AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರಿಗೆ ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ

ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದು, ಬೆಳಗ್ಗೆ ಎದ್ದು ಕೂಡಲೇ ನಿಮ್ಮ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅಭ್ಯಾಸ ಇದೆಯೇ? ಹಾಗಿದ್ದರೆ ಇಂದಿನ (2023 ನವೆಂಬರ್​ 06) ಭವಿಷ್ಯದಲ್ಲಿ ನಿಮ್ಮ ರಾಶಿ ಫಲ ಹೇಗಿದೆ? ಲಾಭ, ನಷ್ಟ, ಶುಭ, ಅಶುಭ ಇದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ತಿಳಿದುಕೊಳ್ಳಿ.

Horoscope: ಈ ರಾಶಿಯವರಿಗೆ ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ
ರಾಶಿ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Nov 06, 2023 | 12:45 AM

Share

ಇಂದಿನ ರಾಶಿ ಭವಿಷ್ಯ ಹೇಗಿದೆ? ಹಾಗೂ ಯಾವ ಸಮಯಕ್ಕೆ ಏನು ಮಾಡಬೇಕು ಮತ್ತು ಏನು ಮಾಡಬಾರದು? ಇದರ ಜೊತೆಗೆ ಪಂಚಾಂಗ ಹೇಗಿದೆ? ಎಂಬುದನ್ನು ಒಂದಷ್ಟು ಮಂದಿ ನೋಡುತ್ತಾರೆ. ಹಾಗಾದರೆ ಇಂದಿನ (2023 ನವೆಂಬರ್​ 06) ರಾಶಿ ಭವಿಷ್ಯದಲ್ಲಿ ಯಾರ ರಾಶಿ ಫಲ ಹೇಗಿದೆ, ಯಾರಿಗೆ ಲಾಭ ಕಾದಿದೆ, ಯಾರಿಗೆ ನಷ್ಟ ಕಾದಿದೆ ಹಾಗೂ ಯಾರಿಗೆ ಶುಭ, ಅಶುಭ? ಮಾಹಿತಿ ಇಲ್ಲಿದೆ.

ನಿತ್ಯಪಂಚಾಂಗ: ಶಾಲಿವಾಹನ ಶಕೆ 1946, ಶೋಭಕೃತ್ ಸಂವತ್ಸರ, ದಕ್ಷಿಣಾಯನ, ಶರತ್ ಋತು, ತುಲಾ ಮಾಸ, ಮಹಾನಕ್ಷತ್ರ: ಸ್ವಾತೀ, ಮಾಸ: ಆಶ್ವಯುಜ, ಪಕ್ಷ: ಕೃಷ್ಣ, ವಾರ: ಸೋಮ, ತಿಥಿ: ನವಮೀ, ನಿತ್ಯನಕ್ಷತ್ರ: ಆಶ್ಲೇಷಾ, ಯೋಗ: ಪ್ರೀತಿ, ಕರಣ: ತೈತಿಲ, ಸೂರ್ಯೋದಯ ಬೆಳಗ್ಗೆ 06 ಗಂಟೆ 30 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 01 ನಿಮಿಷಕ್ಕೆ, ರಾಹು ಕಾಲ ಬೆಳಗ್ಗೆ 07:57 ರಿಂದ 09:23 ರ ವರೆಗೆ, ಯಮಘಂಡ ಕಾಲ ಬೆಳಗ್ಗೆ 10:50 ರಿಂದ ಮಧ್ಯಾಹ್ನ 12:16 ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 01:43 ರಿಂದ 03:09ರ ವರೆಗೆ.

ಧನು ರಾಶಿ : ಎಂದೋ ಮಾಡಿದ ಕೆಲಸವು ಇಂದು ನಿಮ್ಮ ಕಾಲಿಗೆ ಸುತ್ತಿಕೊಳ್ಳುವುದು. ಇನ್ನೊಬ್ಬರ ಅನುಭವವು ನಿಮಗೆ ಪಾಠವಾಗಬಹುದು. ಭೂಮಿಯ ಲಾಭದ ವಿಚಾರದಲ್ಲಿ ಸರಿಯಾದ ಮಾತುಕತೆಗಳು ಆಗಲಿ. ಆರೋಪ ಪ್ರತ್ಯಾರೋಪಗಳಿಂದ ಪರಸ್ಪರ ಕಲಹವೂ ಆಗುವುದು. ದುಸ್ಸಾಧ್ಯ ಎನಿಸಿದ ಕಾರ್ಯವನ್ನು ಮಾಡಲು ಪ್ರಯತ್ನಿಸುವುದು ಬೇಡ. ಸ್ಥಿರಾಸ್ತಿಯನ್ನು ಮಾರಾಟ ಮಾಡುವ ಪ್ರಯತ್ನದಲ್ಲಿ ಇರುವಿರಿ. ಇಂದಿನ ಮನೆಯ ಕೆಲಸದಿಂದ ನಿಮಗೆ ಶ್ರಮವಾಗುವುದು. ಹಳೆಯ ಆಸೆಯನ್ನು ನೀವು ತೀರಿಸಿಕೊಳ್ಳುವ ಅವಕಾಶವಿರಲಿದೆ. ‌ಇಂದು ನಿಮ್ಮ ಅನಗತ್ಯ ಮಾತುಗಳು ಕಲಹಕ್ಕೆ ಕಾರಣವಾಗಬಹುದು. ನಿಮ್ಮ ನಂಬಿಕೆಗೆ ಘಾಸಿಯಾಗಬಹುದು. ಇನ್ನೊಬ್ಬರ ವಸ್ತುಗಳನ್ನು ನೀವು ಹಾಳು ಮಾಡುವಿರಿ. ಕಳ್ಳತನದ ಅಪವಾದವು ಬರಬಹುದು. ಮಹಾಲಕ್ಷ್ಮಿಯ ಉಪಾಸನೆಯನ್ನು‌ ಮಾಡಿ.

ಮಕರ ರಾಶಿ : ಇಂದು ನಿಮಗೆ ಮಹಿಳೆಯರಿಂದು ಅವಮಾನವು ಆಗಬಹುದು. ಆಪ್ತರಿಗಾಗಿ ಕೊಟ್ಟ ಸಮಯವೂ ವ್ಯರ್ಥವಾದೀತು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಉದ್ಯಮವು ಬೆಳೆಯುತ್ತಿರುವುದು ಸಂತೋಷ ಕೊಡುವುದು. ಚಾಲಕರಿಗೆ ಕರ್ತವ್ಯಕ್ಕೆ ಪ್ರಶಂಸೆ ಸಿಗುವುದು. ಅಪರಿಚಿತರಿಗೆ ನೀವು ಹಣವನ್ನು ಕೊಡುವಿರಿ. ಅರಿವಿಲ್ಲದೆ ಇಂದಿನ ತುರ್ತು ಕಾರ್ಯವನ್ನು ಮರೆಯುವಿರಿ. ಅಸಹಜ ವರ್ತನೆಯಿಂದ ಸಂಗಾತಿಗೆ ಅನುಮಾನ ಬರುವುದು. ಮನೆಯ ಹಿರಿಯರನ್ನು ಅನಾದರದಿಂದ ನೋಡುವುದು ಯೋಗ್ಯವಾಗದು. ಅಧಿಕಾರದಿಂದ ಅಹಂಕಾರವು ಹೆಚ್ಚಾದೀತು. ನಿಮ್ಮ ಕಛೇರಿಯಲ್ಲಿ ಉಂಟಾದ ಅಸಮಾಧಾನವನ್ನು ಆಪ್ತರ ಜೊತೆ ಹಂಚಿಕೊಳ್ಳಿ. ಮೇಲಧಿಕಾರಿಗಳು ನಿಮ್ಮನ್ನು ಹಿಂಸಿಸಬಹುದು. ರಘುನಾಥನ ಸ್ತುತಿಯನ್ನು ಮಾಡಿ.

ಕುಂಭ ರಾಶಿ : ಬೇರೆಯವರ ಮನಸ್ತಾಪವನ್ನು ಸರಿ ಮಾಡಲು ನಿಮಗೆ ಉತ್ಸಾಹವು ಇರಲಿದೆ‌. ಬಾಡಿಗೆ ಮನೆಯಲ್ಲಿ ಇರುವವರು ಬದಲಾವಣೆ ಮಾಡಬೇಕಾದ ಸ್ಥಿತಿಯು ಬರಬಹುದು. ಸರ್ಕಾರದ ನಿಮ್ಮ ಕೆಲಸವು ಬೇಗನೆ ಮುಗಿದುಹೋಗುವುದು. ಮಿತ್ರರ ಕಾರಣದಿಂದ ವೃಥಾ ಕಾಲಹರಣವಾಗಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರುವುದು. ಮಾರಾಟದ ವಿಚಾರವಾಗಿ ನೀವು ಬೇರೆ ಊರಿಗೆ ಹೋಗಬೇಕಾಗಬಹುದು. ಅವಿವಾಹಿತರಾಗಿರುವವರಿಗೆ ಕೊರಗು ಕಾಣಿಸವಹುದು. ನಿಮ್ಮ ಸ್ವಭಾವಕ್ಕೆ ಹೊಂದಿಕೊಳ್ಳುವ ಸಂಗಾತಿಯು ಸಿಗುವುದು ಕಷ್ಟವಾದೀತು. ಇಂದು ಮಾಡುವ ಪ್ರಯಾಣದಲ್ಲಿ ಅಪರಿಚಿತರ ಗೆಳೆತನವಾಗಬಹುದು. ನಿಮ್ಮ ಎಲ್ಲ ವಿವರಗಳನ್ನು ಇನ್ನೊಬ್ಬರ ಜೊತೆ ಹೇಳಿಕೊಳ್ಳುವುದು ಬೇಡ. ಶರೀರಕ್ಕೆ ಅಕಸ್ಮಾತ್ ಆಗಿ ಘಾಸಿಗಳಾಗಬಹುದು.

ಮೀನ ರಾಶಿ : ವಿದ್ಯಾರ್ಥಿಗಳ ಅಭ್ಯಾಸವನ್ನು ನೀವು ಗಮನಿಸಬೇಕಾಗುವುದು. ಸಹವಾಸದಿಂದ ದಾರಿಯು ಬದಲಾಗುವುದು ಸಾಧ್ಯತೆ ಇದೆ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ. ಇತರರಿಂದ ಗೌರವ ಪ್ರಾಪ್ತವಾಗಬಹುದು. ವ್ಯಾಪಾರದಲ್ಲಿ ಅಲ್ಪ ಲಾಭವೇ ಆದರೂ ನೆಮ್ಮದಿ ಇರಲಿದೆ. ಯಾರಿಗೋ ಸಹಾಯ ಮಾಡಲು ಹೋಗಿ ಆಪತ್ತಿನಲ್ಲಿ ಸಿಕ್ಕಿಕೊಳ್ಳಬಹುದು. ಸ್ನೇಹಿತರ ಜೊತೆ ನೋವನ್ನು ಹಂಚಿಕೊಂಡು ಸಮಾಧಾನ ತಂದುಕಳ್ಳುವಿರಿ. ತಂದೆಯ ಜೊತೆ ಅಪರೂಪದ ಸಮಾರಂಭಕ್ಕೆ ಹೋಗುವಿರಿ. ಖರೀದಿಯಲ್ಲಿ ನೀವು ಸ್ಥೂಲವಾಗಿ ಖರ್ಚನ್ನು ಅಂದಾಜಿಸಿಕೊಳ್ಳಿ. ಮಕ್ಕಳು ನಿಮ್ಮ ಬಳಿ ಹೊಸತನ್ನು ತಿಳಿದುಕೊಳ್ಳಲು ಬಯಸುವರು. ಆರ್ಥಿಕ ಸಂಕಷ್ಟವು ನಿಮ್ಮ ಮಾನಸಿಕ ಸ್ಥಿತಿಯನ್ನು ಹಾಳುಮಾಡುವುದು. ಕುಲದೇವರ ಆರಾಧನೆಯನ್ನು ಮಾಡುವುದು ಒಳ್ಳೆಯದು.

-ಲೋಹಿತಶರ್ಮಾ 8762924271 (what’s app only)

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ