಕಳೆಯುವಿರಿ. ನಿಮ್ಮ ಕಠಿಣ ಪರಿಶ್ರಮದಿಂದ ನಿಮ್ಮ ಕಾರ್ಯವು ಸಾಧ್ಯವಾಗುವುದು. ನಿಮ್ಮ ಯಶಸ್ಸನ್ನು ಸಹಿಸಲಾಗದೇ ನೊಂದುಕೊಳ್ಳುವವರಿದ್ದಾರೆ. ದಾಂಪತ್ಯಜೀವನದಲ್ಲಿ ವಿವಾದವಾಗುವ ಸಾಧ್ಯತೆ ಇದೆ. ಆರಂಭದಲ್ಲಿಯೇ ಅದನ್ನು ಚಿವುಟಿ ಹಾಕಿ. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯ ಮತ್ತು ಹಣ ಎರಡೂ ನಷ್ಟ ಮಾಡಿಕೊಳ್ಳಬೇಕಾಗಬಹುದು. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ. ತೊಂದರೆಯಾಗುವುದು ಗೊತ್ತಿದ್ದರೂ ಬೇಕೆಂದೇ ಸಿಕ್ಕಿಹಾಕಿಕೊಳ್ಳುವಿರಿ.

ಮಿಥುನ: ಸಂಬಂಧಗಳು ಸಡಿಲವಾಗದಂತೆ ಸಂಭಾಳಿಸಿಕೊಂಡು ಹೋಗಿ. ಪ್ರಯತ್ನಪೂರ್ವಕವಾಗಿ ಮಾಡಿದ ಕೆಲಸವು ವ್ಯರ್ಥವಾಗಬಹುದು. ಬೇಸರಿಸದೇ ಅದನ್ನು ಆಸ್ವಾದಿಸಿ. ಖುಷಿಯಿಂದ ಇರಬಹುದು. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವರು. ಅವರನ್ನು ಕಂಡು ನಿಮಗೆ ಸಂತೋಷವಾಗಲಿದೆ. ಇಂದು ನೆರೆ ಹೊರೆಯವರ ಜೊತೆ ಭಿನ್ನಾಭಿಪ್ರಾಯಗಳನ್ನು ಬೆಳೆಸಿಕೊಳ್ಳಬೇಡಿ. ನಿಮ್ಮ ಇಚ್ಛೆಗೆ ಪೂರಕವಾಗಿಲ್ಲವೆಂದು ಕೋಪಗೊಳ್ಳುವುದು ಬೇಡ. ನಿಮ್ಮ ಕೆಲಸವು ಅನೇಕರಿಗೆ ಇಷ್ಟವಾಗಲಿದೆ.

ಕರ್ಕ: ನಿಮ್ಮ ವೃತ್ತಿಯ ಬಗ್ಗೆ ನಿಮಗೆ ಕೀಳರಿಮೆ ಬರಬಹುದು. ವಿನಾಕಾರಣ ಯಾರ ಮೇಲೂ ಸಿಟ್ಟಾಗಬೇಡಿ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನಿಮ್ಮ ಆಸಕ್ತಿಯು ಹೆಚ್ಚಾಗುತ್ತದೆ. ನೀವು ದೊಡ್ಡ ವ್ಯಕ್ತಿಗಳ ಭೇಟಿಯಾಗಲಿದೆ. ಒಟ್ಟಿಗೆ ಬದುಕುವ ಆನಂದವನ್ನು ಅನುಭವಿಸುವಿರಿ. ಕಣ್ಣಿನ ಸಮಸ್ಯೆಗಳು ಉಂಟಾಗಬಹುದು. ಅವಿವಾಹಿತರು ವಿವಾಹಕ್ಕೆ ಸಂಬಂಧಿಸಿದ ಶುಭ ಸುದ್ದಿಗಳನ್ನು ಪಡೆಯುವಿರಿ. ಸುಮ್ಮನಿರುವ ಶತ್ರುಗಳನ್ನು ತಟ್ಟಿ ಎಬ್ಬಿಸಬೇಡಿ. ನಿಮ್ಮ ಕಾರ್ಯವನ್ನು ಮೊದಲು ಪೂರ್ತಿ ಮಾಡಿಕೊಳ್ಳಿ. ವಿದೇಶಕ್ಕೆ ಬೇಕಾದ ತಯಾರಿಗಳನ್ನು ಮಾಡುವಿರಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ