AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Horoscope: ನಿಮ್ಮ ಶಿಸ್ತಿಗೆ ಕೆಲಸದ ಸ್ಥಳದಲ್ಲಿ ಪ್ರಶಂಸೆ, ನಿಮ್ಮವರ ಪ್ರೀತಿಗೆ ಮನಸೋಲುವಿರಿ

ನೀವು ಮೇಷ, ವೃಷಭ, ಮಿಥುನ, ಕಟಕ, ಸಿಂಹ, ಕನ್ಯಾ ರಾಶಿಯವರೇ? ಹಾಗಿದ್ದರೆ ಇಂದಿನ (2023 ಜುಲೈ 20) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Daily Horoscope: ನಿಮ್ಮ ಶಿಸ್ತಿಗೆ ಕೆಲಸದ ಸ್ಥಳದಲ್ಲಿ ಪ್ರಶಂಸೆ, ನಿಮ್ಮವರ ಪ್ರೀತಿಗೆ ಮನಸೋಲುವಿರಿ
ಪ್ರಾತಿನಿಧಿಕ ಚಿತ್ರ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: Jul 20, 2023 | 12:15 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 20 ಗುರುವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಪುನರ್ವಸು, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಗುರು, ತಿಥಿ: ತೃತೀಯಾ, ನಿತ್ಯನಕ್ಷತ್ರ: ಮಘಾ, ಯೋಗ: ಸಿದ್ಧ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 13 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ, ಗುಳಿಕ ಕಾಲ ಬೆಳಗ್ಗೆ 09:26 ರಿಂದ 11:02ರ ವರೆಗೆ.

ಮೇಷ: ಆದಾಯಕ್ಕಿಂತ ಅಧಿಕವಾದ ಖರ್ಚನ್ನು ನೀವು ತೋರಿಸುವಿರಿ. ನಿಮ್ಮ‌ ಪರೀಕ್ಷೆಯ ಕಾಲವು ಇದಾಗಿದ್ದು ಎಚ್ಚರಿಕೆಯಿಂದ ಮಾತನಾಡಿ. ಗುರುಹಿರಿಯರಲ್ಲಿ ಶ್ರದ್ಧೆ, ಗೌರವದ ಅಗತ್ಯವಿದೆ. ನೇರ ನುಡಿಯಿಂದ ಶತ್ರುಗಳು ಹುಟ್ಟಿಕೊಂಡಾರು. ಸಮಯಸ್ಫೂರ್ತಿಯಿಂದ ಕೆಲಸವನ್ನು ಮಾಡುವಿರಿ. ದುರಭ್ಯಾಸದಿಂದ ನಿಮಗೆ ತೊಂದರೆಗಳು ಕಾಣಿಸಿಕೊಳ್ಳುವುದು. ಶುಭವಾರ್ತೆಯ ನಿರೀಕ್ಷೆಯಲ್ಲಿ ಇರುವಿರಿ. ಸಂಗಾತಿಯ ಜೊತೆ ವಾಯುವಿಹಾರವನ್ನು ಮಾಡಿ ಸುಖಪಡುವಿರಿ. ಪಿತ್ತದಿಂದ ಆರೋಗ್ಯವು ಕೆಡಲಿದೆ.

ವೃಷಭ: ಹೊಸ ವಿಚಾರವನ್ನು ಹುಡುಕುವುದು ನಿಮಗೆ ಪ್ರಿಯವಾದುದಾಗಿದೆ. ನೇರ ಮಾತುಗಳು ನಿಮಗೆ ಸಹಿಸಲು ಅಶಕ್ಯವಾದ ನೋವನ್ನು ಕೊಡಲಿದೆ. ನೀವು ಊಹಿಸದಷ್ಟು ಸಂಗಾತಿಯ ಸ್ವಭಾವವು ಇರುವುದಿಲ್ಲ.‌ ಇದು ನಿಮಗೆ ಅನಂತರ ಬೇಸರವನ್ನು ತರಿಸಬಹುದು. ಏಕಪಕ್ಷೀಯವಾಗಿ ನಿರ್ಧರಿಸದೇ ಎಲ್ಲರ ಅಭಿಪ್ರಾಯವನ್ನು ಪಡೆಯುವಿರಿ. ನಿಮ್ಮ ಕೆಲಸವು ಅನೇಕರಿಗೆ ಉಪಯೋಗವಾಗುವುದು. ನಿಮ್ಮ ಮಾತುಗಳು ಅಸ್ಪಷ್ಟವಾಗಿ ಇರಲಿದೆ. ತಾಳ್ಮೆಯಿಂದ ನೀವು ಜಯಗಳಿಸುವಿರಿ. ಅಧಿಕ ಒತ್ತಡವನ್ನು ಇಂದು ನೀವು ಮಾಡಿಕೊಳ್ಳಲಾರಿರಿ.

ಮಿಥುನ: ನಿಮ್ಮವರ ಪ್ರೀತಿಯಲ್ಲಿ‌ ನೀವು ಮನಸೋಲುವಿರಿ. ನಿಮ್ಮ ಕೆಲಸವು ಶಿಸ್ತಿನದ್ದಾಗಿದ್ದು ಪ್ರಶಂಸೆಯೂ ಸಿಗಲಿದೆ. ನೀವು ಎಲ್ಲರ‌ ನಡುವೆ ಅಂತರವನ್ನು ಕಾಯ್ದುಕೊಂಡು ವ್ಯವಹಾರವನ್ನು ನಡೆಸುವಿರಿ. ಬಂಧುಗಳ ಭೇಟಿಯಾಗಿ ಸಂತೋಷಪಡುವಿರಿ. ಬೆನ್ನು ನೋವಿಗೆ ಸರಿಯಾದ ಚಿಕಿತ್ಸೆಯು ಸಿಗಲಿದೆ. ಇಂದು ಸಂಗಾತಿಯ ಒಲವಿನಿಂದ ವಂಚಿತರಾಗಲಿದ್ದೀರಿ. ಕಷ್ಟವಾದರೂ ಕೆಲಸವನ್ನು ಮಾಡುವ ನಿಮ್ಮ ಒಪ್ಪಂದಕ್ಕೆ ಮೆಚ್ಚಿಗೆ ಸಿಗಲಿದೆ. ಹೂಡಿಕೆಯ ಹಣವನ್ನು ಪಡೆದುಕೊಳ್ಳುವಿರಿ. ನಿಮ್ಮ‌ ಕೆಲಸಕ್ಕೆ ಮತ್ತಾರಿಗೋ ಹೆಸರು ಸಿಗಬಹುದು. ಹಳೆಯ ನೆನಪು ಕಾಡಬಹುದು.

ಕಟಕ: ಮಹಿಳೆಯರು ತಾಯಿಯಿಂದ ಲಾಭವನ್ನು ನಿರೀಕ್ಷಿಸುವರು. ಏನನ್ನಾದರೂ ಮಾಡಬೇಕು ಎಂಬ ನಿಮ್ಮ ಹಂಬಲ ಅತಿಯಾಗಿರುವುದು. ಇನ್ನೊಬ್ಬರ ಜೊತೆ ಸಂಬಂಧವನ್ನು ಬಯಸುವಿರಿ. ವೃತ್ತಿಯನ್ನು ಬಹಳ ಹಗುರಾಗಿ ಭಾವಿಸಿ ಕೆಲಸವನ್ನು ಮಾಡುವಿರಿ.‌ ಸಮಯಕ್ಕೆ ಬೆಲೆ ಕೊಡುವುದು ಬಾರದು. ಕೆಲವನ್ನು ನೀವು ಸರಳೀಕರಿಸಿಕೊಳ್ಳುವುದು ಉತ್ತಮ. ಮಾತನ್ನು ಅಹಂಕಾರದಿಂದ ಮಾತನಾಡಿದಂತೆ ಕೇಳುವುದು. ಸಂಯಮವನ್ನು ಬೆಳೆಸಿಕೊಳ್ಳುವ ಅಗತ್ಯ ಅತಿಯಾಗಿ ಇರಲಿದೆ. ಎಲ್ಲವನ್ನೂ ಅನುಮಾನದ ದೃಷ್ಟಿಯಿಂದ ನೋಡುವುದನ್ನು ಅಭ್ಯಾಸ ಮಾಡಿಕೊಳ್ಳುವುದು ಬೇಡ.

ಸಿಂಹ: ನಿಮ್ಮ ಅಪೇಕ್ಷೆಗಳನ್ನು ನಿಯಂತ್ರಣದಲ್ಲಿ ಇರಿಸಿಕೊಂಡು ಎಂದಿನ‌ ಕೆಲಸದಲ್ಲಿ ಪ್ರವೃತ್ತರಾಗುವಿರಿ. ಆಸ್ತಿಯ ಖರೀದಿಯಲ್ಲಿ ತಂದೆಯ ಕಡೆಯಿಂದ ನಿಮಗೆ ಸಿಂಹಪಾಲು ಸಿಗಲಿದೆ. ಗಂಭೀರವಾದ ಚರ್ಚೆಯಲ್ಲಿ ನಿಮ್ಮ ಹಾಸ್ಯೊದರಜ್ಞೆಯು ಎಲ್ಲರನ್ನು ನಗಿಸುವುದು. ಸಂಕೀರ್ಣವಾದ ಕೆಲಸವನ್ನು ಸರಳ ಮಾಡಿಕೊಳ್ಳುವುದು ನಿಮಗೆ ಕರಗತವಾಗಲಿದೆ. ನಿಮ್ಮ ಸಮಯವು ವ್ಯರ್ಥ ಎಂದನಿಸಬಹುದು. ನಿಮಗೆ ಬರಬೇಕಾದ ಹಣವನ್ನು ಬಲವಂತವಾಗಿ ಪಡೆದುಕೊಳ್ಳುವಿರಿ. ನಿಮಗೆ ಸರಿಯಾದ ನಿರ್ಧಾರಕ್ಕೆ ಬರಲು ಕಷ್ಟವಾದೀತು. ಆಪ್ತರ ಸಲಹೆಯನ್ನು ಪಡೆದುಕೊಳ್ಳಿ.

ಕನ್ಯಾ: ಶತ್ರುಗಳು ನಿಮ್ಮ ಮಿತ್ರರಾಗಲು ಬಯಸಬಹುದು. ನಿಮ್ಮ ಗಮನವು ಅವರ ಮೇಲಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚು ಸಮಯವನ್ನು ಕಳೆಯುವಿರಿ. ವಿದ್ಯಾರ್ಥಿಗಳಿಗೆ ದುಡಿಮೆಯ ಬಗ್ಗೆ ಹೆಚ್ಚು ಆಸಕ್ತಿಯು ಹೆಚ್ಚಾಗಿ ಅಭ್ಯಾಸವನ್ನು ನಿಲ್ಲಿಸುವಿರಿ. ಬಂಧುಗಳ ಮನೆಯ ಸಮಾರಂಭಕ್ಕೆ ಹೋಗಲಿದ್ದೀರಿ. ದಾಂಪತ್ಯದಲ್ಲಿ ಮಾತಿನ ಬಿರುಸು ಅತಿಯಾಗಬಹುದು. ಕಬ್ಬಿಣದ ವ್ಯಾಪಾರವನ್ನು ಮಾಡಲು ಧನಸಹಾಯವು ಸಿಗಬಹುದು. ನಿಷ್ಟುರದ ಮಾತುಗಳನ್ನು ಆಡಿ ಸಂಬಂಧವನ್ನು ಕಳೆದುಕೊಳ್ಳುವಿರಿ. ಅಪಜಯವು ನಿಮಗೆ ಅಪಮಾನದಂತೆ ಆಗುವುದು.

ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಊಟಕ್ಕೆ ಕೂತಿದ್ದ ಮಗನನ್ನು ಸ್ನೇಹಿತ ಕರೆದುಕೊಂಡು ಹೋಗಿದ್ದ: ಮನೋಜ್ ತಂದೆ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ಪ್ರೇಯಸಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿದ ಪ್ರಿಯಕರ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ದುರಂತಕ್ಕೆ ರಾಶಿಗಟ್ಟಲೇ ಚಪ್ಪಲಿಗಳು ಸಾಕ್ಷಿ: ಇವೇ ಹೇಳುತ್ತಿವೆ ಸಾವಿನ ಕಥೆ
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
ಆಟಗಾರರ ಜೊತೆ ಸೆಲ್ಪೀ ತೆಗೆದುಕೊಳ್ಳೋದು ನಮ್ಮ ನಾಯಕರಿಗೆ ಬೇಕಿತ್ತಾ? ಸುಧಾಕರ್
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
Live: ವಿಜಯೇಂದ್ರ, ಅಶೋಕ್​ ಜಂಟಿ ಸುದ್ದಿಗೋಷ್ಠಿ ನೇರ ಪ್ರಸಾರ
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ಬೆಂಗಳೂರು ಕಾಲ್ತುಳಿತ: ಘೋರ ದುರಂತವನ್ನು ಕನ್ನಡಿಗರು ಯಾವತ್ತೂ ಮರೆಯಲಾರರು
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ನನಗೂ ಉಸಿರುಗಟ್ಟಿತ್ತ; ಸ್ಟೇಡಿಯಂ ಕರಾಳ ಅನುಭವ ಬಿಚ್ಚಿಟ್ಟ ಚಂದನ್ ಶೆಟ್ಟಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
ಸ್ಮಶಾನವಾದ ಚಿನ್ನಸ್ವಾಮಿ ಸ್ಟೇಡಿಯಂ, ದುರಂತಕ್ಕೆ ಸಾಕ್ಷಿಯಾದ ರಾಶಿ ಚಪ್ಪಲಿ
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Devotional: ಸಹವಾಸದಿಂದ ಏನೆಲ್ಲಾ ಪ್ರಭಾವ ಬೀರುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಅಶುಭ ಫಲ