AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ, ಈ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು, ಮಾತನಾಡುವಾಗ ತಿಳಿದು ಮಾತನಾಡಿ

ಸಿಂಹ, ಕನ್ಯಾ, ತುಲ, ವೃಶ್ಚಿಕ ರಾಶಿಯವರ ಇಂದಿನ (2023 ಜುಲೈ 22) ಭವಿಷ್ಯದ ಮಾಹಿತಿ ಇಲ್ಲಿದೆ. ಸಿಂಹ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು ತುಲಾ ರಾಶಿಯವರಿಗೆ ಹಣಕಾಸಿನ ಕೊರತೆಯು ಸಲ್ಲದ ಕೆಲಸಕ್ಕೆ ನಿಮ್ಮನ್ನು ಜೋಡಿಸುವ ಸಾಧ್ಯತೆ ಇದೆ.

Horoscope: ದಿನಭವಿಷ್ಯ, ಈ ರಾಶಿಯವರು ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು, ಮಾತನಾಡುವಾಗ ತಿಳಿದು ಮಾತನಾಡಿ
ಇಂದಿನ ರಾಶಿಭವಿಷ್ಯImage Credit source: istock
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: Rakesh Nayak Manchi

Updated on: Jul 22, 2023 | 12:30 AM

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚೆನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದರೆ 2023 ಜುಲೈ 22 ಶನಿವಾರದ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಮಹಾನಕ್ಷತ್ರ: ಪುಷ್ಯಾ, ಮಾಸ: ಅಧಿಕ ಶ್ರಾವಣ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಪಂಚಮೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ವರಿಯಾನ್​, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ 14 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 07 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 09:27 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 02:15 ರಿಂದ 03:51ರ ವರೆಗೆ, ಗುಳಿಕ ಕಾಲ ಬೆಳಗ್ಗೆ 06:14 ರಿಂದ 07:50ರ ವರೆಗೆ.

ಸಿಂಹ: ಅಧಿಕಾರದಲ್ಲಿರುವವರು ಒತ್ತಡಕ್ಕೆಸಿಲುಕಿರುವರು. ಗೆಳೆಯರ ಮಾತಿಗೆ ಹೆಚ್ಚು ಬೆಲೆ ಆದರವನ್ನು ತೋರುವಿರಿ. ಆರೋಗ್ಯದ ಕಡೆ ಹೆಚ್ಚು ಗಮನವಿರಲಿ. ಬಂಧುಗಳು ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರುವರು. ಎಲ್ಲದಕ್ಕೂ ಕೋಪ ಮಾಡಿಕೊಳ್ಳುವುದು ಸರಿಕಾಣಿಸದು. ಸರ್ಕಾರಿ ನೌಕರಿ ಸಿಕ್ಕುವ ಅವಕಾಶಗಳು ಕಡಿಮೆ‌ ಇರಲಿದೆ. ಮಾತಮಾಡುವಾಗ ತಿಳಿದು ಮಾತನಾಡಿ. ಹಣವನ್ನು ಸಂಪಾದಿಸುವ ಛಲವಿದ್ದು ಸರಿಯಾದ ಮಾರ್ಗದಲ್ಲಿ ಮುಂದುವರಿಯಿರಿ. ಇನ್ನೊಬ್ಬರನ್ನು‌ ಅನುಕರಿಸಿ ನಡೆಯುವುದು ಬೇಡ. ನಿಮಗೆ ಗೊತ್ತಿಲ್ಲದೇ ನಿಮ್ಮ ಬಗ್ಗೆ ಕೆಲವು ಮಾತುಗಳು ಇರಲಿವೆ. ಸೋಲನ್ನು ಒಪ್ಪಿಕೊಂಡು ಸಂತೋಷದಿಂದ‌ ಮುನ್ನಡೆಯುವಿರಿ.

ಕನ್ಯಾ: ನೆಮ್ಮದಿಗಾಗಿ ಬಹಳ ಹುಡುಕಾಟ ಮಾಡುವಿರಿ. ಒತ್ತಡದಿಂದ ಹೊರಗೆ ಬರುವ ಮಾರ್ಗವನ್ನು ಕಂಡುಕೊಳ್ಳುವಿರಿ. ಉಳಿತಾಯಕ್ಕೆ ಹೆಚ್ಚಿನ ಆದ್ಯತೆ ನೀಡಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಉಂಟಾದ ಪ್ರಗತಿಯಿಂದ ಸಂತೋಷವಾಗಲಿದೆ. ಸಿಕ್ಕ ಅವಕಾಶಗಳನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಿ. ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ಇಂದ ಇರುವುದು ಮುಖ್ಯ. ಹೊರಗೆ ಸುತ್ತಾಟ ಮಾಡಿ ಮನಸ್ಸನ್ನು ಹಗುರಾಗಲಿದೆ. ಬಂಧುಗಳ ಮನೆಗೆ ಹೋಗಲಿದ್ದೀರಿ. ಗೌರವವಿಲ್ಲದ ಸ್ಥಳದಿಂದ ನೀವು ದೂರ ಸರಿಯುವಿರಿ. ಮಕ್ಕಳ ಜೊತೆ ಅಧಿಕ ಸಮಯವನ್ನು ಕಳೆಯುವಿರಿ.

ತುಲಾ: ಹಣಕಾಸಿನ ಕೊರತೆಯು ಸಲ್ಲದ ಕೆಲಸಕ್ಕೆ ನಿಮ್ಮನ್ನು ಜೋಡಿಸುವ ಸಾಧ್ಯತೆ ಇದೆ. ಪರೋಕ್ಷವಾಗಿ ನಿಮ್ಮ ನಿಮ್ಮವರನ್ನು ದ್ವೇಷಿಸುವಿರಿ.‌ ಮಕ್ಕಳ‌ ಮೇಲೆ‌ ನಿಮ್ಮ ಕಾಳಜಿಯು ಅತಿಯಾಗಿರಲಿದೆ. ಅಸಾಧಾರ ಕೆಲಸವನ್ನು ಮಾಡಲು ಉತ್ಸಾಹಶೀಲರಾಗಿರುವಿರಿ. ನಿಮ್ಮ ಹಣದ ಅಭಾವವನ್ನು ಗೌಪ್ಯವಾಗಿ ಇಟ್ಟುಕೊಳ್ಳಿ. ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸವನ್ನು ಮಾಡಿ.‌ ಮನೆಯ ಕೆಲಸವನ್ನು ಹೆಚ್ಚು ಆನಂದದಿಂದ ಮಾಡುವಿರಿ. ಆಸ್ತಿಯ ಹಂಚಿಕೆಯಲ್ಲಿ ನಿಮ್ಮ ವಿರುದ್ಧ ಮಾತುಗಳು ಕೇಳಿಬರಬಹುದು.

ವೃಶ್ಚಿಕ: ಭೂಮಿಯ ವ್ಯವಹಾರದಲ್ಲಿ ಮಾತುಕತೆಗಳು ಯಥೇಚ್ಛವಾಗಿ ಆದರೂ ಲಾಭವು ಬಹಳ ಕಡಿಮೆ ಇರಲಿದೆ. ಓಡಾಟದಲ್ಲಿ ನಿಮ್ಮ‌ ವಸ್ತವು ಕಳೆದುಹೋಗಬಹುದು. ಅಪರಿಚಿತರು ನಿಮ್ಮಿಂದ ಏನನ್ನಾದರೂ ಬಯಸಿಯಾರು. ಮನೆಗೆ ಬಂದ ಅತಿಥಿಯನ್ನು ಸತ್ಕಾರದಿಂದ ಸಂತೋಷಪಡಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವಿರಿ. ಸಹೋದರಿಯ ವಿಚಾರದಲ್ಲಿ ನಿಮಗೆ ಅಸಮಾಧಾನ ಇರಲಿದೆ. ಸಂಗಾತಿಯ ಜೊತೆ ಪರಸ್ಥಳಗಳಿಗೆ ಹೋಗುವಿರಿ. ಕೆಲವು ಮಾತಗಳು ಪ್ರಶಾಂತವಾದ ಮನಸ್ಸನ್ನು ಹಾಳುಮಾಡುವುದು. ಉಸಿರಾಟದ ತೊಂದರೆಯಾಗುವ ಸಾಧ್ಯತೆ ಇದೆ.

ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
16 ವರ್ಷದ ಹುಡುಗನ ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡ ವಿನಯ್ ರಾಜ್​ಕುಮಾರ್
16 ವರ್ಷದ ಹುಡುಗನ ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡ ವಿನಯ್ ರಾಜ್​ಕುಮಾರ್
ತೂಫಾನ್ ಅರ್ಧಶತಕ ಸಿಡಿಸಿ ಮತ್ತೊಮ್ಮೆ ಪಂದ್ಯ ಗೆಲ್ಲಿಸಿದ ಹೆಟ್ಮೆಯರ್
ತೂಫಾನ್ ಅರ್ಧಶತಕ ಸಿಡಿಸಿ ಮತ್ತೊಮ್ಮೆ ಪಂದ್ಯ ಗೆಲ್ಲಿಸಿದ ಹೆಟ್ಮೆಯರ್
​ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ..!
​ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ..!
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ