AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ರಾಶಿಭವಿಷ್ಯ, ಈ ರಾಶಿಯವರ ತಾಳ್ಮೆಯ ಪರೀಕ್ಷೆಯೂ ಆಗಬಹುದು

ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 19) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ರಾಶಿಭವಿಷ್ಯ, ಈ ರಾಶಿಯವರ ತಾಳ್ಮೆಯ ಪರೀಕ್ಷೆಯೂ ಆಗಬಹುದು
ರಾಶಿಭವಿಷ್ಯImage Credit source: Getty Images
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi|

Updated on: Jul 19, 2023 | 12:20 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 19 ಬುಧವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ವಜ್ರ, ಕರಣ: ಬಾಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:39 ರಿಂದ 02:15ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 07:50 ರಿಂದ 09:26ರ ವರೆಗೆ, ಗುಳಿಕ ಕಾಲ ಬೆಳಗ್ಗೆ 11:02 ರಿಂದ ಮಧ್ಯಾಹ್ನ 12:39ರ ವರೆಗೆ.

ಮೇಷ: ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯನ್ನು ಮಾಡುವಿರಿ. ಅಪ್ರಧಾನವಾದ ವಿಚಾರವು ನಿಮನ್ನು ಕಾಡಬಹುದು. ದೇಹದಲ್ಲಿ ಕೆಲವು ಕೆಲಸಗಳನ್ನು ಬಿಡುವಿರಿ. ನಾಯಕತ್ವವನ್ನು ನೀವು ನಿರಾಕರಿಸಬಹುದು. ಕೃಷಿಯಲ್ಲಿ ಆಸಕ್ತಿಯು ಹೆಚ್ಚಿದ್ದು ಮಾರ್ಗದರ್ಶನವನ್ನು ನೀವು ಬಯಸುವಿರಿ. ಅಪವ್ಯಯವನ್ನು ಕಡಿಮೆ ಮಾಡಿಕೊಳ್ಳಿ. ಉಳಿತಾಯಕ್ಕೆ ಬೇಕಾದ ಯೋಚನೆ ಇರಲಿ. ಮೌನವಾಗಿದ್ದು ನಿಮ್ಮ ಕಾರ್ಯವನ್ನು ಸಾಧಿಸುವಿರಿ. ಕುಟುಂಬದವರ ಜೊತೆ ಹೆಚ್ಚು ಕಾಲವನ್ನು ಕಳೆಯಲು ಆಗದು. ಸಂಗಾತಿಯ ಪ್ರೀತಿಯು ನಿಮಗೆ ಸಿಗಲಿದೆ.

ವೃಷಭ: ನಿಮ್ಮ ಆಲೋಚನೆಯಲ್ಲಿ ವ್ಯತ್ಯಾಸವಾಗಲಿದೆ. ವೃತ್ತಿಯಲ್ಲಿ ಬದಲಾವಣೆಯನ್ನು ಬಯಸುವಿರಿ. ಕಣ್ಣಿಗೆ ಕಾಣಿಸಿದ್ದನ್ನು ನೀವು ನಂಬಲಾರಿರಿ. ಸ್ನೇಹಿತರಿಂದ ಹಣಕಾಸಿನ ಸಹಾಯವನ್ನು ಬಯಸುವಿರಿ. ಹೊಸ ರೀತಿಯ ಆಲೋಚನೆಯಲ್ಲಿ ಮಾನಸಿಕ ಹಿತವು ಸಿಗಲಿದೆ. ಯಾರನ್ನೂ ಮೆಚ್ಚುವ ನಿಮ್ಮ ಗುಣವು ಶ್ಲಾಘನೀಯವಾಗಲಿದೆ. ಮನೆಯಿಂದ ಹೊರಗೆ ಭೋಜನವನ್ನು ಮಾಡುವಿರಿ. ಪ್ರಾರಂಭಿಸಿದ ಕೆಲಸದಲ್ಲಿ ಉತ್ಸಾಹ ಹೆಚ್ಚಿರಲಿದೆ. ತಲೆ ನೋವು ಇಂದು ಪೀಡಿಸಬಹುದು. ಪ್ರತ್ಯೇಕತೆಯಲ್ಲಿ ನಿಮಗೆ ಸುಖವಿದೆ ಎನಿಸಬಹುದು.

ಮಿಥುನ: ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮಾಡುವಿರಿ. ದುರಭ್ಯಾಸವನ್ನು ನೀವು ರೂಢಿಸಿಕೊಂಡಿರುವುದು ಅರಿವಿಗೆ ಬರಲಿದೆ. ನಿಮ್ಮೊಳಗೆ ಅಳುಕು ಇರಲಿದ್ದು ಅದನ್ನು ಬಿಟ್ಟು ಮುನ್ನಡೆಯಬೇಕು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಬೆಂಬಲವು ಸಿಗಲಿದೆ. ಸ್ನೇಹಿತರಿಂದ ನಿಮಗೆ ಉಡುಗೊರೆ ಸಿಗಲಿದೆ. ಖುಷಿಯಾಗಿರಲು ನಿಮಗೆ ಅನೇಕ ಕಾರಣಗಳು ಸಿಗಲಿದೆ. ಪ್ರಾಮಾಣಿಕತೆಯು ನಿಮಗೆ ಇಷ್ಟವಾಗಲಿದೆ. ಮಕ್ಕಳ ಜೊತೆ ಕಳೆಯಬೇಕು ಎನಿಸಬಹುದು. ತಾಳ್ಮೆಯ ಪರೀಕ್ಷೆಯೂ ಆಗಬಹುದು. ನಿಮ್ಮನ್ನು ಇಷ್ಟಪಡುವವರ ಸಂಖ್ಯೆ ಹೆಚ್ಚಾಗಲಿದೆ.

ಕಟಕ: ಇನ್ನೊಬ್ಬರ ವಿಷಯದಲ್ಲಿ ಮೂಗುತೂರಿಸುವ ಕೆಲಸವು ಅನವಶ್ಯಕ. ನಿಮ್ಮ ಶ್ರಮಕ್ಕೆ ಯೋಗ್ಯ ಆದಾಯವು ಇಲ್ಲ ಎನಿಸಬಹುದು. ಕುಟುಂಬವನ್ನು ಇಷ್ಟಪಡುವಿರಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗಬಹುದು. ವಾದದಲ್ಲಿ ಸೋಲಾಗಬಹುದು. ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ. ನೀವು ಮೋಸದ ಜಾಲಕ್ಕೆ ಸಿಕ್ಕಿಕೊಳ್ಳುವ ಸಂದರ್ಭವಿರಲಿದೆ. ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗಳು ಸ್ವೀಕರಿಸುವರು. ನಿಮ್ಮನ್ನು ಸಂಗಾತಿಯು ದೂರಬಹುದು. ಸರ್ಕಾರದ ಕೆಲಸವು ನಿಧಾನಗತಿಯಲ್ಲಿ ಸಾಗುವುದು. ಆರೋಗ್ಯವನ್ನು ಕಾಪಾಡಿಕೊಳ್ಳಿ.

ಸಿಂಹ: ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗಲಿದೆ. ಇದು ನಿಮ್ಮ ಇಂದಿನ ಖುಷಿಯ ಸಂಗತಿಯೂ ಹೌದು. ಪರರ ವಸ್ತುವನ್ನು ಅವರಿಗೆ ಹಿಂತಿರುಗಿಸಿ. ನಿದ್ರೆ ಇಲ್ಲದೇ ಮನಸ್ಸಿಗೆ ಕಿರಿಕಿರಿಯಾಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಗೆ ಇಬ್ಬರೂ ಕಷ್ಟಪಡುವಿರಿ. ವಿದೇಶದಲ್ಲಿರುವ ಬಂಧುಗಳಿಗೆ ಆರೋಗ್ಯದಲ್ಲಿ ತೊಂದರೆಯಾಗಬಹುದು. ನಿಮ್ಮಿಂದ ಆಗದ ಕೆಲಸವನ್ನು ಮತ್ತೊಬ್ಬರು ಮಾಡಿ ಮುಗಿಸುವರು. ಸಣ್ಣ ವಿಚಾರವನ್ನು ದೊಡ್ಡ ಮಾಡಿಕೊಳ್ಳಬೇಡಿ. ಸುಮ್ಮನೇ ಸಮಯವು ವ್ಯರ್ಥವಾಗುತ್ತಿದೆ ಎಂದನಿಸಬಹುದು. ಶಿವನಿಗೆ ರುದ್ರಾಭಿಷೇಕವನ್ನು ಮಾಡಿಸಿ.

ಕನ್ಯಾ: ಇಂದಿನ ಕಾರ್ಯದ ಗುರಿಯನ್ನು ನೀವು ಸಹೋದ್ಯೋಗಿಗಳ ಸಹಕಾರದಿಂದ ಮಾಡುವಿರಿ. ನಿಮಗೆ ನಿರೀಕ್ಷಿತ ಉದ್ಯೋಗವು ಸಿಗಲಿದ್ದು ಮನೆಯಲ್ಲಿ ಚರ್ಚೆಗಳು ನಡೆಯಬಹುದು. ನಿಮ್ಮ ದಿವಸದ ವ್ಯವಸ್ಥೆಯನ್ನು ಸರಿಮಾಡಿಕೊಳ್ಳಿ. ಇನ್ನೊಬ್ಬರ ಮಾತಿನಿಂದ ಯಾರನ್ನೂ ಅಳೆಯುವುದು ಬೇಡ. ನಿಮ್ಮದೇ ಆದ ಸಂಸ್ಥೆಯನ್ನು ಹುಟ್ಟು ಹಾಕಲು ಪ್ರಯತ್ನಿಸುವಿರಿ. ಆಯಾಸದಿಂದ ನೀವು ವಿಶ್ರಾಂತಿಯನ್ನು ಪಡೆಯುವಿರಿ. ನಿಮ್ಮವರ ಮೇಲೆ ಸಿಡಿಮಿಡಿಗೊಳ್ಳುವಿರಿ. ಸಂಗಾತಿಯು ನಿಮ್ಮನ್ನು ಸಮಾಧಾನ ಮಾಡಬಹುದು.

ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಬಿ.ಸಿ. ಪಾಟೀಲ್ ಸಿನಿಮಾಗೆ ಸಮಸ್ಯೆ ಆದಾಗ ಸಹಾಯ ಮಾಡಿದ್ದ ಬಿ. ಸರೋಜಾದೇವಿ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಪ್ರತಿಭಟನೆಯ ಭಾಗವಾಗೇ ನಿತಿನ್ ಗಡ್ಕರಿಗೆ ಪತ್ರ ಬರೆದಿರೋದು: ಸಿದ್ದರಾಮಯ್ಯ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕರ್ನಾಟಕದಲ್ಲಿ 3 ಲಕ್ಷ ಕೋಟಿ ರೂ. ವೆಚ್ಚದ ಕಾಮಗಾರಿ ಜಾರಿಯಲ್ಲಿವೆ: ಸಚಿವ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಕೀಟನಾಶಕ‌ ಮಿಶ್ರಿತ ನೀರು ಕುಡಿದು 12 ಮಂದಿ ಮಕ್ಕಳು ಅಸ್ವಸ್ಥ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ಬಿ. ಸರೋಜಾದೇವಿ ಬರೆದಿದ್ದ ವಿಲ್​ಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಸಹಿ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ವಿಷಸರ್ಪಗಳು ಏನೂ ಮಾಡೋದಿಲ್ಲ, ತಮ್ಮ ಪಾಡಿಗೆ ತಾವು ಸರಿದಾಡುತ್ತವೆ: ನೈನಾ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ನನ್ನ ಮದುವೆಯಾದಾಗ ನೀನೂ ಗೌಡ್ತಿಯಾದೆ ಅಂತ ಛೇಡಿಸುತ್ತಿದ್ದರು: ಮಾಲಾಶ್ರೀ
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ರಾಜಕಾರಣಿಯಾಗಿರದಿದ್ದರೆ ಪರಮೇಶ್ವರ್ ಹೋಟೆಲ್ ಉದ್ಯಮಿಯಾಗುತ್ತಿದ್ದರೇ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?
ಗೇಟ್​ ಹತ್ತಿ ಹಾರಿ ಜಮ್ಮು ಕಾಶ್ಮೀರದ ಸಿಎಂ ಒಮರ್ ಹೋಗಿದ್ದೆಲ್ಲಿಗೆ?