AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ವಿಳಂಬವಾಗಿಯಾದರೂ ವಿವಾಹವು ನಡೆಯಲಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಆಗಸ್ಟ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯವರಿಗೆ ವಿಳಂಬವಾಗಿಯಾದರೂ ವಿವಾಹವು ನಡೆಯಲಿ
ಇಂದಿನ ದಿನಭವಿಷ್ಯImage Credit source: freepik
TV9 Web
| Updated By: Rakesh Nayak Manchi|

Updated on: Aug 04, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಕೆಲವರು ಬೆಳಗ್ಗೆ ಎದ್ದ ಕೂಡಲೇ ರಾಶಿ ಭವಿಷ್ಯ (Daily horoscope) ತಪ್ಪದೇ ನೋಡುತ್ತಾರೆ. ಯಾವ ಸಮಯಕ್ಕೆ ಏನು ಮಾಡಬೇಕು, ಏನು ಮಾಡಬಾರದು? ಹೀಗೆ ನಿತ್ಯಭವಿಷ್ಯದಿಂದ ತಿಳಿದುಕೊಳ್ಳುತ್ತಾರೆ. ಅದರ ಜೊತೆಗೆ ನಿತ್ಯಪಂಚಾಂಗ ಕೂಡ ಓದುತ್ತಾರೆ. ಹಾಗಾದರೆ ಇಂದಿನ (2023 ಆಗಸ್ಟ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ?, ಯಾರಿಗೆ ಲಾಭ?, ಯಾರಿಗೆ ನಷ್ಟ?, ಯಾರಿಗೆ ಶುಭ, ಅಶುಭ? ಇಲ್ಲಿ ನೋಡಿ ನಿಮ್ಮ ಭವಿಷ್ಯ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕರ್ಕಾಟಕ ಮಾಸ, ಮಹಾನಕ್ಷತ್ರ: ಆಶ್ಲೇಷಾ, ಮಾಸ: ಅಧಿಕ ಶ್ರಾವಣ, ಪಕ್ಷ: ಕೃಷ್ಣ, ವಾರ: ಶುಕ್ರ, ತಿಥಿ: ತೃತೀಯಾ, ನಿತ್ಯನಕ್ಷತ್ರ: ಪೂರ್ವಾಭಾದ್ರ, ಯೋಗ: ಸೌಭಾಗ್ಯ, ಕರಣ: ಗರಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 17 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 59 ನಿಮಿಷಕ್ಕೆ. ರಾಹು ಕಾಲ ಬೆಳಗ್ಗೆ 11:03 ರಿಂದ 12 :38ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 03:49 ರಿಂದ ಸಂಜೆ 05:24ರ ವರೆಗೆ, ಗುಳಿಕ ಕಾಲ ಬೆಳಗ್ಗೆ 07:53 ರಿಂದ 09:28ರ ವರೆಗೆ.

ಧನು ರಾಶಿ: ವಿಳಂಬವಾಗಿಯಾದರೂ ವಿವಾಹವು ನಡೆಯಲಿದ್ದು, ನಿಮಗೆ ಸಂತೋಷವಾಗಲಿದೆ. ಮಕ್ಕಳ ವಿವಾಹಕ್ಕಾಗಿ ಓಡಾಟ ಮಾಡುವಿರಿ. ದಾಂಪತ್ಯದಲ್ಲಿ ಬರುವ ಕಲಹವನ್ನು ನೀವು ಶಾಂತಗೊಳಿಸಿಕೊಳ್ಳಿ. ನಿಮಗೆ ಸ್ವಾಭಿಮಾವನ್ನು ಬಿಟ್ಟು ವ್ಯವಹರಿಸುದು ಕಷ್ಟವಾದೀತು.‌ ನಾಚಿಕೆಯ ಸ್ವಭಾವದಿಂದ ನೀವು ಹಲವು ವಿಚಾರವನ್ನು ಕಳೆದುಕೊಳ್ಳುವಿರಿ. ಕೆಲವರ ಮಾತುಗಳನ್ನು ನೀವು ವಿರೋಧಿಸುವಿರಿ. ನಿಮಗೆ ಆಗದವರ ಬಗ್ಗೆ ನಿಮ್ಮ ನಿಲುವು ಹಾಗೆಯೇ ಇರಲಿದೆ. ಸಾಮಾಜಿಕ ಗೌರವವನ್ನು ನೀವು ಬಯಸುವಿರಿ. ಹಳೆಯ ಪ್ರೇಮವು ನಿಮಗೆ ತೊಂದರೆಯನ್ನು ಕೊಡಬಹುದು. ಚಾಲಕವೃತ್ತಿಯರಿಗೆ ಶುಭ ಸುದ್ದಿಯು ಇರಲಿದೆ.

ಮಕರ ರಾಶಿ: ಆರ್ಥಿಕತೆಯು ಅಭಿವೃದ್ಧಿಯ ಕಡೆಗೆ ಸಾಗುವುದು ನಿಮಗೆ ಸಂತೋಷವನ್ನು ಕೊಡಲಿದೆ. ಕುಟುಂಬದಿಂದ ನಿಮಗೆ ಶುಭ ವಾರ್ತೆಯು ಬರಬಹುದು. ನಿಮ್ಮ ವರ್ತನೆಯಲ್ಲಿ ಬಹಳ ವ್ಯತ್ಯಾಸವು ಇರಲಿದೆ. ಹಿತಶತ್ರುಗಳನ್ನು ನಡವಳಿಕೆಯ ಮೂಲಕ ಗುರುತಿಸುವಿರಿ. ನಿಮ್ಮ ಸಹೋದರನಿಂದ ಹೊಸ ಉದ್ಯೋಗಕ್ಕೆ ಸೇರಿಕೊಳ್ಳಲು ಸಹಾಯವಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಇಟ್ಟ ಹಣವು ಸಾಕಾಗದು.‌ ಇಂದು ನೀವು ಅಂದುಕೊಂಡಷ್ಟು ಕೆಕಸವು ಆಗುವತನಕ ನಿಮ್ಮ ಹಠವು ಇರಲಿದೆ. ಚಿತ್ರಕಾರರಿಗೆ ಉತ್ತಮ ಅವಕಾಶಗಳು ಸಿಗಬಹುದು.

ಕುಂಭ ರಾಶಿ: ಬಂಧುಗಳಿಗೆ ಆರ್ಥಿಕವಾಗಿ ಸಹಾಯವನ್ನು ಮಾಡುವಿರಿ. ಹಳೆಯ ತಪ್ಪಿಗೆ ನೀವು ಇಂದು ಪಶ್ಚಾತ್ತಾಪ ಪಡಬೇಕಾದೀತು. ಅಭಿವೃದ್ಧಿಯ ಕೆಲಸಗಳು ನಿಧಾನವಾಗಿ ಸಾಗುವುದು. ಪ್ರಯಾಣದಲ್ಲಿ ನೀವು ತೊಂದರೆಯನ್ನು ಅನುಭವಿಸುವಿರಿ. ಇಂದು ನಿಮ್ಮ ಆತುರದ ತೀರ್ಮಾನಗಳು ಹಲವು ಗೊಂದಲೆಗಳಿಗೆ ಕಾರಣವಾಗುವುದು. ಯಾವ ಒತ್ತಡಕ್ಕೂ ಸಿಲುಕದೇ ನೆಮ್ಮದಿಯಿಂದ ಕಾರ್ಯವನ್ನು ಮಾಡಿ. ನಿಮ್ಮ ಸಾಲವು ಮರಳಿಬರಬಹುದು. ನಿಮ್ಮ ಮನೋಗತವನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಅನಗತ್ಯ ಖರ್ಚನ್ನು ಕಡಿಮೆ‌ ಮಾಡಲು ಸಂಗಾತಿಗೆ ಸೂಚಿಸುವಿರಿ. ನಕಾರಾತ್ಮಕ ಧೋರಣೆಗಳು ಅಧಿಕವಾಗಿ ಇರಬಹುದು.

ಮೀನ ರಾಶಿ: ಸ್ಥಿರಾಸ್ತಿಯ ಉಳಿಸಿಕೊಳ್ಳಲು ನೀವು ಬಹಳ ಹೋರಾಟವನ್ನು ಮಾಡಬೇಕಾದೀತು. ಬಂಧುಗಳ ಬಳಿ ನೀವು ಸಾಲಕ್ಕೆ ಕೈ ಚಾಚಬೇಕಾಗಬಹುದು. ಮನೆ ಕೆಲಸದಲ್ಲಿ ನೀವು ಮಗ್ನರಾಗುವಿರಿ. ನಿಮ್ಮ ವಸ್ತುಗಳ ಮೇಲೆ ನಿಮಗೆ ಹಿಡಿತವಿರಲಿ. ಸಂಗಾತಿಯ ವರ್ತನೆಯನ್ನು ನೀವು ಪ್ರಶ್ನಿಸುವಿರಿ. ನಿಮ್ಮ ಕೆಲಸವನ್ನು ಬೇರೆಯವರು ಮಾಡಿ ಮುಗಿಸುವರು. ಅತಿಯಾದ ಸಾಲಬಾಧೆಯು ನಿಮ್ಮ ನೆಮ್ಮದಿಯನ್ನು ನಷ್ಟಮಾಡೀತು. ಸ್ನೇಹಿತರು ನಿಮ್ಮ ಜೊತೆಗಿದ್ದು ಎಲ್ಲ ವಿಚಾರದಲ್ಲಿ ಜೊತೆಯಾಗುವರು.‌ ಉದ್ವೇಗಕ್ಕೆ ಒಳಗಾಗದೇ ಸಮಾಧಾನದಿಂದ ಇರಿ. ದುರಭ್ಯಾಸದಿಂದ ಆರೋಗ್ಯವು ಕೆಡಬಹುದು. ಹೆಚ್ಚು ಲಾಭವನ್ನು ಗಳಿಸುವ ತುಡಿತವು ಅಧಿಕವಾಗುವುದು.

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ