AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು, ಮಾತನಾಡುವಾಗ ತಿಳಿದು ಮಾತನಾಡಿ

ಸಿಂಹ, ಕನ್ಯಾ, ತುಲ, ವೃಶ್ಚಿಕ ರಾಶಿಯವರ ಇಂದಿನ (2023 ಜುಲೈ 22) ಭವಿಷ್ಯದ ಮಾಹಿತಿ ಇಲ್ಲಿದೆ. ಸಿಂಹ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು ತುಲಾ ರಾಶಿಯವರಿಗೆ ಹಣಕಾಸಿನ ಕೊರತೆಯು ಸಲ್ಲದ ಕೆಲಸಕ್ಕೆ ನಿಮ್ಮನ್ನು ಜೋಡಿಸುವ ಸಾಧ್ಯತೆ ಇದೆ.

Horoscope: ದಿನಭವಿಷ್ಯ, ಈ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು, ಮಾತನಾಡುವಾಗ ತಿಳಿದು ಮಾತನಾಡಿ
ಇಂದಿನ ರಾಶಿಭವಿಷ್ಯImage Credit source: istock
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: Rakesh Nayak Manchi|

Updated on: Jul 22, 2023 | 12:30 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 22 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವರಿಯಾನ್​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ.

ಸಿಂಹ: ಅಧಿಕಾರದಲ್ಲಿರುವವರು ಒತ್ತಡಕ್ಕೆಸಿಲುಕಿರುವರು. ಗೆಳೆಯರ ಮಾತಿಗೆ ಹೆಚ್ಚು ಬೆಲೆ ಆದರವನ್ನು ತೋರುವಿರಿ. ಆರೋಗ್ಯದ ಕಡೆ ಹೆಚ್ಚು ಗಮನವಿರಲಿ. ಬಂಧುಗಳು ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರುವರು. ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು. ಸರ್ಕಾರಿ ನೌಕರಿ ಸಿಕ್ಕುವ ಅವಕಾಶಗಳು ಕಡಿಮೆ‌ ಇರಲಿದೆ. ಮಾತಮಾಡುವಾಗ ತಿಳಿದು ಮಾತನಾಡಿ. ಹಣವನ್ನು ಸಂಪಾದಿಸುವ ಛಲವಿದ್ದು ಸರಿಯಾದ ಮಾರ್ಗದಲ್ಲಿ ಮುಂದುವರಿಯಿರಿ. ಇನ್ನೊಬ್ಬರನ್ನು‌ ಅನುಕರಿಸಿ ನಡೆಯುವುದು ಬೇಡ. ನಿಮಗೆ ಗೊತ್ತಿಲ್ಲದೇ ನಿಮ್ಮ ಬಗ್ಗೆ ಕೆಲವು ಮಾತುಗಳು ಇರಲಿವೆ. ಸೋಲನ್ನು ಒಪ್ಪಿಕೊಂಡು ಸಂತೋಷದಿಂದ‌ ಮುನ್ನಡೆಯುವಿರಿ.

ಕನ್ಯಾ: ನೆಮ್ಮದಿಗಾಗಿ ಬಹಳ ಹುಡುಕಾಟ ಮಾಡುವಿರಿ. ಒತ್ತಡದಿಂದ ಹೊರಗೆ ಬರುವ ಮಾರ್ಗವನ್ನು ಕಂಡುಕೊಳ್ಳುವಿರಿ. ಉಳಿತಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉಂಟಾದ ಪ್ರಗತಿಯಿಂದ ಸಂತೋಷವಾಗಲಿದೆ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿ. ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ಇಂದ ಇರುವುದು ಮುಖ್ಯ. ಹೊರಗೆ ಸುತ್ತಾಟ ಮಾಡಿ ಮನಸ್ಸನ್ನು ಹಗುರಾಗಲಿದೆ. ಬಂಧುಗಳ ಮನೆಗೆ ಹೋಗಲಿದ್ದೀರಿ. ಗೌರವವಿಲ್ಲದ ಸ್ಥಳದಿಂದ ನೀವು ದೂರ ಸರಿಯುವಿರಿ. ಮಕ್ಕಳ ಜೊತೆ ಅಧಿಕ ಸಮಯವನ್ನು ಕಳೆಯುವಿರಿ.

ತುಲಾ: ಹಣಕಾಸಿನ ಕೊರತೆಯು ಸಲ್ಲದ ಕೆಲಸಕ್ಕೆ ನಿಮ್ಮನ್ನು ಜೋಡಿಸುವ ಸಾಧ್ಯತೆ ಇದೆ. ಪರೋಕ್ಷವಾಗಿ ನಿಮ್ಮ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಕಾಳಜಿಯು ಅತಿಯಾಗಿರಲಿದೆ. ಅಸಾಧಾರ ಕೆಲಸವನ್ನು ಮಾಡಲು ಉತ್ಸಾಹಶೀಲರಾಗಿರುವಿರಿ. ನಿಮ್ಮ ಹಣದ ಅಭಾವವನ್ನು ಗೌಪ್ಯವಾಗಿ ಇಟ್ಟುಕೊಳ್ಳಿ. ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸವನ್ನು ಮಾಡಿ.‌ ಮನೆಯ ಕೆಲಸವನ್ನು ಹೆಚ್ಚು ಆನಂದದಿಂದ ಮಾಡುವಿರಿ. ಆಸ್ತಿಯ ಹಂಚಿಕೆಯಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು.

ವೃಶ್ಚಿಕ: ಭೂಮಿಯ ವ್ಯವಹಾರದಲ್ಲಿ ಮಾತುಕತೆಗಳು ಯಥೇಚ್ಛವಾಗಿ ಆದರೂ ಲಾಭವು ಬಹಳ ಕಡಿಮೆ ಇರಲಿದೆ. ಓಡಾಟದಲ್ಲಿ ನಿಮ್ಮ‌ ವಸ್ತವು ಕಳೆದುಹೋಗಬಹುದು. ಅಪರಿಚಿತರು ನಿಮ್ಮಿಂದ ಏನನ್ನಾದರೂ ಬಯಸಿಯಾರು. ಮನೆಗೆ ಬಂದ ಅತಿಥಿಯನ್ನು ಸತ್ಕಾರದಿಂದ ಸಂತೋಷಪಡಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವಿರಿ. ಸಹೋದರಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಇರಲಿದೆ. ಸಂಗಾತಿಯ ಜೊತೆ ಪರಸ್ಥಳಗಳಿಗೆ ಹೋಗುವಿರಿ. ಕೆಲವು ಮಾತಗಳು ಪ್ರಶಾಂತವಾದ ಮನಸ್ಸನ್ನು ಹಾಳುಮಾಡುವುದು. ಉಸಿರಾಟದ ತೊಂದರೆಯಾಗುವ ಸಾಧ್ಯತೆ ಇದೆ.

Follow Us
Lohitha Hebbar
Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!