AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashi Bhavishya: ಈ ರಾಶಿಯವರ ಪ್ರಾಮಾಣಿಕತೆಯೇ ಅವರಿಗೆ ಶ್ರೀರಕ್ಷೆ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜೂನ್ 9) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Rashi Bhavishya: ಈ ರಾಶಿಯವರ ಪ್ರಾಮಾಣಿಕತೆಯೇ ಅವರಿಗೆ ಶ್ರೀರಕ್ಷೆ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Jun 09, 2023 | 12:10 AM

Share

ಶುಭೋದಯ ಓದುಗರೇ ಪ್ರತಿಯೊಬ್ಬರ ಜೀವನದಲ್ಲಿ ರಾಶಿ ಭವಿಷ್ಯ ವಿಭಿನ್ನವಾಗಿರುತ್ತದೆ. ಹಾಗಾಗಿ ಕೆಲವರು ಬೆಳಗ್ಗೆ ಎದ್ದ ಕೂಡಲೇ ಇಂದಿನ ತಮ್ಮ ಭವಿಷ್ಯ (Daily horoscope) ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯ ಜೊತೆಗೆ ನಿತ್ಯಪಂಚಾಂಗ ನೋಡುತ್ತಾರೆ. ಹಾಗಾದರೆ ಇಂದಿನ (2023 ಜೂನ್​ 9) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ, ಯಾರಿಗೆ ನಷ್ಟ, ಶುಭ, ಅಶುಭಗಳ ಮಾಹಿತಿಯನ್ನು ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ವಸಂತ ಋತು, ವೃಷಭ ಮಾಸ, ಮಹಾನಕ್ಷತ್ರ: ರೋಹಿಣೀ, ಮಾಸ: ಜ್ಯೇಷ್ಠ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಶತಭಿಷಾ, ಯೋಗ: ಐಂದ್ರ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 03 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 10:55 ರಿಂದ ಮಧ್ಯಾಹ್ನ 12:32ರ ವರೆಗೆ, ಯಮಘಂಡ ಕಾಲ‌ ಮಧ್ಯಾಹ್ನ 03:45 ರಿಂದ 05:22ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:41 ರಿಂದ 09:18ರ ವರೆಗೆ.

ಮೇಷ: ಕಚೇರಿ ಕೆಲಸಗಳಲ್ಲಿ ಸಮಯಪಾಲನೆಯಿಂದ ಅಧಿಕಾರಿಗಳ ಮೆಚ್ಚುಗೆ ಗಳಿಸುವ ಸಾಧ್ಯತೆ ಇದೆ. ನಿಮ್ಮ ಕೆಲಸವು ಇದೇ ಉತ್ಸಾಹದಿಂದ ಸಾಗಲಿ. ಮಕ್ಕಳು ಸೋಮಾರಿಗಳಾಗದಂತೆ ನೋಡಿಕೊಳ್ಳುವುದು ಪೋಷಕರ ಜವಾಬ್ದಾರಿಯಾಗಿರುತ್ತದೆ. ಏನಾದರೊಂದು ಕಾರಣ ಹೇಳಿ ಮನೆಯಲ್ಲಿಯೇ ಇರಲು ಇಚ್ಛಿಸುವಿರಿ. ತಿಳಿವಳಿಕೆ ಇಲ್ಲದವರ ಮುಂದೆ ನಿಮ್ಮ ವ್ಯವಹಾರಗಳನ್ನು ಹೇಳಿ ಪ್ರಯೋಜನವಿಲ್ಲ. ಅತ್ಯಂತ ಮಹತ್ತ್ವದ ಯೋಜನೆಯು ಪ್ರಾರಂಭ ಮಾಡುವ ಯೋಚನೆ ಬರಬಹುದು. ಸಂಬಂಧಗಳನ್ನು ಸರಿಯಾಗಿ ಇಟ್ಟುಕೊಳ್ಳಲು ಪ್ರಯತ್ನಿಸಿ‌. ಈ ದಿನ ನಿಮ್ಮ ಆರ್ಥಿಕ ಸ್ಥಿತಿಯನ್ನು ನೋಡಿಕೊಳ್ಳಿ ಮತ್ತು ಅಪರಿಚಿತರ ಜೊತೆ ಹಣದ ವ್ಯವಹಾರ ಮಾಡಬೇಡಿ. ಮೋಸಹೋಗುವ ಸಾಧ್ಯತೆ ಇದೆ.

ವೃಷಭ: ತಾವು ಉಳಿದುಕೊಳ್ಳಲು ಯಾರ ಮೇಲೂ ಅನಗತ್ಯ ಆರೋಪ ಮಡಿಯಾರು. ಯಂತ್ರಗಳ ವ್ಯಾಪಾರಿಗಳಿಗೆ ಸಂತೋಷದ ದಿನವಾಗಲಿದೆ. ಅಧಿಕ ಲಾಭವನ್ನೂ ನೀವು ಗಳಿಸುವ ಸಾಧ್ಯತೆ ಇದೆ. ಉತ್ಸಾಹವು ಎಷ್ಟೇ ಇದ್ದರೂ ಶಾಂತವಾದ ಮನಸ್ಸಿನಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ. ಹಿರಿಯರು ನಿಮಗೆ ಉತ್ತಮ ವಿಚಾರಗಳನ್ನು ತಿಳಿಸುವರು. ನಿಮಗೆ ಇಂದು ಪ್ರಭಾವೀವ್ಯಕ್ತಿಯನ್ನು ಭೇಟಿಯಾಗಿ, ಅವರ ಜೊತ ಕಾಲವನ್ನು ಕಳೆಯಲು ಅವಕಾಶ ಸಿಗಬಹುದು. ಇಂದು ನಿಮ್ಮ ಕಠಿಣ ಪರಿಶ್ರಮವು ವ್ಯರ್ಥವಾಗಬಹುದು. ಹಿತಶತ್ರುಗಳಿಗೆ ನಿಮ್ಮ ಯಶಸ್ಸು ಸಹಿಸಲಾಗದ ಶೂಲವಾದೀತು. ಅರ್ಥವಿಲ್ಲದ ಚರ್ಚೆಗಳಲ್ಲಿ ಸಮಯವನ್ನು ಹಾಳುಮಾಡಿಕೊಳ್ಳುವಿರಿ. ನಿಮ್ಮ ಮನಸ್ಸನ್ನು ಯೋಗ್ಯರ ಜೊತೆ ಹಂಚಿಕೊಳ್ಳಿ.

ಮಿಥುನ: ಕಛೇರಿಯಲ್ಲಿ ಅಧಿಕಾರಿಯ ಜೊತೆ ವಾದಕ್ಕೆ ಇಳಿಯಬಹುದು. ಯಾರಿಗೂ ಸಾಲವನ್ನು ಕೊಡಲು ಮುಂದಾಗುವುದು ಬೇಡ. ಒಡಹುಟ್ಟಿದವರಿಗೆ ಮಾರ್ಗದರ್ಶನ ನೀಡಿ ಮತ್ತು ಅವರ ಅಗತ್ಯಕ್ಕೆ ಅನುಗುಣವಾಗಿ ಅವರನ್ನು ಬೆಂಬಲಿಸಿ ಸಂತೋಷಪಡಿಸಿ. ಸಂಬಂಧಗಳು ಬಳಕೆಯಲ್ಲಿ ಇಲ್ಲದೇ ದೂರವಾಗಬಹುದು. ಬುದ್ಧಿಪೂರ್ವಕವಾಗಿ ತಪ್ಪುಗಳಾನ್ನು ಮಾಡುವಿರಿ. ಸಕಾರಾತ್ಮಕ ಅಂಶಗಳನ್ನು ಸ್ವೀಕರಿಸಲು ತಯಾರಾಗಿ. ನಿಮ್ಮ ಮಕ್ಕಳು ಪ್ರಗತಿಯತ್ತ ಸಾಗುತ್ತಿರುವುದು ನಿಮಗೆ ಖುಷಿ ಕೊಡುವ ಸಂಗತಿಯಾಗಿದೆ. ಇಂದು ನೆರೆ ಹೊರೆಯವರ ಭಿನ್ನಾಭಿಪ್ರಾಯವು ಬೆಳಕಿಗೆ ಬರಬಹುದು. ನಿಮ್ಮ ಇಚ್ಛೆಗೆ ವಿರುದ್ಧವಾಗಿದ್ದರೆ ಕೋಪಗೊಳ್ಳುವುದು ಬೇಡ.

ಕರ್ಕ: ಅಧಿಕೃತ ಕೆಲಸವನ್ನು ಬಿಟ್ಟು ಅನ್ಯ ಕೆಲಸವನ್ನು ಮಾಡಬೇಕಾಗಬಹುದು. ಅಧಿಕ ಲಾಭವನ್ನು ನೀವು ನಿರೀಕ್ಷಿಸಿದರೂ ನಿಮಗೆ ಫಲವು ಸಿಗಲಿಕಗಕಿಲ್ಲ. ವೃತ್ತಿಯ ಬಗ್ಗೆ ನಿಮಗೆ ಕೀಳರಿಮೆ ಬರುವ ಸಾಧ್ಯತೆ ಇದೆ. ಪ್ರಾಮಾಣಿಕತೆಯಿಂದ ನಿಮಗೆ ಲಾಭವಾಗಬಹುದು. ಕುಟುಂಬದ ಜೊತೆ ಬದುಕುವ ಆನಂದವನ್ನು ಅನುಭವಿಸುವಿರಿ. ಸಂಗಾತಿಯ ಮಾತುಗಳನ್ನು ನೀವು ತಳ್ಳಿಹಾಕುವಿರಿ. ನಿಮಗೆ ವಹಿಸಿದ ಕೆಲಸವು ವಿಳಂಬವಾಗಬಹುದು. ಇದು ನಿಮ್ಮ ಸಾಮರ್ಥ್ಯ ಕೊರತೆ ಎಂದು ಬಿಂಬಿತವಾಗಲಿದೆ. ನಿಮಗೆ ಉಂಟಾದ ಬೇಸರವನ್ನು ದೂರ ಮಾಡಿಕೊಳ್ಳಲು ಸತತ ಪ್ರಯಾಸಪಡುವಿರಿ.

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು