AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ದಿನಭವಿಷ್ಯ; ಅಂದುಕೊಂಡಷ್ಟು ಸಫಲತೆಯನ್ನು ಇಂದು ಸಾಧಿಸಲಿದ್ದೀರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ಅಕ್ಟೋಬರ್ 01) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ದಿನಭವಿಷ್ಯ; ಅಂದುಕೊಂಡಷ್ಟು ಸಫಲತೆಯನ್ನು ಇಂದು ಸಾಧಿಸಲಿದ್ದೀರಿ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Oct 01, 2023 | 12:45 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ಅಕ್ಟೋಬರ್ 01) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವ್ಯಾಘಾತ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06-23ಕ್ಕೆ, ಸೂರ್ಯಾಸ್ತ ಸಂಜೆ 06 – 21ಕ್ಕೆ, ರಾಹು ಕಾಲ ಸಂಜೆ 04:52 – 06:21ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 12:22 – 01:52ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 03:22 – 04:52ರ ವರೆಗೆ.

ಧನು ರಾಶಿ : ಅಂದುಕೊಂಡಷ್ಟು ಸಫಲತೆಯನ್ನು ಇಂದು ಸಾಧಿಸಲಿದ್ದೀರಿ. ಆರ್ಥಿಕವಾದ ಸಂತೃಪ್ತಿಯು ನಿಮ್ಮ ಮುಖದಲ್ಲಿ ಕಾಣುವುದು. ಇಂದಿನ ಪ್ರಯಾಣವು ನಿಮಗೆ ಸಮಾಧಾನ ನೀಡದು. ಅನ್ಯರು ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪ ಮಾಡಲಿದ್ದು ನಿಮಗೆ ಸಹಿಸಲಾಗದು. ಹಳೆಯ ನೆನಪುಗಳು ನಿಮ್ಮ ಕಾಡುವುವು. ಇಂದು ನೀವು ಆಕರ್ಷಕ ವ್ಯಕ್ತಿಗಳಾಗಿ ಕಾಣುರುವಿರಿ. ಕೃಷಿಯ ಕೆಲಸದಲ್ಲಿ ನಿಮ್ಮ ಉತ್ಸಾಹ ಕಡಿಮೆ ಇರುವುದು. ಕುಶಲ ಕರ್ಮಗಳಲ್ಲಿ ಆಸಕ್ತಿಯು ಹೆಚ್ಚಿರುವುದು. ನಿಮಗೆ ಶೋಧನೆಯ ಕಾರ್ಯವು ಹೆಚ್ಚಿನ‌ ಇಷ್ಟವಾಗುವುದು. ಕೆಲವರು ನಿಮ್ಮ ನಂಬಿಕೆಯನ್ನು ಘಾಸಿಗೊಳಿಸಬಹುದು. ನಿಮಗೆ ನಿಜವಾದ ಮಿತ್ರರ ಅರಿವಾಗುವುದು.

ಮಕರ ರಾಶಿ : ಇಂದು ಇನ್ನೊಬ್ಬರ ಮಾತು ನಿಮಗೆ ಸಮಾಧಾನ ತರಿಸದು. ಯಾರ ಮಾತನ್ನೂ ನೀವು ಕೇಳಲಾರಿರಿ. ಉದ್ಯೋಗದಲ್ಲಿ ನಿಮ್ಮ ಸ್ಥಾನವು ಬದಲಾಗುವುದು. ಸಮಯವೂ ಬದಲಾಗಲಿದ್ದು ಹೊಂದಿಕೊಳ್ಳುವುದು ಕಷ್ಟವಾದೀತು. ಆತ್ಮಿಯರ ಜೊತೆ ಮಾತುಕತೆಗೆ ಇಳಿಯುವಿರಿ. ದಾಂಪತ್ಯದಲ್ಲಿ ಸ್ವಪ್ರತಿಷ್ಠೆಯು ಕಾಣಿಸಿಕೊಳ್ಳಬಹುದು. ಬಂಧುಗಳು ನಿಮ್ಮ ಕಷ್ಟಕ್ಕೆ ನೆರವಾಗುವರು. ಹೊಸ ಪರಿಚಯದಲ್ಲಿ ಆತ್ಮೀಯತೆ ಬೆಳೆಯುವುದು. ಅತಿಯಾದ ಆಸೆಯಿಂದಾಗಿ ದುಃಖಿಸಬೇಕಾದೀತು. ಸಿಕ್ಕ ಅವಕಾಶದಿಂದ ವಂಚಿತರಾಗಿ ನೋಯುವಿರಿ. ಸ್ತ್ರೀಯರ ಜೊತೆ ಮಾತನಾಡುವುದು ನಿಮಗೆ ಕಷ್ಟವಾದೀತು. ನಿಮ್ಮ ಇಂದಿನ ಎಲ್ಲ ಕೆಲಸಗಳೂ ವಿಳಂಬವಾಗುವುದು.

ಕುಂಭ ರಾಶಿ : ನಿಮ್ಮ ಸ್ಥಿರಾಸ್ತಿಯಿಂದ ಲಾಭವನ್ನು ಗಳಿಸುವಿರಿ. ಧಾರ್ಮಿಕ ಆಚರಣೆಗಳಲ್ಲಿ ನಿಮಗೆ ಶ್ರದ್ಧೆಯು ಅಧಿಕವಾಗಿ ಇರುವುದು. ನೀವು ಕೇಳಿದ ಸಾಲವು ನಿಮಗೆ ದೊರೆಯಬಹುದು. ಖರ್ಚಿನ ವಿಚಾರದಲ್ಲಿ ಕೈ ಹಿಂದೆ ಮಾಡುವುದು ಒಳ್ಳೆಯದು. ಜವಾಬ್ದಾರಿಗಳಿಂದ ನೀವು ಮುಕ್ತರಾಗಿ ಸಂತೋಷಿಸುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ಕೊಡುವರು. ನಿಮ್ಮ ನಡವಳಿಕೆಯು ನಿಮ್ಮನ್ನು ಉನ್ನತ ಸ್ಥಾನಕ್ಕೆ ಕರೆದೊಯ್ಯುವುದು. ಕಛೇರಿಯ ಕೆಲಸಗಳನ್ನು ಯಾವದೇ ನಿರ್ಬಂಧವಿಲ್ಲದೇ ಮಾಡುವಿರಿ. ಅನಾರೋಗ್ಯದ ಕಾರಣಕ್ಕಡ ಹಣವನ್ನು ಖರ್ಚು ಮಾಡಬೇಕಾಗುವುದು. ಸಮಯಕ್ಕೆ ಸರಿಯಾಗಿ ನಿಮ್ಮ ಕಾರ್ಯವನ್ನು ಮಾಡಲು ಯಾರಾದರೂ ಸಿಗುವರು. ನಿಮ್ಮ ಮೌನವನ್ನು ಮುರಿದು ಅಭಿಪ್ರಾಯವನ್ನು ತಿಳಿಸಿ.

ಮೀನ ರಾಶಿ : ನೀವು ಬಯಸದಿದ್ದರೂ ನಿಮಗೆ ಪ್ರಶಂಸೆ ಸಿಗಲಿದೆ. ತಿರುಗಾಟದಲ್ಲಿರುವ ನಿಮ್ಮನ್ನು ಕಂಡು ಮನೆಯಲ್ಲಿ ಬೇಸರ ವ್ಯಕ್ತಪಡಿಸಬಹುದು. ನಿಮಗೆ ಅಧಿಕ‌ ಖರ್ಚು ಎಂದು ಕಂಡರೆ ಅದನ್ನು ಮಾಡದೇ ಇರುವುದು ಉತ್ತಮ. ಇಂದು ನೀವು ಕುಟುಂಬಕ್ಕೆ ಯಾವುದೇ ಕೊರತೆ ಆಗದಂತೆ ನೀವು ನೋಡಿಕೊಳ್ಳಬೇಕಾಗುವುದು. ಪ್ರೇಮಜೀವನಕ್ಕೆ ನಿಮಗೆ ಒಗ್ಗದು. ಬಂಧನದಂತೆ ಅನ್ನಿಸಬಹುದು. ಸಂಗಾತಿಯ ಆಲೋಚನೆಗಳು ನಿಮಗೆ ಇಷ್ಟವಾಗಬಹುದು. ಸಂತೋಷವಾಗುವಂತೆ ಇರುವಿರಿ. ಬೇಕಾದ ವಸ್ತುವನ್ನು ಕೇಳಿ ಪಡೆಯಿರಿ. ಗೆಳೆತನವು ನಿಮಗೆ ಮತ್ತಷ್ಟು ಸುಖವನ್ನು ಕೊಡುವುದು. ನೆನಪಿನ ಶಕ್ತಿಯು ಕಡಿಮೆ ಆದಂತೆ ಅನ್ನಿಸಬಹುದು.

-ಲೋಹಿತಶರ್ಮಾ – 8762924271 (what’s app only)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ