AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ರಾಶಿಭವಿಷ್ಯ, ಈ ರಾಶಿಯ ವಿದ್ಯಾರ್ಥಿಗಳಿಗೆ ಉತ್ತಮ ದಿನ, ನಿರ್ಧರಿಸಿದ ಗುರಿಯನ್ನು ಪಡೆಯುವಿರಿ

ನೀವು ಧನು, ಮಕರ, ಕುಂಭ, ಮೀನ ರಾಶಿಯವರೇ? ಹಾಗಿದ್ದರೆ ಇಂದಿನ (2023 ಸೆಪ್ಟೆಂಬರ್ 04) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

Horoscope: ರಾಶಿಭವಿಷ್ಯ, ಈ ರಾಶಿಯ ವಿದ್ಯಾರ್ಥಿಗಳಿಗೆ ಉತ್ತಮ ದಿನ, ನಿರ್ಧರಿಸಿದ ಗುರಿಯನ್ನು ಪಡೆಯುವಿರಿ
ದಿನಭವಿಷ್ಯImage Credit source: iStock Photo
TV9 Web
| Updated By: Rakesh Nayak Manchi|

Updated on: Sep 04, 2023 | 12:45 AM

Share

ರಾಶಿ ಭವಿಷ್ಯ ಪ್ರತಿಯೊಬ್ಬರ ಜೀವನದಲ್ಲಿ ವಿಭಿನ್ನವಾಗಿರುತ್ತದೆ. ಪ್ರತಿನಿತ್ಯ ಬೆಳಗ್ಗೆ ಎದ್ದ ಕೂಡಲೇ ತಮ್ಮ ರಾಶಿ ಭವಿಷ್ಯ (Daily horoscope) ನೋಡುವುದು ಕೆಲವರಿಗೆ ಅಭ್ಯಾಸ. ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಹೀಗೆ ಎಲ್ಲವನ್ನು ತಿಳಿದುಕೊಳ್ಳುತ್ತಾರೆ. ಜೊತೆಗೆ ಪಂಚಾಂಗವನ್ನು ಸಹ ಓದುತ್ತಾರೆ. ಹಾಗಾದರೆ ಇಂದಿನ (2023 ಸೆಪ್ಟೆಂಬರ್ 04) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಸಿಂಹ ಮಾಸ, ಮಹಾನಕ್ಷತ್ರ: ಉತ್ತರಾಫಲ್ಗುಣೀ, ಮಾಸ: ನಿಜ ಶ್ರಾವಣ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ಚತುರ್ಥೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ: ವೃದ್ಧಿ, ಕರಣ: ಬವ, ಸೂರ್ಯೋದಯ ಬೆಳಗ್ಗೆ 06 ರಿಂದ 21 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ರಿಂದ 41 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:54 ರಿಂದ 09:27ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:59 ರಿಂದ ಮಧ್ಯಾಹ್ನ 12:32ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 02:04 ರಿಂದ 03:37 ರ ವರೆಗೆ.

ಧನು ರಾಶಿ: ಅನವಶ್ಯಕ ಸಾಲಗಳಿಂದ ದೂರವಿರಿ. ಉದ್ಯೋಗಸ್ಥ ದಂಪತಿಗೆ ಒಂದೇ ಕಡೆ ವರ್ಗಾವಣೆಯಾಗಬಹುದು. ಗೃಹ ನಿರ್ಮಾಣದ ಕಾರ್ಯ ಮುಂದೂಡುವುದು ಉತ್ತಮ. ಹಳೆ ಮಿತ್ರರನ್ನು ಭೇಟಿಯಾಗುವಿರಿ. ಸರ್ಕಾರಿ ನೌಕರರಿಗೆ ಹೆಚ್ಚಿನ ಗಳಿಕೆಯಾಗಲಿದೆ. ನಿಮ್ಮ ಮನೆಯಲ್ಲಿ ಮಂಗಳ ಕಾರ್ಯಕ್ಕೆ ತಯಾರಿ ಆರಂಭವಾಗುವುದು. ಹಳೆ ರೋಗಗಳು ಮರುಕಳಿಸದಂತೆ ಎಚ್ಚರ ವಹಿಸಿ. ನಿಮ್ಮ ಆಸೆಯನ್ನು ಈಡೇರಿಸಲು ಬಹಳಷ್ಟು ಪ್ರಯತ್ನವನ್ನು ಮಾಡಬೇಕಾಗುತ್ತದೆ. ವೃತ್ತಿ ಜೀವನದ ಬಗ್ಗೆ ಮಾತನಾಡಿದರೆ, ಈ ದಿನ ನಿಮಗೆ ಉತ್ತಮ ಅವಕಾಶಗಳು ಸಿಗುತ್ತವೆ. ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಧ್ಯವಾಗುತ್ತದೆ.

ಮಕರ ರಾಶಿ: ಆಸ್ತಿ ಹಂಚಿಕೆ ವಿಚಾರದಲ್ಲಿ ಬುದ್ಧಿವಂತಿಕೆಯಿಂದ ವರ್ತಿಸುವಿರಿ. ಹೆಚ್ಚಲಿರುವ ಆದಾಯದಿಂದ ದುರಭ್ಯಾಸವನ್ನು ಬೆಳೆಸಿಕೊಳ್ಳುವಿರಿ. ಶಿಕ್ಷಕರಿಗೆ ವೇತನದಲ್ಲಿ ಹೆಚ್ಚಳವಾಗಲಿದೆ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ. ಅವಿವಾಹಿತರಿಗೆ ಕಂಕಣಬಲ ಕೂಡಿಬರುವುದು. ನಿಮ್ಮ ಮಕ್ಕಳ ನಡವಳಿಕೆಯಿಂದ ಬೇಸರ ಆಗುವ ಸಾಧ್ಯತೆ ಇದೆ. ತಾಳ್ಮೆಯಿಂದ ವರ್ತಿಸಿ. ನೀವು ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ, ಆದರೆ ಪ್ರವಾಸದ ಸಮಯದಲ್ಲಿ ಜಾಗರೂಕರಾಗಿರಬೇಕು. ಏಕೆಂದರೆ ನಿಮ್ಮೊಂದಿಗೆ ಅಪಘಾತ ಸಂಭವಿಸಭುದು. ತಂದೆಯ ಆರೋಗ್ಯವು ಹದಗೆಡಬಹುದು. ಆದ್ದರಿಂದ ಅವರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ಬೇಕು.  ಸಹದ್ಯೋಗಿ ಅಥವಾ ಸಂಬಂಧಿಕರ ಬೆಂಬಲವನ್ನು ನೀವು ಪಡೆಯಬಹುದು. ಈ ದಿನ ನೀವು ಆಕಸ್ಮಿಕವಾಗಿ ಹಣವನ್ನು ಕೂಡ ಪಡೆಯಬಹುದು.

ಕುಂಭ ರಾಶಿ: ನಿಮ್ಮ ಬದುಕಿನಲ್ಲಿ ಬದಲಾವಣೆ ಅನಿವಾರ್ಯವಾಗಿ ಮಾಡಿಕೊಳ್ಳುವಿರಿ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು. ಸಹೋದ್ಯೋಗಿಗಳಿಗೆ ಸಹಕರಿಸುವಿರಿ. ಮೋಜಿನ ಸುತ್ತಾಟವು ಹೆಚ್ಚಾಗಬಹುದು. ಕಾನೂನು ಸಲಹೆಗಾರರಿಗೆ ಆದಾಯ ಹೆಚ್ಚಲಿದೆ. ಆಹಾರ ಸೇವನೆಯಿಂದ ಅನಾರೋಗ್ಯ ಕಾಡುವ ಸಾಧ್ಯತೆ ಇದೆ. ಬಂಧುಗಳ ಜೊತೆ ವಾಗ್ವಾದ ಬೇಡ ಇಂದು. ಇಂದು ಗಳಿಕೆಗಾಗಿ ಯಾವುದೇ ರೀತಿಯ ಹೂಡಿಕೆ ಮಾಡಬೇಡಿ, ಇಲ್ಲದಿದ್ದರೆ ಆರ್ಥಿಕ ಸವಾಲುಗಳನ್ನು ಎದುರಿಸಬೇಕಾಗಬಹುದು. ವೈವಾಹಿಕ ಜೀವನವು ಸುಖ ಶಾಂತಿಯಿಂದ ತುಂಬಿರುತ್ತದೆ ಮತ್ತು ಯಾವುದೇ ಪ್ರಕಾರದ ದೊಡ್ಡ ತೊಂದರೆಯು ಬಾಧಿಸದು.

ಮೀನ ರಾಶಿ: ಖಾಸಗಿ ಕಂಪನಿ ಉದ್ಯೋಗಿಗಳ ವೇತನವು ಹೆಚ್ಚಾಗುವುದು. ನಿಮ್ಮ ವರ್ಗಾವಣೆಯು ಅನಿವಾರ್ಯವಾಗಬಹುದು. ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಖರ್ಚು ಆಗುವುದು. ವ್ಯವಹಾರದಲ್ಲಿ ಹೆಚ್ಚಿನ ಲಾಭ ಬರುವುದು. ಪ್ರಸಾರ ಮಾಧ್ಯಮದವರಿಗೆ ಅನವರತ ಕಾರ್ಯಗಳು ಇರುವುದು. ಸಾಹಿತಿಗಳಿಗೆ ಸನ್ಮಾನ ಸಿಗುವುದು. ಅವಿವಾಹಿತರಿಗೆ ಕಂಕಣಬಲ ಪ್ರಾಪ್ತವಾಗಬಹುದು. ಬಂಡವಾಳದಿಂದ ಹೆಚ್ಚಿನ ಲಾಭವಿದೆ. ವಿವಾದ ಅಥವಾ ಜಗಳವಾಗುವ ಸಾಧ್ಯತೆ ಇದೆ. ಆದರೆ ಜಾಗರೂಕತೆ ಮತ್ತು ಬುದ್ಧಿವಂತಿಕೆಯಿಂದ ನಡೆದರೆ ಸಮಸ್ಯೆಗಳನ್ನು ನಿವಾರಿಸಬಹುದು. ವಿದ್ಯಾರ್ಥಿಗಳಿಗೆ ಈ ದಿನ ಉತ್ತಮವಾಗಲಿದೆ, ನಿರ್ಧರಿಸಿದ ಗುರಿಯನ್ನು ಪಡೆಯುವಿರಿ.

ಮತ್ತಷ್ಟು ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ