AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ಈ ರಾಶಿಯವರು ಸಂಗಾತಿಯನ್ನು ಕಡೆಗಣಿಸುವ ಸಾಧ್ಯತೆ ಇದೆ

ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 08) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ಈ ರಾಶಿಯವರು ಸಂಗಾತಿಯನ್ನು ಕಡೆಗಣಿಸುವ ಸಾಧ್ಯತೆ ಇದೆ
ಪ್ರಾತಿನಿಧಿಕ ಚಿತ್ರ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Jul 08, 2023 | 12:10 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 08 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಆಷಾಢ, ಪಕ್ಷ: ಕೃಷ್ಣ, ವಾರ: ಶನಿ, ತಿಥಿ: ಷಷ್ಠೀ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಆಯುಷ್ಮಾನ್, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 10 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:24 ರಿಂದ 11:01ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:14 ರಿಂದ 05:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:10 ರಿಂದ 07:47ರ ವರೆಗೆ.

ಮೇಷ: ಶಾರೀರಿಕ ಅಸೌಖ್ಯದ ಕೊರತೆ ಕಾಡಲಿದ್ದು ಮನೆಮದ್ದನ್ನು ಮಾಡಿ. ಉದ್ಯೋಗದಲ್ಲಿ ಸ್ಥಿರತೆ‌ಯು ಕಾಣದ ಕಾರಣ ಬದಲಿಸುವ ಅಲೋಚನೆಯೂ ಇರಲಿದೆ. ನಿಮ್ಮ ಆದಾಯ ಮೂಲವನ್ನು ಎಲ್ಲರ ಜೊತೆ ಹಂಚಿಕೊಳ್ಳುವುದು ಬೇಡ. ಇತರರ ದೃಷ್ಟಿಯಲ್ಲಿ ನೀವು ದೊಡ್ಡವರಾಗಿ ಕಾಣುವಿರಿ. ಬಂದಿದ್ದನ್ನು ಜೋಪಾನವಾಗಿ ಇಟ್ಟುಕೊಳ್ಳಿ. ಸಂಬಂಧಗಳನ್ನು ಉಳಿಸಿಕೊಳ್ಳಲು ನೀವು ಹೆಚ್ಚು ಇಷ್ಟಪಡುವಿರಿ. ಅವರ ಜೊತೆ ಆತ್ಮೀಯತೆಯನ್ನು ಬೆಳೆಸಿಕೊಳ್ಳುವಿರಿ. ಅಸಹಜಭಾವವು ನಿಮ್ಮಲ್ಲಿ ಉಂಟಾಗಿ‌ ಉದ್ವೇಗಗೊಳ್ಳುವಿರಿ. ಕೆಲವು ಬದಲಾವಣೆಯನ್ನು ನಿರೀಕ್ಷಿಸುವಿರಿ ಮತ್ತು ನೀವು ಬದಲಾಗುವಿರಿ.‌

ವೃಷಭ: ಮನೆಯಿಂದ ಹಣವನ್ನು ನೀವು ಪಡೆಯುವಿರಿ. ನೀವು ಸಮಾರಂಭಕ್ಕೆ ಹೋಗಿ ಸಂತೋಷಪಡುವ ಸಾಧ್ಯತೆ ಇದೆ. ಕೆಲವರನ್ನು ನೀವು ವಿನಾಕಾರಣ ದ್ವೇಷಿಸುವಿರಿ. ನಿಮ್ಮ‌ ಮಾತು ಮನಸ್ಸನ್ನು ಘಾಸಿಗೊಳಿಸೀತು. ಕಿವಿಯ ನೋವಿನಿಂದ ಸಂಕಟ ಪಡುವಿರಿ. ಇಂದು ಫಲವನ್ನು ಅತಿಯಾಗಿ ನಿರೀಕ್ಷಿಸುವುದು ಬೇಡ. ಸ್ಬೇಹಿತರ ಒತ್ತಾಯದ ಮೇರೆಗೆ ನೀವಿಂದು ಪ್ರಯಾಣ ಮಾಡುವಿರಿ. ನಿಮ್ಮ ದಾಖಲೆಗಳನ್ನು ಭದ್ರವಾಗಿ ಇಟ್ಟುಕೊಳ್ಳಿ.‌ ನಿರ್ಲಕ್ಷ್ಯದ ಕಾರಣ ನಿಮಗೇ ಬೇಸರವಾದೀತು. ಸಂಗಾತಿಯ ಜೊತೆ ಸಮಯವನ್ನು ಕಳೆಯುವಿರಿ.

ಮಿಥುನ: ಕಳ್ಳರ ಭೀತಿಯು ನಿಮ್ಮನ್ನು ಕ್ಷಣವೂ ಕಾಡಬಹುದು. ಅತಿಯಾದ ನಿದ್ರೆಯಲ್ಲಿ ಮೈ ಮರೆಯುವ ಸಾಧ್ಯತೆ ಇದೆ. ಇದರಿಂದ ನಿಮ್ಮ ಅಗತ್ಯ ಕಾರ್ಯಗಳು ವಿಳಂಬವಾಗಬಹುದು. ಮನೆಯನ್ನು ನೀವು ಖರೀದಿಸುವ ಅಲೋಚನೆ ಮಾಡುವಿರಿ. ಎಂದೋ ಕೂಡಿಟ್ಟ ಹಣವು ಇಂದು ಉಪಯೋಗಕ್ಕೆ ಬರಲಿದೆ. ಸರ್ಕಾರಿ ನೌಕರರು ಬಡ್ತಿಯ ನಿರೀಕ್ಷೆಯಲ್ಲಿ ಇರುವರು. ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯವು ಇರಲಿದೆ. ಅದನ್ನು ಉಳಿಸಿಕೊಳ್ಳಲು ನೀವು ಇಷ್ಟಪಡುವಿರಿ. ನಿಮ್ಮ ಸಂತೋಷವನ್ನು ಕಸಿದುಕೊಳ್ಳಲು ಯಾರಾದರೂ ಇರುತ್ತಾರೆ.

ಕಟಕ: ಮನಸ್ಸಿನಲ್ಲಿ ನಾನಾ ಬಗೆಯ ಚಿಂತೆಗಳು ಹುಟ್ಟಿಕೊಳ್ಳಬಹುದು. ಭವಿಷ್ಯದ ಬಗ್ಗೆ ಆಲೋಚನೆಗಳನ್ನು ಮಾಡುವಿರಿ. ಸಂಗಾತಿಯ ಸಲಹೆಯನ್ನೂ ಪಡೆದು ಉತ್ತಮ ನಿರ್ಧಾರಕ್ಕೆ ಬನ್ನಿ. ಸ್ತ್ರೀಯರು ಸೌಂದರ್ಯಪ್ರಜ್ಞೆಯನ್ನು ಅಧಿಕವಾಗಿ ಬೆಳೆಸಿಕೊಳ್ಳುವರು. ಮನೆಯವರ ಜೊತೆ ಎಲ್ಲವನ್ನೂ ಹೇಳಿಕೊಳ್ಳುವಿರಿ. ಆಹಾರವನ್ನು ಸರಿಯಾದ ಸಮಯಕ್ಕೆ ಸೇವಿಸಿ. ಹೂಡಿಕೆಯತ್ತ ನಿಮ್ಮ ಗಮನವಿರಲಿದೆ. ಸರಿಯಾದ ಮಾಹಿತಿ ಇರಲಿ. ಕೇಳಿದವರಿಗೆ ಯೋಗ್ಯವಾದ ಸಲಹೆಯನ್ನು ಕೊಡಿ.

ಸಿಂಹ: ಮನಸ್ಸು ಚಂಚಲವಾಗಲಿದ್ದು ಯಾವುದರ ಬಗ್ಗೆಯೂ ಏಕಾಗ್ರತೆಯಿಂದ ಇರಲು ಸಾಧ್ಯವಾಗದು. ಲಾಭವಿಲ್ಲದ ಕೆಲಸವನ್ನು ನೀವು ಮಾಡಲು ಇಚ್ಛಿಸುವುದಿಲ್ಲ. ಇಂದು ಸಮಯ ಸಿಗದೇ ಗಡಿಬಿಡಿಯಿಂದ ಕೆಲಸವನ್ನು ಮುಗಿಸುವಿರಿ. ವಾಹನದಲ್ಲಿ ಎಚ್ಚರವಾಗಿರಿ. ಕಣ್ಣಿಗೆ ಸಂಬಂಧಿಸಿದ ತೊಂದರೆಯು ಹೆಚ್ಚಾಗಬಹುದು. ಕಛೇರಿಯ ಸಮಯದಲ್ಲಿ ಸುಮ್ಮನೇ ಓಡಾಡುತ್ತಿದ್ದು ಹಿರಿಯ ಅಧಿಕಾರಿಗಳಿಂದ ನಿಮಗೆ ತೊಂದರೆಯಾಗಬಹುದು. ನಿಮಗೆ ಗೊತ್ತಿಲ್ಲದ ವಿಚಾರಗಳನ್ನು ಯಾರಿಂದಲಾದರೂ ಕೇಳಿ ಪಡೆಯಿರಿ. ಉನ್ನತ ವ್ಯಾಸಂಗದ ಬಯಕೆಯನ್ನು ಮನೆಯಲ್ಲಿ ಹೇಳಿಕೊಳ್ಳುವಿರಿ.

ಕನ್ಯಾ: ಶತ್ರುಗಳು ಏನಾದರೂ ಮಾನಸಿಕ ಕಿರುಕುಳವನ್ನು ಉಂಟುಮಾಡಿಯಾರು. ನಿಮ್ಮ ಕೆಲಸಕ್ಕೆ ಸಮಯದ ಮಿತಿಯನ್ನು ಅಳವಡಿಸಿಕೊಳ್ಳಿ. ಹಿರಿಯರ ಹಿತವಚನವು ನಿಮಗೆ ಅಪಮಾನದಂತೆ ಅನ್ನಿಸಬಹುದು. ಆಲಸ್ಯದಿಂದ‌ ಇಂದಿನ ಕಾರ್ಯವು ಪೂರ್ಣವಾಗದು. ಸಂಗಾತಿಯನ್ನು ನೀವು ಕಡೆಗಣಿಸುವಿರಿ. ತಾಯಿಯ ಕಡೆಯಿಂದ ಉದ್ಯೋಗಕ್ಕೆ ಬೇಕಾದ ಸಹಾಯ ಸಿಗಬಹುದು. ಒತ್ತಡ ನಿವಾರಣೆಗೆ ಧ್ಯಾನವನ್ನು ಮಾಡಿ. ಅಪರಿಚಿತರು ವೇಗವಾಗಿ ಆಪ್ತರಾದಾರು. ಅಂದುಕೊಂಡಿದ್ದು ಆಗಲಿಲ್ಲ ಎಂಬ ಬೇಸರವು ಉಂಟಾದೀತು. ಲೆಕ್ಕ ಪರಿಶೋಧಕರು ಹೆಚ್ಚಿನ ಕಾರ್ಯದಲ್ಲಿ ಮಗ್ನರಾಗುವರು.

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು